Homeದಲಿತ್ ಫೈಲ್ಸ್ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳ ಬಂಧನಕ್ಕೆ ಒತ್ತಾಯ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಕೇನಹಳ್ಳಿ ಗ್ರಾಮದ ಸರ್ವೆ ನಂ 58ರ ಸರ್ಕಾರಿ ಜಾಗದಲ್ಲಿ ವಾಸವಿದ್ದ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯ ನೇತೃತ್ವದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, “ಘಟನೆ ನಡೆದ 5 ದಿನ ಕಳದರೂ ಆರೋಪಿಗಳನ್ನು ಬಂಧಿಸಿಲ್ಲ, ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರದ ಸಾಮಾಜಿಕ ಕಾರ್ಯಕರ್ತರಾದ ರಾಜು ಸಣ್ಣಕ್ಕಿಯವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಕನಕೇನಹಳ್ಳಿಯ ಸರ್ವೆ ನಂ58 ರಲ್ಲಿ 3.20 ಎಕರೆ ಇನಾಮ್ತಿ ಸರ್ಕಾರಿ ಜಮೀನಿದೆ. ಅಲ್ಲಿ ಗ್ರಾಮದ ಹೆಚ್ಚಿನ ದಲಿತರು ಮತ್ತು ಕೆಲ ಇತರ ಸಮುದಾಯಗಳು ಗುಡಿಸಲು, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಮುತ್ತುರಾಜೇಗೌಡ ಎಂಬ ಸವರ್ಣೀಯ ಸಮುದಾಯದ ವ್ಯಕ್ತಿ ಅಲ್ಲಿಯೇ ಮನೆ ಕಟ್ಟಿಕೊಂಡಿದ್ದು, ದಲಿತರನ್ನು ಅಲ್ಲಿಂದ ಒಕ್ಕಲೆಬ್ಬಿಸಿ ಇಡೀ ಜಮೀನನ್ನು ಕಬಳಿಸಲು ಯತ್ನಿಸಿದ್ದರು. ಅವರು ಮತ್ತು ಅವರ ಪುತ್ರ ಸೇರಿಕೊಂಡು ಮೇ 03ರ ರಾತ್ರಿ 10.30ರ ಸಮಯದಲ್ಲಿ ನಾಗಮ್ಮ ಮತ್ತು ಹನುಮಕ್ಕನವರ ದಲಿತ ಕುಟುಂಬಗಳ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ” ಎಂದರು.

ಮುತ್ತುರಾಜೇಗೌಡ ಇಡೀ ಜಮೀನು ತನಗೆ ಸೇರಬೇಕೆಂದು ಎ.ಸಿ, ಡಿ.ಸಿ ಮತ್ತು ಕೆಳ ಹಂತದ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದಾಗ ಅವೆಲ್ಲವೂ ವಜಾಗೊಂಡಿವೆ. ಈಗ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲವು ಸಹ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹೀಗಿರುವಾಗ ಹೆದರಿಸಿ, ಬೆದರಿಸಿ ದಲಿತರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಈ ರೀತಿ ಬೆಂಕಿ ಹಚ್ಚಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ಮೊದ ಮೊದಲು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಆದರೆ ಪ್ರತಿಭಟನೆಗಳು ನಡೆದ ನಂತರ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಆರೋಪಿಗಳನ್ನು ಬಂಧಿಸಿಲ್ಲ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತ ದಲಿತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ದಲಿತ್ ಫೈಲ್ಸ್: ದಲಿತ ದಮನಿತರ ಮೇಲಿನ ದೌರ್ಜನ್ಯಗಳು-ಪ್ರತಿರೋಧದ ಸುದ್ದಿಗಳನ್ನು ಇಲ್ಲಿ ಓದಿ

ಗ್ರಾಮದಲ್ಲಿ ದಲಿತರಿಗೆ ಸಣ್ಣ ಸಣ್ಣ ಮನೆಗಳಷ್ಟೆ ಇವೆ. ಹಾಗಾಗಿ ಅವರು ಅನಿವಾರ್ಯವಾಗಿ ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ತಹಶೀಲ್ದಾರ್‌ರವರು ಬೇರೆಡೆ 11 ಕುಂಟೆ ಜಾಗ ನೀಡುವುದಾಗಿ ಹೇಳಿದ್ದಾರೆ. ಆದರೆ 50ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೆ ಆ ಜಾಗ ಸಾಲುವುದಿಲ್ಲ ಮಾತ್ರವಲ್ಲ, ಅದು ನಿಜವಾಗಿಯೂ ದಲಿತರ ಕೈಗೆ ಸಿಗುವುದು ಅಷ್ಟು ಸುಲಭವಲ್ಲ. ಹಾಗಾಗಿ ಸದ್ಯ ದಲಿತರು ಇರುವ ಜಾಗವನ್ನು ಅವರ ಹೆಸರಿಗೆ ಮಾಡಿ ಹಕ್ಕುಪತ್ರ ನೀಡಬೇಕು. ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಪ್ರಜಾ ವಿಮೋಚನಾ ಚಳವಳಿಯ ಅಧ್ಯಕ್ಷರಾದ ಮುನಿ ಆಂಜನಪ್ಪ ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಪೊಲೀಸರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತೇವೆ ಎಂದು ಡಿವೈಎಸ್‌ಪಿ ನಾಗರಾಜು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...