Homeಅಂಕಣಗಳುಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

- Advertisement -
- Advertisement -

ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ, ದಾಖಲೆ-ದಸ್ತಾವೇಜುಗಳು, ಸಂಸದೀಯ ಚರ್ಚೆಗಳು ಮತ್ತಿತರೆ ಅಧಿಕೃತ ಸೀಮಿತ ಉದ್ದೇಶಗಳಿಗೆ ಬಳಸಲಾಗುವ ಭಾಷೆ.

ಬ್ರಿಟಿಷ್ ಭಾರತದಲ್ಲಿ ಇಂಗ್ಲಿಷ್ ಆಡಳಿತ ಭಾಷೆಯಾಗಿತ್ತು. ಈ ಭಾಷೆಯನ್ನೇ ಮುಂದುವರಿಸಬೇಕೇ ಅಥವಾ ಆ ಜಾಗಕ್ಕೆ ಹಿಂದಿಯನ್ನು ತರಬೇಕೇ ಎಂದು ಸಂವಿಧಾನ ರಚನಾಸಭೆಯಲ್ಲಿ ಕಾವೇರಿದ ಚರ್ಚೆಗಳು ನಡೆದವು. ಕಡೆಗೆ ’ಮುನ್ಷೀ-ಅಯ್ಯಂಗಾರ್’ ರಾಜೀ ಸೂತ್ರವೊಂದನ್ನು ಅಳವಡಿಸಿಕೊಳ್ಳಲಾಯಿತು. ಈ ಸೂತ್ರದ ಪ್ರಕಾರ ಮೊದಲ 15 ವರ್ಷಗಳ ಕಾಲ ಇಂಗ್ಲಿಷನ್ನೇ ಆಡಳಿತ ಭಾಷೆಯಾಗಿ ಬಳಸಲಾಗುವುದು. ಆ ನಂತರ ಇಂಗ್ಲಿಷಿನ ಸ್ಥಾನವನ್ನು ಹಿಂದೀ ತುಂಬುವುದು. 15 ವರ್ಷಗಳ ನಂತರ ಇಂಗ್ಲಿಷಿನ ಮುಂದುವರಿಕೆಯ ಆಯ್ಕೆಯನ್ನೂ ಉಳಿಸಿಕೊಳ್ಳಲಾಗಿತ್ತು. 1965ರಲ್ಲಿ 15 ವರ್ಷಗಳು ತುಂಬಿದಾಗ ಇಂಗ್ಲಿಷಿನ ಜಾಗಕ್ಕೆ ಹಿಂದಿಯನ್ನು ತರುವ ಪ್ರಸ್ತಾವಗಳಿಗೆ ದಕ್ಷಿಣ ಭಾರತೀಯ ರಾಜ್ಯಗಳಿಂದ, ವಿಶೇಷವಾಗಿ ತಮಿಳುನಾಡಿನಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ಆಡಳಿತ ಭಾಷೆಯಾಗಿ ಒಪ್ಪಿಕೊಳ್ಳುವ ತನಕ ಹಿಂದಿಯೊಂದಿಗೆ ಇಂಗ್ಲಿಷನ್ನೂ ಉಳಿಸಿಕೊಳ್ಳುವುದಾಗಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಭರವಸೆ ನೀಡಿದರು. (ಆದರೆ ವಿಶೇಷವಾಗಿ ಬಿಜೆಪಿ ಸರ್ಕಾರ ಈ ಭರವಸೆಯನ್ನು ನಿರ್ಲಕ್ಷಿಸಿ ಹಿಂದಿ ಹೇರಿಕೆಯ ಸತತ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿದೆ). ಹೀಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವಣ ಅಧಿಕೃತ ಭಾಷೆಗಳಾಗಿ ಇಂಗ್ಲಿಷ್ ಮತ್ತು ಹಿಂದಿ ಎರಡೂ ಮುಂದುವರಿದಿವೆ. ರಾಜ್ಯಗಳು ಹಿಂದಿ ಅಥವಾ ತಮ್ಮ ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಅಳವಡಿಸಿಕೊಳ್ಳುವ ಅವಕಾಶವನ್ನು ಸಂವಿಧಾನವು ನೀಡಿತು. ಸಂವಿಧಾನದ ಪ್ರಕಾರ ಹೈಕೋರ್ಟುಗಳು ಮತ್ತು ಸುಪ್ರೀಮ್ ಕೋರ್ಟಿನ ಕಲಾಪದ ಭಾಷೆ, ಕೇಂದ್ರ ಮತ್ತು ರಾಜ್ಯಗಳ ಶಾಸಕಾಂಗ ದಸ್ತಾವೇಜು ಹಾಗೂ ಎರಡು ರಾಜ್ಯಗಳ ನಡುವೆ ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಪರ್ಕ ಭಾಷೆ ಇಂಗ್ಲಿಷೇ ಆಗಿದೆ. ಸಂವಿಧಾನದ ಎಂಟನೆಯ ಷೆಡ್ಯೂಲು ಒಟ್ಟು 22 ಭಾಷೆಗಳನ್ನು ಗುರುತಿಸಿ ಪಟ್ಟಿ ಮಾಡಿದೆ. ಇವುಗಳ ಪೈಕಿ ಯಾವುದೇ ಭಾಷೆ ಅಥವಾ ಭಾಷೆಗಳನ್ನು ರಾಜ್ಯಗಳು ತಮ್ಮ ಆಡಳಿತ ಭಾಷೆಗಳನ್ನಾಗಿ ಆರಿಸಿಕೊಳ್ಳಬಹುದು.

ಎಂಟನೆಯ ಷೆಡ್ಯೂಲಿನಿಂದ ಹೊರಗಿಟ್ಟಿರುವ ದೊಡ್ಡ ಸಂಖ್ಯೆಯ ಮಾತೃಭಾಷೆಗಳನ್ನು ’ನುಡಿಗಟ್ಟುಗಳು’, ’ಬುಡಕಟ್ಟು ಭಾಷೆಗಳು’, ’ಸಣ್ಣ ಭಾಷೆ’ಗಳು ಎಂದು ಹೆಸರಿಟ್ಟು ಕರೆದು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಂಗ್ಲಿಷಿನ ಜೊತೆಗೆ ಹಿಂದಿ ಒಂದು ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ. ರಾಷ್ಟ್ರಭಾಷೆಯ ಕುರಿತು ಸಂವಿಧಾನ ಮೌನವಹಿಸಿದೆ.

ಹಿಂದಿಯನ್ನು ರಾಷ್ಟ್ರಭಾಷೆ ಎಂದು ಘೋಷಿಸಿದರೆ ದೇಶದ ಎಲ್ಲ ನಾಗರಿಕರು ಆ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕಾಗುತ್ತದೆ. ಇಂತಹ ಸ್ಥಿತಿ ಉತ್ತರ ಭಾರತೀಯರಿಗೆ ಅನುಕೂಲದ್ದೂ, ದಕ್ಷಿಣದವರಿಗೆ ಪ್ರತಿಕೂಲದ್ದೂ ಆಗಿ ಪರಿಣಮಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯೇ ರಾಷ್ಟ್ರಭಾಷೆ ಎಂದು ಹಿಂದಿ ಚಿತ್ರನಟ ಅಜಯ್ ದೇವಗನ್ ಅವರ ಆಧಾರರಹಿತ ಘೋಷಣೆಗೆ ತಕ್ಕ ಮಾರುತ್ತರ ನೀಡಿದ್ದಾರೆ ಕಿಚ್ಚ ಸುದೀಪ್. ಸಾಮಾಜಿಕ ಜಾಲತಾಣದಲ್ಲಿ ನಡೆದ ಈ ಚರ್ಚೆಗೆ ರಾಜಕಾರಣಿಗಳೂ ದನಿಗೂಡಿಸಿದ್ದಾರೆ.

’ಹಿಂದಿ ಭಾಷೆಯನ್ನು ಪ್ರೀತಿ ಮಾಡದವರು ವಿದೇಶೀಯರು. ಅವರು ಭಾರತವನ್ನು ಬಿಟ್ಟು ಇನ್ನೆಲ್ಲಿಗಾದರೂ ತೊಲಗಬೇಕು’ ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸಂಪುಟದ ಮಂತ್ರಿ ಸಂಜಯ ನಿಷಾದ್ ಅಪ್ಪಣೆ ಕೊಡಿಸಿದ್ದಾರೆ. ’ಭಾರತದಲ್ಲಿ ಇರಬೇಕಿದ್ದರೆ ಹಿಂದಿಯನ್ನು ಪ್ರೀತಿಸಬೇಕು. ಪ್ರಾದೇಶಿಕ ಭಾಷೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಸಂವಿಧಾನವು ಈ ದೇಶವನ್ನು ಹಿಂದುಸ್ತಾನ ಎಂದು ಕರೆದಿದೆ. ಹಿಂದುಸ್ತಾನವು ಹಿಂದಿ ಭಾಷಿಕರದು. ಹಿಂದಿ ಮಾತನಾಡದವರಿಗೆ ಹಿಂದುಸ್ತಾನದಲ್ಲಿ ಜಾಗವಿಲ್ಲ’ ಎಂದು ಅವರು ಸಾರಿದ್ದಾರೆ. ಹಾಗಿದ್ದರೆ ಹಿಂದಿ ಬಾರದ ಮತ್ತು ಕಲಿಯಲು ಬಯಸದ ಬಹುತೇಕ ದಕ್ಷಿಣ ಭಾರತೀಯರನ್ನು ಎಲ್ಲಿಗೆ ತೊಲಗಿಸಬೇಕೆಂದು ನಿಷಾದ್ ಮತ್ತು ಅವರ ಈ ನಿಲುವನ್ನು ಬೆಂಬಲಿಸುವವರು ಗಂಭೀರವಾಗಿ ಆಲೋಚಿಸಬೇಕಿದೆ.

ಪಾಟ್ನಾ ಹೈಕೋರ್ಟ್ 2003ರಲ್ಲಿ ನೀಡಿದ ತೀರ್ಪೊಂದರಲ್ಲಿ (ಜಯಕಾಂತ ಮಿಶ್ರಾ ವರ್ಸಸ್ ಸ್ಟೇಟ್ ಅಫ್ ಬಿಹಾರ) ಹಿಂದಿ ಹೇರಿಕೆ ಕುರಿತು ಆಡಿರುವ ಈ ಮಾತುಗಳನ್ನು ಇಲ್ಲಿ ಉಲ್ಲೇಖಿಸಲೇಬೇಕಿದೆ- “ಉತ್ತರ ಭಾರತದ ಜನರು ನಾನಾ ನುಡಿಗಟ್ಟುಗಳಲ್ಲಿ ಆಡುವ ಪ್ರಮುಖ ಭಾಷೆಯನ್ನು ಆಧಾರವಾಗಿ ಇಟ್ಟುಕೊಂಡು ರಾಷ್ಟ್ರವಾದವನ್ನು ಸರ್ಕಾರ ನಡೆಸುವವರು ಮಾಡಿದರೂ ಅದು ದುರಭಿಮಾನವೇ. ತಪ್ಪನ್ನು ಯಾರು ಮಾಡಿದರೂ ಅದು ತಪ್ಪೇ. ಆಡಳಿತ ಭಾಷೆ, ರಾಷ್ಟ್ರಭಾಷೆ ಹಾಗೂ ಮಾತೃಭಾಷೆಯ ನಡುವಣ ವ್ಯತ್ಯಾಸಗಳನ್ನು ಬಿಹಾರ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಈ ತಪ್ಪು ತಿಳಿವಳಿಕೆಯೇ ಮೊದಲ ಮೂಲಭೂತ ತಪ್ಪು. ಹಿಂದಿ ಭಾಷಿಕ ರಾಜ್ಯಗಳ ಆಡಳಿತಗಳು ಇತರೆ ಭಾಷೆಗಳನ್ನು ಎದುರಾಳಿಗಳೆಂದು ಬಗೆದಿರುವ ಸಂದರ್ಭಗಳಿವೆ. ಈ ಭಾವನೆ ವಾಸ್ತವ ಅಲ್ಲ. ಹಿಂದಿಯ ಯಜಮಾನಿಕೆಯನ್ನು ಸಮರ್ಥಿಸುತ್ತ, ಸಂವಿಧಾನವೇ ವಿಧಿಸಿರುವ ರಾಷ್ಟ್ರಭಾಷೆಯಿದು ಎಂದು ಆ ಭಾಷೆಯನ್ನು ಆಕ್ರಮಣಕಾರಿಯಾಗಿ ಹೇರುವುದು ಅತಿ ದೊಡ್ಡ ತಪ್ಪು. ಹಿಂದಿ ಮಾತನಾಡದಿರುವ ಪ್ರದೇಶಗಳಲ್ಲಿ ಒಡಕಿನ ದನಿಯನ್ನು ಹುಟ್ಟಿಸಲು ಕಾರಣವಾಗುವ ಅಂಶವಿದು. ಹಿಂದಿ ಮಾತನಾಡದಿರುವ ವ್ಯಕ್ತಿ ಕೂಡ ಹಿಂದಿ ಭಾಷಿಕ ರಾಜ್ಯಗಳ ಪೌರರಷ್ಟೇ ದೇಶಾಭಿಮಾನಿಯೂ, ರಾಷ್ಟ್ರವಾದಿಯೂ ಆಗಿರುತ್ತಾಳೆ ಅಥವಾ ಆಗಿರುತ್ತಾನೆ. ಅದನ್ನೊಂದು ಸಂಪರ್ಕ ಭಾಷೆಯಾಗಿಸಲು ಪ್ರೋತ್ಸಾಹಿಸಬೇಕು ಎಂಬುದು ಬೇರೆ ಮಾತು. ಆದರೆ ಅಂತಹ ಪ್ರಯತ್ನಗಳು ಇತರೆ ಭಾಷೆಗಳನ್ನು ಮಾತನಾಡುವ ಮತ್ತು ಆ ಭಾಷೆಗಳ ಕುರಿತು ಹೆಮ್ಮೆ ಹೊಂದಿರುವ ಭಾರತೀಯರ ಸಂವೇದನೆಗಳನ್ನು ಘಾಸಿಗೊಳಿಸುವ ಮಟ್ಟಕ್ಕೆ ಹೋಗಕೂಡದು”.

ಬಹುಭಾಷೆಗಳು, ಬಹುಮುಖೀ ಸಂಸ್ಕೃತಿಯ ದೇಶದಲ್ಲಿ ಒಂದು ನಿರ್ದಿಷ್ಟ ಭಾಷೆಯನ್ನು ರಾಷ್ಟ್ರೀಯತೆಯ ತಳಪಾಯವೆಂದು, ಸಾಂಸ್ಕೃತಿಕ ತಳಹದಿಯೆಂದೂ ಎತ್ತಿ ಕಟ್ಟಿ ಹೇರುವುದು ಜನತಾಂತ್ರಿಕ ಧೋರಣೆ ಅಲ್ಲ. ಭಾಷೆ ಎಂಬುದು ಕಡು ಅಸ್ಮಿತೆಯ ತೀವ್ರ ಭಾವನಾತ್ಮಕ ಸಂಗತಿ. ಪಾಕಿಸ್ತಾನದಿಂದ ಸಿಡಿದು ಬಾಂಗ್ಲಾ ದೇಶ ಎಂಬ ಹೊಸ ರಾಷ್ಟ್ರ ಹುಟ್ಟಿದ್ದಕ್ಕೆ ಉರ್ದು ಹೇರಿಕೆಯೇ ಮೂಲ ಕಾರಣ ಎಂಬ ಕಟು ಸತ್ಯವನ್ನು ಮರೆಯಕೂಡದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಬಹುಜನ ಭಾರತ; ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಬಲಿತ ಬಲಪಂಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...