Homeಮುಖಪುಟನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷರು ಕಂಪನಿಯೊಂದರ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ಚಿದಂಬರಂ ಕಂಪನಿಯ ಪರವಾಗಿ ವಕೀಲರಾಗಿ ಹಾಜರಾಗಿದ್ದಾರೆ!

- Advertisement -
- Advertisement -

ಕಾಂಗ್ರೆಸ್ ನಾಯಕ, ರಾಜ್ಯ ಸಭಾ ಸದಸ್ಯ ಪಿ.ಚಿದಂಬರಂ ಅವರು ಪ್ರಕರಣವೊಂದರಲ್ಲಿ ವಕೀಲರಾಗಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ಭೇಟಿ ನೀಡಿದಾಗ ಪಕ್ಷದ ಕಾರ್ಯಕರ್ತರು ಹಾಗೂ ವಕೀಲರು ಪ್ರತಿಭಟನೆ ಚಿದಂಬರಂ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ನ್ಯಾಯಾಲಯದಿಂದ ಹೊರಬರಲು ಹೊರಟಿದ್ದ ಚಿದಂಬರಂ ಅವರಿಗೆ ಕಾಂಗ್ರೆಸ್ ಕಾನೂನು ಘಟಕಕ್ಕೆ ಸೇರಿದ್ದ ವಕೀಲರ ಗುಂಪು ಕಪ್ಪು ವಸ್ತ್ರ ಮತ್ತು ಧ್ವಜಗಳನ್ನು ತೋರಿಸಿ ಪ್ರತಿಭಟನೆ ನಡೆಸಿದೆ. “ನೀವು ಮಮತಾ ಬ್ಯಾನರ್ಜಿ ಅವರ ಪರ ಸಹಾನುಭೂತಿ ಹೊಂದಿದ್ದೀರಿ. ಅವರ ಏಜೆಂಟ್ ಆಗಿದ್ದೀರಿ. ನಿಮ್ಮಂಥವರ ನಾಯಕತ್ವದಿಂದಾಗಿ ಕಾಂಗ್ರೆಸ್ ಈ ದುಸ್ಥಿತಿಗೆ ಇಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೃಷಿ ಸಂಸ್ಕರಣಾ ಸಂಸ್ಥೆ ಕೆವೆಂಟರ್‌ನ ವಕೀಲರಾಗಿ ಚಿದಂಬರಂ ಪ್ರತಿನಿಧಿಸುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹೀಗಿರುವ ಕಾಂಗ್ರೆಸ್ ನಾಯಕ ಚಿದಂಬರಂ ಆ ಕಂಪನಿಯನ್ನು ಹೇಗೆ ಪ್ರತಿನಿಧಿಸುತ್ತಾರೆ ಎಂದು ಪ್ರತಿಭಟನಾನಿರತ ವಕೀಲರು ಪ್ರಶ್ನಿಸಿದ್ದಾರೆ. ಮೆಟ್ರೋ ಡೈರಿಯ ಷೇರುಗಳನ್ನು ಖಾಸಗಿ ಕಂಪನಿಗೆ ಮಾರಾಟ ಮಾಡುವ ಟಿಎಂಸಿ ಸರ್ಕಾರದ ನಿರ್ಧಾರವನ್ನು ಚೌಧರಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ವಕೀಲ ಕೌಸ್ತವ್ ಬಾಗ್ಚಿ, “ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರು ಯಾವ ಶೇರುಗಳ ಖರೀದಿಯನ್ನು ಆಕ್ಷೇಪಿಸುತ್ತಿದ್ದಾರೋ ಅದರ ವಿರುದ್ಧ ಚಿದಂಬರಂ ಹಾಜರಾಗಿದ್ದಾರೆ” ಎಂದು ಟೀಕಿಸಿದ್ದಾರೆ. ಚಿದಂಬರಂ ಅವರು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರಾಗಿದ್ದಾರೆ ಹಾಗೂ ಪ್ರಮುಖ ನಾಯಕರಾಗಿದ್ದಾರೆ ಎಂದು ಬಾಗ್ಚಿ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರಾಗಿ ಪ್ರತಿಭಟನೆಯನ್ನು ನಡೆಸಿದ್ದೇನೆ. ವಕೀಲರಾಗಿ ಅಲ್ಲ. ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುವ ಯಾವುದೇ ನಾಯಕನ ವಿರುದ್ಧ ಪಕ್ಷದ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಘಟನೆಯ ಕುರಿತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಚೌದರಿ ಮಾತನಾಡಿದ್ದು, “ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆಗಳು ಸ್ವಾಭಾವಿಕವಾಗಿ ನಡೆಯುತ್ತವೆ. ಪ್ರತಿಭಟನೆಗಳು ಕಾಂಗ್ರೆಸ್‌ನ ಸ್ವಭಾವ” ಎಂದಿದ್ದಾರೆ.

“ಕಲ್ಕತ್ತಾ ಹೈಕೋರ್ಟ್‌ನಲ್ಲಿ ಹಾಜರಿದ್ದ ಕೆಲವು ಕಾಂಗ್ರೆಸ್ ಬೆಂಬಲಿಗರು ಪ್ರತಿಭಟಿಸಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಅವರ ಸಹಜ ಪ್ರತಿಕ್ರಿಯೆ ಎಂದು ನಾನು ನಂಬುತ್ತೇನೆ” ಎಂದು ಚೌಧರಿ ತಿಳಿಸಿದ್ದಾರೆ.

ಚಿದಂಬರಂ ಅವರು ಪ್ರಕರಣದಲ್ಲಿ ವಕೀಲರಾಗಿ ಕಾಣಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೌಧ, “ವೃತ್ತಿಪರ ಜಗತ್ತಿನಲ್ಲಿ ತಮ್ಮ ಆಯ್ಕೆಗಳನ್ನು ಆಯ್ಕೆ ಮಾಡುವ ಹಕ್ಕನ್ನು ಅವರು ಹೊಂದಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ವೃತ್ತಿಪರ ಜಗತ್ತು. ಇದು ವ್ಯಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ … ಯಾರು ಯಾರಿಗೂ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಚೌದರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...