Homeರಾಷ್ಟ್ರೀಯದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತಪರಾಕಿ ನಂತರ ಸುದರ್ಶನ್‌ ಟಿವಿ ಸಂಪಾದಕನ ದ್ವೇಷ ಭಾಷಣದ ವಿರುದ್ದ FIR

ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತಪರಾಕಿ ನಂತರ ಸುದರ್ಶನ್‌ ಟಿವಿ ಸಂಪಾದಕನ ದ್ವೇಷ ಭಾಷಣದ ವಿರುದ್ದ FIR

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ವಾಗ್ದಂಡನೆಗೆ ಒಳಗಾದ ನಂತರ ‘ಧರಮ್ ಸಂಸದ್’ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದ್ವೇಷ ಭಾಷಣದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಸದಾಗಿ ಅಫಿಡವಿಟ್ ಸಲ್ಲಿಸಿದ್ದು, ಇಂದು ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಹಿಂದೂ ಯುವ ವಾಹಿನಿಯ ಕಾರ್ಯಕ್ರಮವೊಂದರಲ್ಲಿ “ಹಿಂದೂ ರಾಷ್ಟ್ರ”ಕ್ಕಾಗಿ ಕರೆ ನೀಡಿದ ಭಾಷಣವು ‘‘ದ್ವೇಷ ಭಾಷಣವಲ್ಲ” ಎಂದು ದೆಹಲಿ ಪೊಲೀಸರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಕಾರ್ಯಕ್ರಮದಲ್ಲಿ ಸುದರ್ಶನ ಸುದ್ದಿ ಟಿವಿ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸಭೆಯಲ್ಲಿ ಸೇರಿದ್ದ ಜನರಿಗೆ ಪ್ರತಿಜ್ಞೆ ಹೇಳಿಕೊಡುತ್ತಾ, “ದೇಶವನ್ನು ಹಿಂದೂ ರಾಷ್ಟ್ರ ಮಾಡುವುದಕ್ಕಾಗಿ ನಾವು ಹೋರಾಡುತ್ತೇವೆ. ಅದಕ್ಕಾಗಿ ಸಾಯುತ್ತೇವೆ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ” ಎಂದು ಹೇಳಿ ಕೊಟ್ಟಿದ್ದರು.

ಇದನ್ನೂ ಓದಿ:ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ 

ಕಾರ್ಯಕ್ರಮವೂ ಕಳೆದ ವರ್ಷ ಡಿಸೆಂಬರ್ 19 ರಂದು ನಡೆದಿದ್ದು, ಬಲಪಂಥೀಯ ಗುಂಪು ಹಿಂದೂ ಯುವ ವಾಹಿನಿ ಆಯೋಜಿಸಿತ್ತು.

ದೆಹಲಿ ಪೊಲೀಸರು ಸಲ್ಲಿಸಿರುವ ಹೊಸ ಅಫಿಡವಿಟ್‌ನಲ್ಲಿ, ವಿಷಯಗಳನ್ನು ಪರಿಶೀಲಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

“ದೂರುಗಳಲ್ಲಿನ ಎಲ್ಲಾ ಲಿಂಕ್‌ಗಳು ಮತ್ತು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿರುವ ಇತರ ವಿಷಯಗಳನ್ನು ವಿಶ್ಲೇಷಿಸಲಾಗಿದೆ. ಘಟನೆಯ ವಿಡಿಯೊ ಯೂಟ್ಯೂಬ್‌ನಲ್ಲಿ ಕಂಡುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶೀಲನೆಯ ನಂತರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 295A, 298 ಮತ್ತು 34 ರ ಅಡಿಯಲ್ಲಿ ಅಪರಾಧಗಳಿಗಾಗಿ ಓಖ್ಲಾ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆಯಲ್ಲಿ ಮೇ 4 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಎಲ್ಲಾ ಆರೋಪಗಳು ಧಾರ್ಮಿಕ ದ್ವೇಷವನ್ನು ಉತ್ತೇಜಿಸಲು ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ 

ಪೊಲೀಸರು ತಮ್ಮ ಹಿಂದಿನ ಅಫಿಡವಿಟ್‌ನಲ್ಲಿ, ಕಾರ್ಯಕ್ರಮದಲ್ಲಿ ಹಿಂದೂರಾಷ್ಟ್ರಕ್ಕಾಗಿ ತೆಗೆದುಕೊಂಡ ಪ್ರತಿಜ್ಞೆಯು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಭಾಷಣವಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದರು. ಮುಸ್ಲಿಮರ ಹತ್ಯಾಕಾಂಡದ ಬಹಿರಂಗ ಕರೆ ಎಂದು ಅರ್ಥೈಸಬಹುದಾದ ಯಾವುದೆ ಪದಗಳ ಬಳಕೆ ಅಲ್ಲಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದರು.

ಆಪಾದಿತ ದ್ವೇಷ ಭಾಷಣದ ವೀಡಿಯೊದಲ್ಲಿ, “ಜನಾಂಗೀಯ ಶುದ್ಧೀಕರಣ ಮಾಡುವ ಸಲುವಾಗಿ ಮುಸ್ಲಿಮರ ನರಮೇಧಕ್ಕೆ ಅಥವಾ ಇಡೀ ಸಮುದಾಯದ ಹತ್ಯೆಗೆ ನೀಡಿದ ಮುಕ್ತ ಕರೆ” ಎಂದು ಅರ್ಥೈಸಬಹುದಾದಂತಹ ಪದಗಳ ಬಳಕೆ ಮಾಡಿಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದರೆ ಏಪ್ರಿಲ್ 22 ರಂದು, ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿ, “ಉತ್ತಮ ಅಫಿಡವಿಟ್” ಸಲ್ಲಿಸುವಂತೆ ಪೊಲೀಸರನ್ನು ಕೇಳಿತ್ತು.

ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧರ್ಮ ಸಂಸದ್‌ಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ದ್ವೇಷ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಮಾಜಿ ಹೈಕೋರ್ಟ್ ನ್ಯಾಯಾಧೀಶೆ ಮತ್ತು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ ಹಿಂದೂ ಯುವ ವಾಹಿನಿಯಿಂದ ಮತ್ತು ಹರಿದ್ವಾರದಲ್ಲಿ ಯತಿ ನರಸಿಂಹಾನಂದ ಅವರಿಂದ ಆಯೋಜಿಸಲಾದ ಎರಡು ಕಾರ್ಯಕ್ರಮಗಳು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಮುಕ್ತ ಕರೆಗಳನ್ನು ನೀಡಿದ್ದವು ಮತ್ತು ಅಲ್ಲಿ ದ್ವೇಷದ ಭಾಷಣಗಳನ್ನು ಮಾಡಲಾಗಿತ್ತು.

ದ್ವೇಷದ ಭಾಷಣ ಪ್ರಕರಣದ ವಿಚಾರಣೆ ಮೇ 9 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....