Homeಮುಖಪುಟ2022ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 150ನೇ ಸ್ಥಾನಕ್ಕೆ ಕುಸಿದ ಭಾರತ

2022ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 150ನೇ ಸ್ಥಾನಕ್ಕೆ ಕುಸಿದ ಭಾರತ

2021ರಲ್ಲಿ ಭಾರತದಲ್ಲಿ ಕನಿಷ್ಠ ಆರು ಪತ್ರಕರ್ತರನ್ನು ಕೊಲೆಗೈಯಲಾಗಿದೆ. 108 ಪತ್ರಕರ್ತರನ್ನು, 13 ಮಾಧ್ಯಮ ಸಂಸ್ಥೆಗಳನ್ನು ಟಾರ್ಗೆಟ್ ಮಾಡಲಾಗಿದೆ.

- Advertisement -
- Advertisement -

ರಿಪೋರ್ಟರ್ಸ್ ವಿತೌಟ್ ಬಾರ್ಡರ್ ಸಂಸ್ಥೆ ಪ್ರಕಟಿಸಿರುವ 2022ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತವು 150ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಭಾರತ 142ನೇ ಸ್ಥಾನ ಪಡೆದಿತ್ತು. ಆ ಮೂಲಕ ದೇಶದಲ್ಲಿ ಪತ್ರಕರ್ತರು ಅತಿ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂಬುದು ಬಹಿರಂಗವಾಗಿದೆ.

ವರದಿಯ ಪ್ರಕಾರ ನಾರ್ವೆ, ಡೆನ್ಮಾರ್ಕ್, ಸ್ವೀಡನ್ ಉತ್ತಮ ಪತ್ರಿಕಾ ಸ್ವಾತಂತ್ರ್ಯ ಹೊಂದಿರುವ ಮೊದಲ ಮೂರು ರಾಷ್ಟ್ರಗಳಾಗಿವೆ. ಉತ್ತರ ಕೊರಿಯಾ (180), ಎರಿಟ್ರಿಯಾ (179), ಇರಾನ್ (178) ಕಡೆಯ ಮೂರು ಸ್ಥಾನ ಪಡೆದು ಕೆಟ್ಟ ಸ್ಥಿತಿಗೆ ಉದಾಹರಣೆಗಳಾಗಿವೆ.

ಭಾರತದಲ್ಲಿ ಪತ್ರಕರ್ತರ ಶೋಚನೀಯ ಸ್ಥಿತಿ

ಈ ವರ್ಷದ ಫೆಬ್ರವರಿಯಲ್ಲಿ ರೈಟ್ಸ್ ಅಂಡ್ ರಿಸ್ಕ್ ಅನಾಲಿಸಿಸ್ ಗ್ರೂಪ್ (ಆರ್‌ಆರ್‌ಎಜಿ) ಬಿಡುಗಡೆ ಮಾಡಿದ ಇಂಡಿಯಾ ಪ್ರೆಸ್ ಫ್ರೀಡಂ ವರದಿಯ ಪ್ರಕಾರ, 2021ರಲ್ಲಿ ಭಾರತದಲ್ಲಿ ಕನಿಷ್ಠ ಆರು ಪತ್ರಕರ್ತರನ್ನು ಒಂದೇ ವರ್ಷದಲ್ಲಿ ಕೊಲೆಗೈಯಲಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ತಲಾ ಇಬ್ಬರು ಪತ್ರಕರ್ತರು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಪತ್ರಕರ್ತರು ಕೊಲೆಯಾಗಿದ್ದಾರೆ. ಅಲ್ಲದೆ 108 ಪತ್ರಕರ್ತರನ್ನು, ಒಟ್ಟು 13 ಮಾಧ್ಯಮ ಸಂಸ್ಥೆಗಳನ್ನು ಟಾರ್ಗೆಟ್ ಮಾಡಲಾಗಿದೆ.

ಒಟ್ಟು 121 ಭಾರಿ ಪತ್ರಕರ್ತರ ಮೇಲೆ ದಾಳಿಗಳಾಗಿದ್ದು, ಅವುಗಳಲ್ಲಿ ಕನಿಷ್ಠ 34 ಪ್ರಕರಣಗಳು ರಾಜಕೀಯ ಪಕ್ಷಗಳು, ಪಕ್ಷಗಳ ಕಾರ್ಯಕರ್ತರು ಮತ್ತು ಮಾಫಿಯಾಗಳಿಂದ ನಡೆದಿವೆ. ಜಮ್ಮು ಮತ್ತು ಕಾಶ್ಮೀರ ಪ್ರಾಂತ್ಯದಲ್ಲಿ ಅತಿ ಹೆಚ್ಚು ಪತ್ರಕರ್ತರನ್ನು ಟಾರ್ಗೆಟ್‌ (25) ಮಾಡಲಾಗಿದೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶ (23) ರಾಜ್ಯವಿದೆ.

2021ರಲ್ಲಿ 44 ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೆಲವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಅನೇಕ ಎಫ್‌ಐಆರ್‌ಗಳು ಆಗಿವೆ ಎಂಬುದನ್ನು ವರದಿ ತಿಳಿಸಿದೆ. 9 ಎಫ್‌ಐಆರ್‌ಗಳನ್ನು ದಾಖಲಿಸುವ ಮೂಲಕ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ. ಜಮ್ಮು- ಕಾಶ್ಮೀರ ಮತ್ತು ದೆಹಲಿ ಎರಡನೇ ಸ್ಥಾನದಲ್ಲಿವೆ.

ಇದನ್ನೂ ಓದಿ; ಇಂದು ಪತ್ರಿಕಾ ಸ್ವಾತಂತ್ರ್ಯ ದಿನ: ಪತ್ರಕರ್ತರ ನೋವಿನ ಕಥನ

ಸರ್ಕಾರವನ್ನು ಕಟುವಾಗಿ ಟೀಕಿಸಿ ವರದಿ ಮಾಡುತ್ತಿರುವ ನ್ಯೂಸ್‌ಲಾಂಡ್ರಿ, ದೈನಿಕ್ ಭಾಸ್ಕರ್, ಭಾರತ್ ಸಮಾಚಾರ್, ನ್ಯೂಸ್‌ಕ್ಲಿಕ್‌ನಂತಹ ಮಾಧ್ಯಮ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು ರೈಡ್ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...