Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...