Homeರಾಷ್ಟ್ರೀಯದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತಪರಾಕಿ ನಂತರ ಸುದರ್ಶನ್‌ ಟಿವಿ ಸಂಪಾದಕನ ದ್ವೇಷ ಭಾಷಣದ ವಿರುದ್ದ FIR

ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತಪರಾಕಿ ನಂತರ ಸುದರ್ಶನ್‌ ಟಿವಿ ಸಂಪಾದಕನ ದ್ವೇಷ ಭಾಷಣದ ವಿರುದ್ದ FIR

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ವಾಗ್ದಂಡನೆಗೆ ಒಳಗಾದ ನಂತರ ‘ಧರಮ್ ಸಂಸದ್’ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದ್ವೇಷ ಭಾಷಣದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಸದಾಗಿ ಅಫಿಡವಿಟ್ ಸಲ್ಲಿಸಿದ್ದು, ಇಂದು ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಹಿಂದೂ ಯುವ ವಾಹಿನಿಯ ಕಾರ್ಯಕ್ರಮವೊಂದರಲ್ಲಿ “ಹಿಂದೂ ರಾಷ್ಟ್ರ”ಕ್ಕಾಗಿ ಕರೆ ನೀಡಿದ ಭಾಷಣವು ‘‘ದ್ವೇಷ ಭಾಷಣವಲ್ಲ” ಎಂದು ದೆಹಲಿ ಪೊಲೀಸರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಕಾರ್ಯಕ್ರಮದಲ್ಲಿ ಸುದರ್ಶನ ಸುದ್ದಿ ಟಿವಿ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸಭೆಯಲ್ಲಿ ಸೇರಿದ್ದ ಜನರಿಗೆ ಪ್ರತಿಜ್ಞೆ ಹೇಳಿಕೊಡುತ್ತಾ, “ದೇಶವನ್ನು ಹಿಂದೂ ರಾಷ್ಟ್ರ ಮಾಡುವುದಕ್ಕಾಗಿ ನಾವು ಹೋರಾಡುತ್ತೇವೆ. ಅದಕ್ಕಾಗಿ ಸಾಯುತ್ತೇವೆ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ” ಎಂದು ಹೇಳಿ ಕೊಟ್ಟಿದ್ದರು.

ಇದನ್ನೂ ಓದಿ:ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ 

ಕಾರ್ಯಕ್ರಮವೂ ಕಳೆದ ವರ್ಷ ಡಿಸೆಂಬರ್ 19 ರಂದು ನಡೆದಿದ್ದು, ಬಲಪಂಥೀಯ ಗುಂಪು ಹಿಂದೂ ಯುವ ವಾಹಿನಿ ಆಯೋಜಿಸಿತ್ತು.

ದೆಹಲಿ ಪೊಲೀಸರು ಸಲ್ಲಿಸಿರುವ ಹೊಸ ಅಫಿಡವಿಟ್‌ನಲ್ಲಿ, ವಿಷಯಗಳನ್ನು ಪರಿಶೀಲಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

“ದೂರುಗಳಲ್ಲಿನ ಎಲ್ಲಾ ಲಿಂಕ್‌ಗಳು ಮತ್ತು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿರುವ ಇತರ ವಿಷಯಗಳನ್ನು ವಿಶ್ಲೇಷಿಸಲಾಗಿದೆ. ಘಟನೆಯ ವಿಡಿಯೊ ಯೂಟ್ಯೂಬ್‌ನಲ್ಲಿ ಕಂಡುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶೀಲನೆಯ ನಂತರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 295A, 298 ಮತ್ತು 34 ರ ಅಡಿಯಲ್ಲಿ ಅಪರಾಧಗಳಿಗಾಗಿ ಓಖ್ಲಾ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆಯಲ್ಲಿ ಮೇ 4 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಎಲ್ಲಾ ಆರೋಪಗಳು ಧಾರ್ಮಿಕ ದ್ವೇಷವನ್ನು ಉತ್ತೇಜಿಸಲು ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ 

ಪೊಲೀಸರು ತಮ್ಮ ಹಿಂದಿನ ಅಫಿಡವಿಟ್‌ನಲ್ಲಿ, ಕಾರ್ಯಕ್ರಮದಲ್ಲಿ ಹಿಂದೂರಾಷ್ಟ್ರಕ್ಕಾಗಿ ತೆಗೆದುಕೊಂಡ ಪ್ರತಿಜ್ಞೆಯು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಭಾಷಣವಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದರು. ಮುಸ್ಲಿಮರ ಹತ್ಯಾಕಾಂಡದ ಬಹಿರಂಗ ಕರೆ ಎಂದು ಅರ್ಥೈಸಬಹುದಾದ ಯಾವುದೆ ಪದಗಳ ಬಳಕೆ ಅಲ್ಲಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದರು.

ಆಪಾದಿತ ದ್ವೇಷ ಭಾಷಣದ ವೀಡಿಯೊದಲ್ಲಿ, “ಜನಾಂಗೀಯ ಶುದ್ಧೀಕರಣ ಮಾಡುವ ಸಲುವಾಗಿ ಮುಸ್ಲಿಮರ ನರಮೇಧಕ್ಕೆ ಅಥವಾ ಇಡೀ ಸಮುದಾಯದ ಹತ್ಯೆಗೆ ನೀಡಿದ ಮುಕ್ತ ಕರೆ” ಎಂದು ಅರ್ಥೈಸಬಹುದಾದಂತಹ ಪದಗಳ ಬಳಕೆ ಮಾಡಿಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದರೆ ಏಪ್ರಿಲ್ 22 ರಂದು, ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿ, “ಉತ್ತಮ ಅಫಿಡವಿಟ್” ಸಲ್ಲಿಸುವಂತೆ ಪೊಲೀಸರನ್ನು ಕೇಳಿತ್ತು.

ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧರ್ಮ ಸಂಸದ್‌ಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ದ್ವೇಷ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಮಾಜಿ ಹೈಕೋರ್ಟ್ ನ್ಯಾಯಾಧೀಶೆ ಮತ್ತು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ ಹಿಂದೂ ಯುವ ವಾಹಿನಿಯಿಂದ ಮತ್ತು ಹರಿದ್ವಾರದಲ್ಲಿ ಯತಿ ನರಸಿಂಹಾನಂದ ಅವರಿಂದ ಆಯೋಜಿಸಲಾದ ಎರಡು ಕಾರ್ಯಕ್ರಮಗಳು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಮುಕ್ತ ಕರೆಗಳನ್ನು ನೀಡಿದ್ದವು ಮತ್ತು ಅಲ್ಲಿ ದ್ವೇಷದ ಭಾಷಣಗಳನ್ನು ಮಾಡಲಾಗಿತ್ತು.

ದ್ವೇಷದ ಭಾಷಣ ಪ್ರಕರಣದ ವಿಚಾರಣೆ ಮೇ 9 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...