Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....