Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....