HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...