Homeಮುಖಪುಟಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

ರಾಜ್ಯದ 40% ಕಮಿಷನ್ ಭ್ರಷ್ಟಾಚಾರಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ರವರು ಅಧಿಕೃತ ಒಪ್ಪಿಗೆಯ ಮುದ್ರೆಯೊತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಪಿಎಸ್‌ಐ ಹಗರಣದಲ್ಲಿ ಸರ್ಕಾರ, ಮಂತ್ರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ. ಸುಮಾರು ರೂ. 300 ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ. ಆದ್ದರಿಂದ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವುದಿಲ್ಲ ಹಾಗಾಗಿ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು” ಎಂದು ಒತ್ತಾಯಿಸಿದರು.

ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರ ಸಂಘದವರು, ಸ್ವಾಮೀಜಿಗಳು ಹೇಳಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಕಮಿಷನ್ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಶಾಲೆಯ ಮೇವು ಖರೀದಿಗೆ, ಬಿಬಿಎಂಪಿ ಕಾಮಗಾರಿಗಳಿಗೂ 40% ಕಮಿಷನ್ ಕೊಡಬೇಕು. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಮೋದಿಯವರು ಕಳೆದ ಚುನಾವಣೆ ಸಮಯದಲ್ಲಿ ನಮ್ಮ ಸರ್ಕಾರವನ್ನು ಹತ್ತು ಪರ್ಸೆಂಟ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದರು. 7/6/2021 ರಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪತ್ರ ಬರೆದಿದ್ದಾರೆ. ಇದಾಗಿ ಸುಮಾರು ಹತ್ತು ತಿಂಗಳಾದ್ರೂ ಈ ವರೆಗೆ ಮೋದಿ ಅವರು ತನಿಖೆಯನ್ನು ನಡೆಸಿಲ್ಲ, ರಾಜ್ಯ ಸರ್ಕಾರದಿಂದ ವರದಿ ಪಡೆಯುವ ಕೆಲಸವನ್ನು ಮಾಡಿಲ್ಲ. ಈಗ ಪ್ರಧಾನಿಗಳು ಈ ಸರ್ಕಾರಕ್ಕೆ 40% ಕಮಿಷನ್ ಪಡೆಯಲು ಪರವಾನಗಿ ಕೊಟ್ಟಿದ್ದಾರ? “ನ ಖಾವೂಂಗಾ, ನ ಖಾನೇದೂಂಗ” ಎಂದು ಹೇಳಿ ಜನರ ಕಣ್ಣೊರೆಸುತ್ತಾ, ಭ್ರಷ್ಟಾಚಾರಕ್ಕೆ ಪ್ರಧಾನಿಗಳು ಬೆಂಬಲವಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ: ಬಿ.ಕೆ ಹರಿಪ್ರಸಾದ್ ಆರೋಪ

ಪಿಎಸ್‌ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡು ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುವುದಾಗಿ ಹೇಳಿದೆ. ಸರ್ಕಾರ ಭಾಗಿಯಾಗದೆ ಇಂಥದ್ದೊಂದು ಭ್ರಷ್ಟಾಚಾರ ಮಾಡಲು ಸಾಧ್ಯವಾಗಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಶ್ವಥ್ ನಾರಾಯಣ ಅವರ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪರೀಕ್ಷೆಯಲ್ಲಿ 5 ನೇ ರ್ಯಾಂಕ್ ಬಂದಿರುವ ದರ್ಶನ್ ಗೌಡ ಹಾಗೂ 10ನೇ ರ್ಯಾಂಕ್ ಬಂದಿರುವ ನಾಗೇಶ್ ಗೌಡ ಎಂಬುವವರು ಅಶ್ವಥ್ ನಾರಾಯಣ ಅವರ ಸಂಬಂಧಿಕರು. ಈ ಇಬ್ಬರನ್ನು ವಿಚಾರಣೆಗೆ ಕರೆದು ಬಿಟ್ಟು ಕಳಿಸಿದ್ದಾರೆ. ಉಳಿದವರ ಬಂಧನವಾಗಿದೆ, ಈ ಇಬ್ಬರ ಬಂಧನ ಯಾಕೆ ಆಗಿಲ್ಲ? ಅಶ್ವಥ್ ನಾರಾಯಣ ಅವರ ಮೇಲೆ ಭ್ರಷ್ಟಾಚಾರದ ತೂಗುಗತ್ತಿ ನೇತಾಡುತ್ತಿದೆ. ಕೂಡಲೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾಜಪ ಅಂದ್ರೆ ಭ್ರಷ್ಟಾಚಾರ ಜನತಾ ಪಾರ್ಟಿ…. ಇನ್ನೇನು ಹೇಳಲು ಸಾಧ್ಯ…

  2. Ayyo… Rasma Raama… Hindu.. Hindu… Antha helikonde… Janarannu thappu daarigeledu sarkaaravannu darode maadtha ideyalla swami….!…. Yellaru seri kitthogeyabekaagide brastarannu.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...