Homeಮುಖಪುಟಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

ಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

- Advertisement -
- Advertisement -

ಭೂಕಬಳಿಕೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ವಿರುದ್ಧ ದಾಖಲಾಗಿರುವ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಲ್ಲಿ ಅಲಹಾಬಾದ್ ಹೈಕೋರ್ಟ್ ವಿಳಂಬ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನಡೆಗೆ ಅಸಮಧಾನ ವ್ಯಕ್ತಪಡಿಸಿರುವ ಸುಪ್ರೀಂ, “ಇದು ನ್ಯಾಯದ ಅಪಹಾಸ್ಯ” ಎಂದು ಕಟುವಾಗಿ ಟೀಕಿಸಿದೆ.

“ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ” ಎಂದು ಆಜಂ ಖಾನ್ ಪರ ವಾದ ಮಂಡಿಸಿದ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಇದ್ದ ಪೀಠರವು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, 87 ಪ್ರಕರಣಗಳ ಪೈಕಿ 86 ಪ್ರಕರಣಗಳಲ್ಲಿ ಖಾನ್‌ ಅವರಿಗೆ ಜಾಮೀನು ಸಿಕ್ಕಿರುವುದನ್ನು ಗಮನಿಸಿದ್ದಾರೆ. ಮೇ 11ರಂದು ಈ ವಿಷಯದ ಕುರಿತು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳು ಹೇಳಿದ್ದು, “ಆ ವೇಳೆಗೆ ಹೈಕೋರ್ಟ್ ಆದೇಶವನ್ನು ನೀಡುತ್ತದೆ” ಎಂದು ಭರವಸೆ ನೀಡಿದ್ದಾರೆ.

ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಪ್ರಾಜೆಕ್ಟ್‌ಗಾಗಿ ಆಸ್ತಿ ಕಬಳಿಕೆ ಮಾಡಿದ್ದಾರೆಂಬ ಆರೋಪಕ್ಕೆ ಗುರಿಯಾಗಿರುವ ಖಾನ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿತ್ತು.

“ನಾವು ನಿಮಗೆ ಹೇಳುತ್ತೇವೆ ಎಂದು ಈಗ ತೀರ್ಪನ್ನು ಕಾಯ್ದಿರಿಸಲು ಸಾಧ್ಯವಿಲ್ಲ. 137 ದಿನಗಳಾಗಿವೆ. ಯಾವುದೇ ಆದೇಶ ಜಾರಿಯಾಗಿಲ್ಲ. ಆಜಂ ಖಾನ್‌ 86 ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇನ್ನೊಂದು ಪ್ರಕರಣ ಬಾಖಿ ಇದೆ. ಇದು ನ್ಯಾಯದ ಅಪಹಾಸ್ಯ. ನಾವು ಈಗ ಇಷ್ಟು ಮಾತ್ರ ಹೇಳಬಹುದು. ಅಗತ್ಯವಿದ್ದರೆ ನಾವು ಹೆಚ್ಚು ಹೇಳುತ್ತೇವೆ. ಬುಧವಾರ ಬರಲಿ. ನಾವು ಅವರಿಗೆ ಎರಡು ದಿನಗಳ ಕಾಲ ಅವಕಾಶ ನೀಡೋಣ” ಎಂದು ಪೀಠವು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ಖಾನ್ ವಿರುದ್ಧ ಬಾಕಿ ಉಳಿದಿರುವ 87 ಕ್ರಿಮಿನಲ್ ಪ್ರಕರಣಗಳಲ್ಲಿ 84 ಎಫ್‌ಐಆರ್‌ಗಳು 2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ದಾಖಲಾಗಿವೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಈ 84 ಪ್ರಕರಣಗಳಲ್ಲಿ 81 ಪ್ರಕರಣಗಳು 2019ರ ಲೋಕಸಭೆ ಚುನಾವಣೆಯ ಮೊದಲು ಮತ್ತು ನಂತರದ ಅವಧಿಯಲ್ಲಿ ದಾಖಲಾಗಿವೆ.

ಖಾನ್‌ ಅವರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿ ಇಡಲು ಬಿಜೆಪಿಯವರು ದಾಖಲಿಸಿದ ಎಫ್‌ಐಆರ್‌ಗಳು ಇವೆಂದು ಖಾನ್ ಬೆಂಬಲಿಗರು ಹೇಳುತ್ತಾರೆ.

ಫೆಬ್ರವರಿಯಲ್ಲಿ ಉತ್ತರ ಪ್ರದೇಶ ಚುನಾವಣೆಯ ಪ್ರಚಾರಕ್ಕಾಗಿ ಖಾನ್‌ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅರ್ಜಿಯ ವಿಲೇವಾರಿಗಾಗಿ ಸಂಬಂಧಪಟ್ಟ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಹೇಳಿತ್ತು.

ಆಜಂ ಖಾನ್‌ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿರಿ: ಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

ಡಿಸೆಂಬರ್ 4, 2021 ರಂದು ಹೈಕೋರ್ಟ್ ಪ್ರಸ್ತುತ ಭೂಹಗರಣ ಪ್ರಕರಣದಲ್ಲಿ ಜಾಮೀನಿನ ನಿರ್ಧಾರವನ್ನು ಕಾಯ್ದಿರಿಸಿತ್ತು. ಆದರೆ, ರಾಜ್ಯ ಸರ್ಕಾರವು ನಂತರ ಅರ್ಜಿಯನ್ನು ಸಲ್ಲಿಸಿತು. ಗುರುವಾರ ಸಲ್ಲಿಸಿದ ಹೊಸ ಅಫಿಡವಿಟ್‌ಗಳ ಮೂಲಕ ಕೆಲವು ಹೊಸ ಸಂಗತಿಗಳನ್ನು ಪ್ರಸ್ತುತಪಡಿಸಲು ಅನುಮತಿ ಕೋರಿತು.

ನೂರಾರು ಕೋಟಿ ರೂಪಾಯಿಗಳಿಗೂ ಹೆಚ್ಚು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಅಡಿಯಲ್ಲಿ ಖಾನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...