Homeಮುಖಪುಟಬಸವ ಜಯಂತಿ: ಕನ್ನಡದಲ್ಲಿ ಟ್ವೀಟ್ ಮಾಡಿ ಗಮನ ಸೆಳೆದ ಮೋದಿ, ರಾಹುಲ್, ಕೇಜ್ರಿವಾಲ್

ಬಸವ ಜಯಂತಿ: ಕನ್ನಡದಲ್ಲಿ ಟ್ವೀಟ್ ಮಾಡಿ ಗಮನ ಸೆಳೆದ ಮೋದಿ, ರಾಹುಲ್, ಕೇಜ್ರಿವಾಲ್

- Advertisement -
- Advertisement -

ಸಮಾನಯತೆಯ ಹರಿಕಾರ, ಮಹಾನ್ ಮಾನವತಾವಾದಿ ಬಸವಣ್ಣನವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕನ್ನಡದಲ್ಲಿ ಶುಭಾಶಯ ಕೋರುವ ಮೂಲಕ ಗಮನ ಸೆಳೆದಿದ್ದಾರೆ.

“ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ” ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಬಸವಣ್ಣನವರ ಕುರಿತು 2020ರಲ್ಲಿ ಮಾಡಿದ ಭಾಷಣದ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ, “ಸರ್ವರಿಗೂ ಕಾಯಕಯೋಗಿ ಬಸವಣ್ಣನವರ ಜಯಂತಿಯ ಶುಭಾಶಯಗಳು. 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ” ಎಂದಿದ್ದಾರೆ.

ಅದೇ ರೀತಿಯಾಗಿ ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಕೂಡ ಕನ್ನಡದಲ್ಲಿ ಬಸವ ಜಯಂತಿಯ ಶುಭಾಶಯ ತಿಳಿಸಿದ್ದಾರೆ. “ಸಮಾನತೆಯ ಬೀಜ ಬಿತ್ತಿದ, ಶೋಷಣೆ, ಮೂಢನಂಬಿಕೆಗಳ ವಿರುದ್ಧ ಹೋರಾಡಿದ ವಿಶ್ವ ಗುರು ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲಾ ಮುನ್ನಡೆಯೋಣ. ಸರ್ವರಿಗೂ ಬಸವ ಜಯಂತಿಯ ಶುಭಾಶಯಗಳು” ಎಂದು ಬರೆದಿದ್ದಾರೆ.

ಇಂದು ಕರ್ನಾಟಕ ಮಾತ್ರವಲ್ಲದೆ ಪಕ್ಕದ ತೆಲಂಗಾಣ ರಾಜ್ಯದಲ್ಲಿಯೂ ಸಹ ಬಸವ ಜಯಂತಿ ಆಚರಣೆ ನಡೆದಿದೆ. ಇಂದು ರಾಜ್ಯದೆಲ್ಲೆಡೆ ಮಹಾತ್ಮ ಬಸವೇಶ್ವರ ಜಯಂತಿ ಆಚರಿಸುವಂತೆ ತೆಲಂಗಾಣ ಸರ್ಕಾರ ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಇನ್ನು ಮುಂದೆ ಅಕ್ಷಯ ತೃತೀಯದಂದು ಪ್ರತಿ ವರ್ಷ ತೆಲಂಗಾಣ ರಾಜ್ಯಾದ್ಯಂತ ಬಸವ ಜಯಂತಿ ನಡೆಯಲಿದೆ ಎಂದು ತೆಲಂಗಾಣ ಸರ್ಕಾರ ಘೋಷಿಸಿದೆ.

ಇದನ್ನೂ ಓದಿ: ಬಸವ ಜಯಂತಿ; ಇವ ನಮ್ಮವ ಇವ ನಮ್ಮವನೆಂದೆನ್ನುತ್ತಿಲ್ಲ ಯಾಕೆ?

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ. ಕಳೆದ ವರ್ಷ ಬಸವ ಜಯಂತಿಯ ದಿನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಕನ್ನಡದಲ್ಲಿ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಸಾವಿರಾರು ಕನ್ನಡ ಅಭಿಮಾನಿಗಳ ಮನಗೆದ್ದಿದ್ದರು.

ಬಸವ ಜಯಂತಿ ಶುಭಾಷಯಗಳು ಎಂಬ ವಾಕ್ಯಗಳಿಂದ ಆರಂಭವಾಗಿದ್ದ ಅವರ ಟ್ವೀಟ್‌ “ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮಹಾನ್‌ ಬಸವಣ್ಣನವರು ಮಾರ್ಗದರ್ಶಕರಾಗಲಿ. ನಾವು ವಿಭಜಿತವಾಗಿದ್ದರೆ ಈ ಸಾಂಕ್ರಾಮಿಕದ ವಿರುದ್ಧ ಜಯಿಸಲು ಸಾಧ್ಯವಿಲ್ಲ. ಗೆಲ್ಲಲ್ಲು ಅದು ನಮ್ಮ ಒಗ್ಗಟ್ಟನ್ನು ಕೇಳುತ್ತದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...