Homeದಲಿತ್ ಫೈಲ್ಸ್ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಕೇನಹಳ್ಳಿ ಗ್ರಾಮದ ಸರ್ವೆ ನಂ 58ರ ಸರ್ಕಾರಿ ಜಾಗದಲ್ಲಿ ವಾಸವಿದ್ದ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯ ನೇತೃತ್ವದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, “ಘಟನೆ ನಡೆದ 5 ದಿನ ಕಳದರೂ ಆರೋಪಿಗಳನ್ನು ಬಂಧಿಸಿಲ್ಲ, ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರದ ಸಾಮಾಜಿಕ ಕಾರ್ಯಕರ್ತರಾದ ರಾಜು ಸಣ್ಣಕ್ಕಿಯವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಕನಕೇನಹಳ್ಳಿಯ ಸರ್ವೆ ನಂ58 ರಲ್ಲಿ 3.20 ಎಕರೆ ಇನಾಮ್ತಿ ಸರ್ಕಾರಿ ಜಮೀನಿದೆ. ಅಲ್ಲಿ ಗ್ರಾಮದ ಹೆಚ್ಚಿನ ದಲಿತರು ಮತ್ತು ಕೆಲ ಇತರ ಸಮುದಾಯಗಳು ಗುಡಿಸಲು, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಮುತ್ತುರಾಜೇಗೌಡ ಎಂಬ ಸವರ್ಣೀಯ ಸಮುದಾಯದ ವ್ಯಕ್ತಿ ಅಲ್ಲಿಯೇ ಮನೆ ಕಟ್ಟಿಕೊಂಡಿದ್ದು, ದಲಿತರನ್ನು ಅಲ್ಲಿಂದ ಒಕ್ಕಲೆಬ್ಬಿಸಿ ಇಡೀ ಜಮೀನನ್ನು ಕಬಳಿಸಲು ಯತ್ನಿಸಿದ್ದರು. ಅವರು ಮತ್ತು ಅವರ ಪುತ್ರ ಸೇರಿಕೊಂಡು ಮೇ 03ರ ರಾತ್ರಿ 10.30ರ ಸಮಯದಲ್ಲಿ ನಾಗಮ್ಮ ಮತ್ತು ಹನುಮಕ್ಕನವರ ದಲಿತ ಕುಟುಂಬಗಳ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ” ಎಂದರು.

ಮುತ್ತುರಾಜೇಗೌಡ ಇಡೀ ಜಮೀನು ತನಗೆ ಸೇರಬೇಕೆಂದು ಎ.ಸಿ, ಡಿ.ಸಿ ಮತ್ತು ಕೆಳ ಹಂತದ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದಾಗ ಅವೆಲ್ಲವೂ ವಜಾಗೊಂಡಿವೆ. ಈಗ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲವು ಸಹ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಿರುವಾಗ ಹೆದರಿಸಿ, ಬೆದರಿಸಿ ದಲಿತರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಈ ರೀತಿ ಬೆಂಕಿ ಹಚ್ಚಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ಮೊದ ಮೊದಲು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಆದರೆ ಪ್ರತಿಭಟನೆಗಳು ನಡೆದ ನಂತರ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಆರೋಪಿಗಳನ್ನು ಬಂಧಿಸಿಲ್ಲ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತ ದಲಿತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ದಲಿತ್ ಫೈಲ್ಸ್: ದಲಿತ ದಮನಿತರ ಮೇಲಿನ ದೌರ್ಜನ್ಯಗಳು-ಪ್ರತಿರೋಧದ ಸುದ್ದಿಗಳನ್ನು ಇಲ್ಲಿ ಓದಿ

ಗ್ರಾಮದಲ್ಲಿ ದಲಿತರಿಗೆ ಸಣ್ಣ ಸಣ್ಣ ಮನೆಗಳಷ್ಟೆ ಇವೆ. ಹಾಗಾಗಿ ಅವರು ಅನಿವಾರ್ಯವಾಗಿ ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ತಹಶೀಲ್ದಾರ್‌ರವರು ಬೇರೆಡೆ 11 ಕುಂಟೆ ಜಾಗ ನೀಡುವುದಾಗಿ ಹೇಳಿದ್ದಾರೆ. ಆದರೆ 50ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೆ ಆ ಜಾಗ ಸಾಲುವುದಿಲ್ಲ ಮಾತ್ರವಲ್ಲ, ಅದು ನಿಜವಾಗಿಯೂ ದಲಿತರ ಕೈಗೆ ಸಿಗುವುದು ಅಷ್ಟು ಸುಲಭವಲ್ಲ. ಹಾಗಾಗಿ ಸದ್ಯ ದಲಿತರು ಇರುವ ಜಾಗವನ್ನು ಅವರ ಹೆಸರಿಗೆ ಮಾಡಿ ಹಕ್ಕುಪತ್ರ ನೀಡಬೇಕು. ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಪ್ರಜಾ ವಿಮೋಚನಾ ಚಳವಳಿಯ ಅಧ್ಯಕ್ಷರಾದ ಮುನಿ ಆಂಜನಪ್ಪ ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಪೊಲೀಸರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತೇವೆ ಎಂದು ಡಿವೈಎಸ್‌ಪಿ ನಾಗರಾಜು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....