Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...