Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...