Homeಮುಖಪುಟಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

ಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

- Advertisement -
- Advertisement -

ಪಶ್ಚಿಮ ಬಂಗಾಳದ ಕೋಲ್ಕತ್ತಾಕ್ಕೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಕೆಲ ಗಂಟೆಗಳ ಮೊದಲು ಬಿಜೆಪಿ ಯುವ ಮುಖಂಡರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಸಾವಿನ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.

ಘಟನೆಯನ್ನು ಖಂಡಿಸಿರುವ ಅಮಿತ್ ಶಾ, “ಇಂದು ಬಿಜೆಪಿ ನಾಯಕ ಅರ್ಜುನ್ ಚೌರಾಸಿಯಾ ಅವರನ್ನು ರಾಜಕೀಯ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ತೃಣಮೂಲ ಸರ್ಕಾರ ನಿನ್ನೆಯಷ್ಟೇ ಬಂಗಾಳದಲ್ಲಿ ಒಂದು ವರ್ಷ ಪೂರೈಸಿದೆ. ಇದಾದ ಎರಡನೆ ದಿನದಲ್ಲಿ ರಾಜ್ಯದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ, ರಾಜಕೀಯ ಕೊಲೆಗಳ ವ್ಯವಸ್ಥೆ ಆರಂಭವಾಗಿದೆ. ಪಶ್ಚಿಮ ಬಂಗಾಳದಲ್ಲಿ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್‌ ಮಾಡುತ್ತಿರುವ ಅನೇಕ ಉದಾಹರಣೆಗಳನ್ನು ನೋಡಿದ್ದೇವೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾ ಅವರು ಬುಧವಾರ ಮಧ್ಯಾಹ್ನ ಮೃತ ವ್ಯಕ್ತಿಯ ಸಂಬಂಧಿಕರನ್ನು ಭೇಟಿಯಾದರು. “ಚೌರಾಸಿಯಾ ಅವರ ಅಜ್ಜಿ ಸೇರಿದಂತೆ ಅವರ ಕುಟುಂಬವನ್ನು ಪೊಲೀಸರು ಥಳಿಸಿದ್ದಾರೆ. ನಂತರ ಚೌರಾಸಿಯ ಸಾವನ್ನಪ್ಪಿದ್ದಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಚೌರಾಸಿಯಾ ಹಂತಕರಿಗೆ ಕಠಿಣ ಶಿಕ್ಷೆಯಾಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಬಿಜೆಪಿ ಇದರ ವಿರುದ್ಧ ಮಾತ್ರ ಹೋರಾಡುತ್ತಿದೆ. ಬಂಗಾಳದಲ್ಲಿ, ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಮೊದಲು ಕಮ್ಯುನಿಸ್ಟ್ ಸರ್ಕಾರದ ಅಡಿಯಲ್ಲಿ, ಈಗ ಟಿಎಂಸಿ ಸರ್ಕಾರದಿಂದ ಈ ಕೃತ್ಯ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ವಿಷಯದ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿರುವುದನ್ನು ಪುನರುಚ್ಚರಿಸಿದ ಶಾ, ಸಾವಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿಯನ್ನು ಕೇಳಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

ಬಿಜೆಪಿ ಯುವ ಮೋರ್ಚಾ ಮುಖಂಡ ಅರ್ಜುನ್ ಚೌರಾಸಿಯಾ (27) ಅವರು ಶುಕ್ರವಾರ ಬೆಳಗ್ಗೆ ಘೋಷ್ ಬಗಾನ್ ಪ್ರದೇಶದಲ್ಲಿನ ಕಟ್ಟಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅರ್ಜುನ್ ಬಿಜೆವೈಎಂ ಮಂಡಲ್ ಉಪಾಧ್ಯಕ್ಷರಾಗಿದ್ದರು.

ಅಮಿತ್ ಶಾ ಅವರನ್ನು ಕೋಲ್ಕತ್ತಾಕ್ಕೆ ಸ್ವಾಗತಿಸಲು ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಚೌರಾಸಿಯಾ ಅವರ ಸಾವಿನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಶವವನ್ನು ಹೊರತೆಗೆಯದಂತೆ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆದಿದ್ದರಿಂದ 5 ಗಂಟೆಗಳ ನಂತರ ಮೃತರ ಶವವನ್ನು ಸ್ಥಳದಿಂದ ಹೊರತೆಗೆಯಲಾಯಿತು. ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ವೈದ್ಯರು ಹಾಜರಾಗುವವರೆಗೆ ತನ್ನ ಮಗನ ಮರಣೋತ್ತರ ಪರೀಕ್ಷೆಯನ್ನು ನಡೆಸಬಾರದು ಎಂದು ಚೌರಾಸಿಯಾ ಅವರ ತಾಯಿ ಕಲ್ಕತ್ತಾ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ನಗರದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆ ಬಿಜೆಪಿ ಮತ್ತು ಟಿಎಂಸಿ ಎರಡೂ ಸದಸ್ಯರು ಚೌರಾಸಿಯಾ ಅವರ ಮನೆಯ ಹೊರಗೆ ಜಮಾಯಿಸಿದ್ದರು.

ಬಿಜೆಪಿ ಆರೋಪಕ್ಕೆ ಟಿಎಂಸಿ ಪ್ರತಿಕ್ರಿಯೆ

ಕೊಲೆಯಲ್ಲಿ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಟಿಎಂಸಿ ಅಲ್ಲಗಳೆದಿದೆ. “ನಮ್ಮ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಲಿ” ಎಂದು ಪಕ್ಷದ ಸಂಸದ ಸಂತಾನು ಸೇನ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Since 50 years the murder politics is going on During TMC rule it’s less. But earlier Congress now BJP are not giving com co operation and playing dirty politics.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...