Homeದಲಿತ್ ಫೈಲ್ಸ್ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು

- Advertisement -
- Advertisement -

2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು ಮಂದಿಗೆ ಗುಜರಾತ್‌ನ ಮೆಹ್ಸಾನಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಕಾನೂನು ಬಾಹಿರವಾಗಿ ಸಭೆ ನಡೆಸಲಾಗಿದೆ ಎಂಬ ಆರೋಪವನ್ನು ಎತ್ತಿ ಹಿಡಿದಿರುವ ಕೋರ್ಟ್, ಎಲ್ಲಾ ಅಪರಾಧಿಗಳಿಗೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ತಲಾ 1,000 ರೂ. ದಂಡ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಜೆಎ ಪರ್ಮಾರ್ ಅವರು ತೀರ್ಪು ನೀಡಿದ್ದು, “ರ್‍ಯಾಲಿ ನಡೆಸುವುದು ಅಪರಾಧವಲ್ಲ. ಆದರೆ ಅನುಮತಿಯಿಲ್ಲದೆ ರ್‍ಯಾಲಿ ನಡೆಸುವುದು ಅಪರಾಧ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಅವಿಧೇಯತೆಯನ್ನು ಎಂದಿಗೂ ಸಹಿಸಲಾಗುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ದಲಿತರ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಊನಾದಲ್ಲಿ ನಡೆದ ಬೃಹತ್‌ ಆಂದೋಲನದ ಕರಾಳ ನೆನಪಿಗಾಗಿ ಜುಲೈ 12, 2017ರಂದು ಮೇವಾನಿ ಮತ್ತು ಅವರ ಸಹಚರರು ಮೆಹ್ಸಾನಾದಿಂದ ನೆರೆಯ ಬನಸ್ಕಾಂತ ಜಿಲ್ಲೆಯ ಧನೇರಾಗೆ ‘ಆಜಾದಿ ಕೂಚ್’ ಕಾರ್ಯಕ್ರಮ ನಡೆಸಿದರು.

ಮೇವಾನಿಯವರ ಸಹಚರರಲ್ಲಿ ಒಬ್ಬರಾದ ಕೌಶಿಕ್ ಪರ್ಮಾರ್ ಅವರು, ಮೇವಾನಿ ಅವರು ಸ್ಥಾಪಿಸಿದ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಸಂಘಟನೆಯ ಬ್ಯಾನರ್ ಅಡಿಯಲ್ಲಿ ರ್‍ಯಾಲಿ ನಡೆಸುವುದಾಗಿ ಮೆಹ್ಸಾನಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ಅವರಿಂದ ಅನುಮತಿ ಕೋರಿದ್ದರು. ಆರಂಭದಲ್ಲಿ ಅನುಮತಿ ನೀಡಲಾಯಿತು. ಬಳಿಕ ಅದನ್ನು ಪ್ರಾಧಿಕಾರ ಹಿಂಪಡೆದರೂ ಸಂಘಟಕರು ರ್‍ಯಾಲಿ ನಡೆಸಿದರು.

10 ಆರೋಪಿಗಳಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ, “ಆರೋಪಿಗಳು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆದೇಶವನ್ನು ಸೂಕ್ತ ಉನ್ನತ ಅಧಿಕಾರಿಗಳ ಮುಂದೆ ಪ್ರಶ್ನಿಸಿ ನಂತರ ಸರಿಯಾದ ಅನುಮತಿ ಪಡೆದು ರ್‍ಯಾಲಿ ನಡೆಸಬೇಕಿತ್ತು” ಎಂದಿದೆ.

ಮೆಹ್ಸಾನಾ ಪೊಲೀಸರು ಮೆರವಣಿಗೆ ನಡೆಸಲು ಅನುಮತಿ ನೀಡದ ಕಾರಣ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 143ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿರಿ: ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ರ್‍ಯಾಲಿಯಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಂದಿನ ನಾಯಕ, ಈಗ ಕಾಂಗ್ರೆಸ್‌ ಸೇರಿರುವ ಕನ್ಹಯ್ಯಾ ಕುಮಾರ್ ಭಾಗವಹಿಸಿದ್ದರು. ಪ್ರಕರಣದ ಆರೋಪಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ.

ಆದರೆ ಕಳೆದ ವರ್ಷ ಏಪ್ರಿಲ್‌ನಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯವು ವಿಚಾರಣೆ ನಡೆಸುವಾಗ ಕನ್ಹಯ್ಯ ಗೈರುಹಾಜರಾಗಿದ್ದರು. ಅವರು ನ್ಯಾಯಾಲಯಕ್ಕೆ ಹಾಜರಾದಾಗ ಅವರ ವಿರುದ್ಧ ಪ್ರತ್ಯೇಕ ವಿಚಾರಣೆ ನಡೆಸಲು ನ್ಯಾಯಾಲಯ ತೀರ್ಮಾನಿಸಿತು.

ಒಬ್ಬ ಆರೋಪಿ ಸಾವಿಗೀಡಾಗಿದ್ದಾರೆ. ಸಾವಿಗೀಡಾದ ವ್ಯಕ್ತಿ ಹಾಗೂ ಕನ್ಹಯ್ಯ ಕುಮಾರ್‌ ಅವರನ್ನು ಹೊರತುಪಡಿಸಿ ಕಳೆದ ವರ್ಷ ಎಪ್ರಿಲ್‌ನಲ್ಲಿ ಮೇವಾನಿ ಸೇರಿದಂತೆ 10 ಜನರ ವಿರುದ್ಧ ನ್ಯಾಯಾಲಯವು ವಿಚಾರಣೆಯನ್ನು ಪ್ರಾರಂಭಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...