Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...