Homeಮುಖಪುಟದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವಿರೋಧಿಸಿ ಮೇ 12ರಂದು ಚೆನ್ನೈನಲ್ಲಿ ಪ್ರತಿಭಟನೆ

- Advertisement -
- Advertisement -

ಚೆನ್ನೈನಲ್ಲಿರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ವಿರೋಧಿಸಿ ಮೇ 12ರಂದು ಪ್ರತಿಭಟನೆ ಸಮಾವೇಶ ನಡೆಸಲು ಕರೆ ನೀಡಲಾಗಿದೆ.

“ಹಿಂದಿ ಹೇರಿಕೆ ಕುರಿತು ನಾವು ಎಷ್ಟೇ ಮಾತನಾಡಿದರೂ, ಒಂದಲ್ಲ ಒಂದು ಪಿತೂರಿಯ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸಿದ್ದು, ಚೆನ್ನೈನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ” ಎಂದು ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಮುಖಂಡರಾದ ಅಭಿಗೌಡ ಹನಕೆರೆ ತಿಳಿಸಿದ್ದಾರೆ.

“ಪ್ರತಿಕ್ರಿಯಾತ್ಮಕ ಹೋರಾಟ ಮಾಡಿದ್ದು ಸಾಕು ರಚನಾತ್ಮಕ ಹೋರಾಟ ಮಾಡೋದು ಬೇಕು ಅನ್ನುವ ಕಾಲದಲ್ಲಿ ಬಂದು ನಿಂತಿದ್ದೇವೆ. ಈ ಹಿಂದಿ ಹೇರಿಕೆ ಎಂಬ ಪಿಡುಗನ್ನು ಶಾಶ್ವತವಾಗಿ ನಿಲ್ಲಿಸೋಣ. ಇದು ಸಾಧ್ಯವಾಗಬೇಕೆಂದರೆ ಸಂವಿಧಾನದಲ್ಲಿ ಆರ್ಟಿಕಲ್ 343 ರಿಂದ 351ರವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತಕ್ಕೆ ಇರುವ ವಿಶೇಷ ಸ್ಥಾನಮಾನ ತೆಗೆದುಹಾಕಬೇಕು. ನಮ್ಮ ಜನಪ್ರತಿನಿಧಿಗಳಿಗೆ ಒತ್ತಡ ಹೇರಿ ಈ ಕೆಲಸ ಮಾಡಿಸಬೇಕಿದೆ. ಚೆನ್ನೈನಲ್ಲಿ ಇರುವ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮುಖ್ಯ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿ ಪ್ರತಿಭಟನೆ ಸಮಾವೇಶ ಮಾಡಲು ಎಲ್ಲರೂ ಚೆನ್ನೈಗೆ ಬರಬೇಕಿದೆ” ಎಂದು ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1918ರಲ್ಲಿ ಶುರುವಾದ ಈ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ 1964 ಮೇ 12ರವರೆಗೆ ಒಂದು ಖಾಸಗಿ ಸಂಸ್ಥೆಯಂತೆ ಕೆಲಸ ಮಾಡುತ್ತಿತ್ತು. 1964 ಜನವರಿ 25ರಂದು 24 ವರುಷದ ಚಿನ್ನಸ್ವಾಮಿ ಅವರು ತಮಿಳು ನಾಡಿನ ತಿರುಚಿಯಲ್ಲಿ ‘ಹಿಂದಿ, ಸಂಸ್ಕೃತ ಅಳಿಯಲಿ, ದ್ರಾವಿಡ ನುಡಿಗಳು ಉಳಿಯಲಿ’ ಎಂದು ಕೂಗುತ್ತಾ, ‘ಒಂದು ದೇಶ, ಒಂದೇ ಭಾಷೆ’ ಚರ್ಚೆಯನ್ನು ವಿರೋಧಿಸುತ್ತ ರೈಲ್ವೇ ಸ್ಟೇಷನ್‌‌ ಮುಂದೆ ಪೆಟ್ರೋಲ್ ಸುರಿದುಕೊಂಡು ಪ್ರಾಣ ತ್ಯಾಗ ಮಾಡಿದರು. ಆದರೆ ಒಕ್ಕೂಟ ಸರ್ಕಾರ ಸಂವಿಧಾನ ಮತ್ತು ಕಾನೂನು ಬದ್ಧವಾಗಿಯೆ ನಿಮ್ಮ ನೆಲದಲ್ಲಿಯೆ ನಿಮ್ಮ ದುಡ್ಡಿನಲ್ಲೇ ಹಿಂದಿ ಹೇರಿಕೆ ಮಾಡ್ತಿವಿ ಎಂದು ಹೊರಟಿತು. ಮೇ 12 1964 ರಿಂದ “National Importance Institute Of India” ಅಂತ Parliament Act ಮಾಡಿಕೊಂಡು ವರುಷಕ್ಕೆ ಅಂದಾಜು 500 ಕೋಟಿ ರೂ.ಗಳನ್ನು ಹಿಂದಿ ಹೇರಿಕೆಗೆ ಕೊಡುತ್ತಿದ್ದಾರೆ. ಒಕ್ಕೂಟ ಸರ್ಕಾರದ ದುಡ್ಡು ಎಂದರೆ ಅದರಲ್ಲಿ ದ್ರಾವಿಡ ಕನ್ನಡಿಗರ ದುಡ್ಡು, ದ್ರಾವಿಡ ತೆಲುಗಿನವರ ದುಡ್ಡು, ದ್ರಾವಿಡ ತಮಿಳಿನವರ ದುಡ್ಡು, ದ್ರಾವಿಡ ಮಲಯಾಳಂನವರ ದುಡ್ಡು ಕೂಡ ಇದೆ” ಎನ್ನುತ್ತಾರೆ ಅಭಿಗೌಡ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮುಖ್ಯ ಕಚೇರಿ ಚೆನ್ನೈ ನಗರದಲ್ಲಿ ಇದೆ. ಇದೇ ಕಾರಣಕ್ಕೆ ದ್ರಾವಿಡ ಕನ್ನಡಿಗರು, ದ್ರಾವಿಡ ತೆಲುಗಿನವರು, ದ್ರಾವಿಡ ತಮಿಳಿನವರು, ದ್ರಾವಿಡ ಮಲಯಾಳಂನವರು ಎಲ್ಲರೂ ಒಗ್ಗೂಡಿ ಚೆನ್ನೈನಲ್ಲಿ ಈ ಪ್ರತಿಭಟನೆ ಮಾಡಬೇಕಿದೆ” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಬಿಗೌಡರ ಈ ಪ್ರತಿಭಟನೆಯನ್ನು ಕನ್ನಡಿಗರು ಮಾತ್ರವಲ್ಲದೆ, ತಮಿಳರು, ತೆಲುಗರು ಮತ್ತು ಮಲಯಾಳಿಗಳೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...