Homeಮುಖಪುಟಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

ಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

- Advertisement -
- Advertisement -

ಭೂಕಬಳಿಕೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ವಿರುದ್ಧ ದಾಖಲಾಗಿರುವ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಲ್ಲಿ ಅಲಹಾಬಾದ್ ಹೈಕೋರ್ಟ್ ವಿಳಂಬ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನಡೆಗೆ ಅಸಮಧಾನ ವ್ಯಕ್ತಪಡಿಸಿರುವ ಸುಪ್ರೀಂ, “ಇದು ನ್ಯಾಯದ ಅಪಹಾಸ್ಯ” ಎಂದು ಕಟುವಾಗಿ ಟೀಕಿಸಿದೆ.

“ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ” ಎಂದು ಆಜಂ ಖಾನ್ ಪರ ವಾದ ಮಂಡಿಸಿದ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಇದ್ದ ಪೀಠರವು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, 87 ಪ್ರಕರಣಗಳ ಪೈಕಿ 86 ಪ್ರಕರಣಗಳಲ್ಲಿ ಖಾನ್‌ ಅವರಿಗೆ ಜಾಮೀನು ಸಿಕ್ಕಿರುವುದನ್ನು ಗಮನಿಸಿದ್ದಾರೆ. ಮೇ 11ರಂದು ಈ ವಿಷಯದ ಕುರಿತು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳು ಹೇಳಿದ್ದು, “ಆ ವೇಳೆಗೆ ಹೈಕೋರ್ಟ್ ಆದೇಶವನ್ನು ನೀಡುತ್ತದೆ” ಎಂದು ಭರವಸೆ ನೀಡಿದ್ದಾರೆ.

ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಪ್ರಾಜೆಕ್ಟ್‌ಗಾಗಿ ಆಸ್ತಿ ಕಬಳಿಕೆ ಮಾಡಿದ್ದಾರೆಂಬ ಆರೋಪಕ್ಕೆ ಗುರಿಯಾಗಿರುವ ಖಾನ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿತ್ತು.

“ನಾವು ನಿಮಗೆ ಹೇಳುತ್ತೇವೆ ಎಂದು ಈಗ ತೀರ್ಪನ್ನು ಕಾಯ್ದಿರಿಸಲು ಸಾಧ್ಯವಿಲ್ಲ. 137 ದಿನಗಳಾಗಿವೆ. ಯಾವುದೇ ಆದೇಶ ಜಾರಿಯಾಗಿಲ್ಲ. ಆಜಂ ಖಾನ್‌ 86 ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇನ್ನೊಂದು ಪ್ರಕರಣ ಬಾಖಿ ಇದೆ. ಇದು ನ್ಯಾಯದ ಅಪಹಾಸ್ಯ. ನಾವು ಈಗ ಇಷ್ಟು ಮಾತ್ರ ಹೇಳಬಹುದು. ಅಗತ್ಯವಿದ್ದರೆ ನಾವು ಹೆಚ್ಚು ಹೇಳುತ್ತೇವೆ. ಬುಧವಾರ ಬರಲಿ. ನಾವು ಅವರಿಗೆ ಎರಡು ದಿನಗಳ ಕಾಲ ಅವಕಾಶ ನೀಡೋಣ” ಎಂದು ಪೀಠವು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ಖಾನ್ ವಿರುದ್ಧ ಬಾಕಿ ಉಳಿದಿರುವ 87 ಕ್ರಿಮಿನಲ್ ಪ್ರಕರಣಗಳಲ್ಲಿ 84 ಎಫ್‌ಐಆರ್‌ಗಳು 2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ದಾಖಲಾಗಿವೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಈ 84 ಪ್ರಕರಣಗಳಲ್ಲಿ 81 ಪ್ರಕರಣಗಳು 2019ರ ಲೋಕಸಭೆ ಚುನಾವಣೆಯ ಮೊದಲು ಮತ್ತು ನಂತರದ ಅವಧಿಯಲ್ಲಿ ದಾಖಲಾಗಿವೆ.

ಖಾನ್‌ ಅವರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿ ಇಡಲು ಬಿಜೆಪಿಯವರು ದಾಖಲಿಸಿದ ಎಫ್‌ಐಆರ್‌ಗಳು ಇವೆಂದು ಖಾನ್ ಬೆಂಬಲಿಗರು ಹೇಳುತ್ತಾರೆ.

ಫೆಬ್ರವರಿಯಲ್ಲಿ ಉತ್ತರ ಪ್ರದೇಶ ಚುನಾವಣೆಯ ಪ್ರಚಾರಕ್ಕಾಗಿ ಖಾನ್‌ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅರ್ಜಿಯ ವಿಲೇವಾರಿಗಾಗಿ ಸಂಬಂಧಪಟ್ಟ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಹೇಳಿತ್ತು.

ಆಜಂ ಖಾನ್‌ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿರಿ: ಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

ಡಿಸೆಂಬರ್ 4, 2021 ರಂದು ಹೈಕೋರ್ಟ್ ಪ್ರಸ್ತುತ ಭೂಹಗರಣ ಪ್ರಕರಣದಲ್ಲಿ ಜಾಮೀನಿನ ನಿರ್ಧಾರವನ್ನು ಕಾಯ್ದಿರಿಸಿತ್ತು. ಆದರೆ, ರಾಜ್ಯ ಸರ್ಕಾರವು ನಂತರ ಅರ್ಜಿಯನ್ನು ಸಲ್ಲಿಸಿತು. ಗುರುವಾರ ಸಲ್ಲಿಸಿದ ಹೊಸ ಅಫಿಡವಿಟ್‌ಗಳ ಮೂಲಕ ಕೆಲವು ಹೊಸ ಸಂಗತಿಗಳನ್ನು ಪ್ರಸ್ತುತಪಡಿಸಲು ಅನುಮತಿ ಕೋರಿತು.

ನೂರಾರು ಕೋಟಿ ರೂಪಾಯಿಗಳಿಗೂ ಹೆಚ್ಚು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಅಡಿಯಲ್ಲಿ ಖಾನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...