Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...