Homeದಲಿತ್ ಫೈಲ್ಸ್ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

- Advertisement -
- Advertisement -

“ಸಂವಿಧಾನಕ್ಕಿಂತ ವೇದಗಳೇ ಹೆಚ್ಚು ಶ್ರೇಷ್ಠ. ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿರುವ ಉಜಿರೆಯ ಶ್ರೀರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಭಾರತ ಭಾಗ್ಯವಿಧಾತ ಅಂಬೇಡ್ಕರ್‌’ ಫೇಸ್‌‌ಬುಕ್‌ ಪೇಜ್‌ನ ಅಡ್ಮಿನ್‌ ಬಾಗಲಕೋಟೆ ಮೂಲದ ಶಿವರಾಜ್‌ ಎಂಬವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶಿವರಾಜ್‌ ಅವರಿಗೆ ಜಾಮೀನು ದೊರೆತಿದೆ.

ಸ್ವಾಮೀಜಿಯವರನ್ನು ಶಿವರಾಜ್‌ ಅವ್ಯಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಸಿದ್ದಾಪುರ ತಾಲ್ಲೂಕಿನ ಹರಕನಹಳ್ಳಿಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, “ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ” ಎಂದು ಹೇಳಿರುವುದು ಪತ್ರಿಕೆಯೊಂದರಲ್ಲಿ ಮುದ್ರಣವಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗಿರುವ ಹೇಳಿಕೆಗೆ ಪ್ರತಿಯಾಗಿ ಮತ್ತೊಂದು ಕೌಂಟರ್‌ ಹೇಳಿಕೆಯನ್ನು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನಲ್ಲಿ ಎಡಿಟ್‌‌ ಮಾಡಲಾದ ಫೋಟೋ ಬಳಸಲಾಗಿದ್ದು, “ಸ್ವಾಮೀಜಿ ಹೆಸರನ್ನು ಕೆಟ್ಟದ್ದಾಗಿ ಬರೆಯಲಾಗಿದೆ” ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೃಷ್ಣಪ್ಪ ನಾಯ್ಕರ್‌ ಎಂಬವರು ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಭಾರತ ಭಾಗ್ಯವಿಧಾತ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್‌ ಶಿವರಾಜ್‌, ‘ಖಡ್ಗ’ ಎಂಬ ಫೇಸ್‌‌ಬುಕ್‌ ಖಾತೆಯಲ್ಲಿ ಈ ಫೋಟೋ ಸಿಕ್ಕಿತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ, ನನ್ನದೇ ಆದ ಅಭಿಪ್ರಾಯವನ್ನು ಬರೆದಿದ್ದೆ. ಸಂವಿಧಾನಕ್ಕಿಂತ ವೇದವೇ ಶ್ರೇಷ್ಠ ಎಂದು ಹೇಳಿಕೆ ನೀಡಿರುವ ಸ್ವಾಮೀಜಿ ಕುರಿತ ವರದಿಯನ್ನು ಉಲ್ಲೇಖಿಸಲು ಈ ಫೋಟೋವನ್ನು ಬಳಸಿದ್ದೇನೆಯೇ ಹೊರತು, ‘ಅನ್ನಕ್ಕಿಂತ ಸಗಣಿಯೇ ಶ್ರೇಷ್ಠ’ ಎಂಬ ಶೀರ್ಷಿಕೆಯಲ್ಲಿರುವ ಹೇಳಿಕೆ ನನ್ನದ್ದಲ್ಲ” ಎಂದು ಸ್ಪಷ್ಟಪಡಿಸಿದರು.

“ಸ್ವಾಮಿ ನಿಮ್ಮ ವೇದ ಉಪನಿಷತ್‌‌ಗಳಿಂದ ಎಲ್ಲರನ್ನು ಒಂದೇ ರೀತಿ ನೋಡೋಕೆ ಹೇಳಿ. ಜಾತಿ ಜಾತಿ ಅಂತ ಸಾಯೋವರೆಗೆ ಎಲ್ಲರನ್ನು ಸಮನಾಗಿ ನೋಡೋಕೆ ಹೇಳಿ. ಮೊದಲು ನೀವು ಯಾವಾಗಲಾದ್ರೂ ಎಲ್ಲರನ್ನು ಸಮಾನರಾಗಿ ನೋಡಿದ್ದೀರಾ? ಅದು ನಿಮ್ಮಿಂದ ಸಾಧ್ಯ ಇಲ್ಲ. ಎಲ್ಲಾ ಗ್ರಂಥಗಳಿಗೆ ಶ್ರೇಷ್ಠ ವಾದದ್ದು ನಮ್ಮ ಸಂವಿಧಾನ, ಸಂವಿಧಾನದ ಬಗ್ಗೆ ಮಾತೋಡೋಕೆ ಒಂದು ಯೋಗ್ಯತೆ ಬೇಕು ಅದು ತಿಳಿದವರಿಗೆ ಮಾತ್ರ ಗೊತ್ತು” ಎಂಬ ಅಭಿಪ್ರಾಯವನ್ನು ಶಿವರಾಜ್‌ ‘#ಭಾರತ_ಭಾಗ್ಯವಿದಾತ_ಅಂಬೇಡ್ಕರ್’ ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿದ್ದಾರೆ.

“ಪೊಲೀಸ್‌ನವರು ನನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ಖಡ್ಗ’ ಎಂಬ ನಕಲಿ ಖಾತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಎಂ.ಜೆ. ಎಂಬ ಲೋಗೋ ಅಡಿಯಲ್ಲಿ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ನಾನು ಬಳಸಿರುವ ಫೋಟೋದಲ್ಲಿಯೂ ಕೂಡ ಎಂ.ಜೆ. ಲೋಗೋ ಇರುವುದನ್ನು ಗಮನಿಸಬಹುದು” ಎನ್ನುತ್ತಾರೆ ಶಿವರಾಜ್‌‌

ಪೋಸ್ಟ್‌ ಗಮನಿಸಿದ ಕೆಲವು ಮುಖಂಡರು ಕೃಷ್ಣಪ್ಪ ನಾಯ್ಕರ್‌ ಎಂಬವರಿಂದ ಸಿದ್ದಾಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗಿ ಸ್ಪಷ್ಟನೆಯನ್ನು ನೀಡಿರುವ ಶಿವರಾಜ್‌ ಅವರಿಗೆ ಈಗ ಜಾಮೀನು ಕೂಡ ದೊರೆತಿದೆ. ಏಪ್ರಿಲ್‌ 29ರಂದು ಮಾಡಲಾಗಿದ್ದ ಪೋಸ್ಟ್‌ಗೆ ಏಪ್ರಿಲ್‌ 30ರಂದು ಪ್ರಕರಣ ದಾಖಲಿಸಲಾಗಿತ್ತು. ದಲಿತ ಸಂಘಟನೆಗಳು ಹಾಜರಿದ್ದು ಶಿವರಾಜ್‌ ಅವರಿಗೆ ಧೈರ್ಯ ತುಂಬಿವೆ.

ಸಂವಿಧಾನದ ಕುರಿತು ಆಗಾಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಪ್ರಕರಣಗಳು ಆಗಾಗ್ಗೆ ಘಟಿಸುತ್ತಿವೆ. ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದರು. ಸಂವಿಧಾನದ ಅವಧಿ ಮುಗಿದಿದೆಯೇ ಎಂಬ ಚರ್ಚಾ ಸ್ಪರ್ಧೆಯನ್ನು ಬೆಂಗಳೂರಿನ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈಗ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿರುವುದು ವರದಿಯಾಗಿದೆ. (ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವರದಿಯ ಪ್ರತಿ ಯಾವ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ‘ನಾನುಗೌರಿ.ಕಾಂ’ ಸ್ವತಂತ್ರವಾಗಿ ಪರಿಶೀಲಿಸಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...