Homeಮುಖಪುಟಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯ: ಚುನಾವಣಾ ಆಯೋಗ

ಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯ: ಚುನಾವಣಾ ಆಯೋಗ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣಾ ಆಯೋಗದ ಸದಸ್ಯರಾಗಿದ್ದ ಅಶೋಕ್ ಲಾವಾಸರವರು ಮೋದಿ ಮತ್ತು ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಕ್ಲಿನ್ ಚಿಟ್ ನೀಡುವುದಕ್ಕೆ ಭಿನ್ನಾಭಿಪ್ರಾಯ ದಾಖಲಿಸಿದ್ದುದು ನಿಮಗೆ ಗೊತ್ತಿಗೆ. ಮೂರು ಜನರ ಸಮಿತಿಯಲ್ಲಿ ಒಬ್ಬರಾಗಿದ್ದ ಅವರು ಮೋದಿ-ಶಾರವರ ಸುಮಾರು 11 ಪ್ರಕರಣಗಳಿಗೆ ಕ್ಲಿನ್ ಚಿಟ್ ನೀಡುವುದಕ್ಕೆ ತಮ್ಮ ವಿರೋಧ ದಾಖಲಿಸಿ ನೋಟ್ ಬರೆದಿದ್ದರು.

ಆ ದಾಖಲೆಗಳನ್ನು ಮಾಹಿತಿ ಹಕ್ಕಿನಡಿ ನೀಡುವಂತೆ ಪುಣೆ ಮೂಲಕ ವಿಹಾರ್ ದೃವೆ ಎಂಬ ಆರ್.ಟಿ.ಐ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದೆ. ಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯವಿದೆ ಎಂದು ಚುನಾವಣಾ ಆಯೋಗ ಸ್ಪಷ್ಟೀಕರಣ ಸಹ ನೀಡಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮತ್ತು ಸದಸ್ಯರಾದ ಲವಾಸಾ ಮತ್ತು ಸುಶೀಲ್ ಚಂದ್ರರನ್ನು ಒಳಗೊಂಡ ಸಮಿತಿಯ ‘ಪೂರ್ಣ ಆಯೋಗ’ ವಿವಾದಾಸ್ಪದ ವಿಷಯಗಳ ಬಗ್ಗೆ ಚರ್ಚಿಸಿತ್ತು. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿದ್ದ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದರು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮಾತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ,`ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಮೋದಿಯವರು ಮಾಡಿದ ಭಾಷಣಗಳಿಗೆ ಸಂಬಂಧಿಸಿದ ಲಾವಸಾ ಅವರ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಕೋರಿರುವ ಪುಣೆ ಮೂಲದ ಆರ್‌ಟಿಐ ಕಾರ್ಯಕರ್ತ ವಿಹಾರ್ ದೃವೆಗೆ ನಿರಾಕರಿಸಿದೆ. ಮತ್ತು “ಯಾವುದೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಕಾನೂನು ಜಾರಿ ಅಥವಾ ಭದ್ರತಾ ಉದ್ದೇಶಗಳಿಗಾಗಿ ವಿಶ್ವಾಸದಿಂದ ನೀಡಲಾದ ಮಾಹಿತಿ ಅಥವಾ ಸಹಾಯದ ಮೂಲವನ್ನು ಗುರುತಿಸುವಂತಹ ಮಾಹಿತಿಯನ್ನು ಬಹಿರಂಗಪಡಿಸುವುದನ್ನು ವಿನಾಯಿತಿ ನೀಡುವ” ಆರ್‌ಟಿಐ ಕಾಯ್ದೆಯ ಒಂದು ವಿಭಾಗವನ್ನು ಚುನಾವಣಾ ಆಯೋಗ ಉಲ್ಲೇಖಿಸಿದೆ.

ಈ ಕುರಿತು ಪತ್ರಕರ್ತ ರವಿ ನಾಯರ್ ರವರು “ಚುನಾವಣಾ ಆಯೋಗ ಹೇಳುತ್ತಿರುವುದುನ್ನು ಸರಳೀಕರಿಸುವುದಾರೆ, ಮೋದಿ ಮತ್ತು ಷಾ ಅವರ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳಗೆ ಆಯೋಗ ಕೊಟ್ಟ ವೈಟ್‌ವಾಶ್ ಕುರಿತು ಲವಾಸಾ ಅವರ ಭಿನ್ನಾಭಿಪ್ರಾಯದ ಟಿಪ್ಪಣಿ ಪ್ರಕಟವಾದರೆ, ಸಂಬಂಧಪಟ್ಟ ಪಕ್ಷಗಳು ಅವನ ಜೀವಕ್ಕೆ ಅಪಾಯವನ್ನುಂಟು ಮಾಡಬಹುದು. ವಾವ್ ಎಂದು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಓಹ್! ವಿಷಯ ಹೀಗಿದೆ. ತಮ್ಮ ಜೀವಗಳಿಗೆ ಅಪಾಯ ಆಡಬಹುದು ಎಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ. ಭಲೆ ಭಲೆ.‌ಇಂಥಹ ಮಹನೀಯರು ಆಯುಕ್ತರಾಗಿ ನೇಮಕವಾಗಿದ್ದು ಯಾರ ಯಶಸ್ಸಿಗೆ ಎಂದು ಈಗ ಅರ್ಥ ಆಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...