Homeರಾಷ್ಟ್ರೀಯದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

- Advertisement -
- Advertisement -

ದೆಹಲಿಯ ಜಹಾಂಗೀರಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕೋಮು ಘರ್ಷಣೆಗೂ ಮೊದಲು ನಡೆದ ಕಾನೂನುಬಾಹಿರ ಮೆರವಣಿಗೆಯನ್ನು ತಡೆಯದೆ ಇದ್ದಿದ್ದಕ್ಕಾಗಿ ಸ್ಥಳೀಯ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಘಟನೆಯಲ್ಲಿನ ‘ಸಂಪೂರ್ಣ ವಿಫಲತೆ’ಯನ್ನು ಪೊಲೀಸ್‌ ಮುಖ್ಯಸ್ಥರು ತನಿಖೆ ನಡೆಸಬೇಕು ಎಂದಿರುವ ನ್ಯಾಯಾಲಯ ಘಟನೆಯಲ್ಲಿ ಒಳಗೊಂಡಿರುವ ಅಧಿಕಾರಿಗಳ ಹೊಣೆಗಾರಿಕೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಕೋಮು ಘರ್ಷಣೆಯಲ್ಲಿ ಭಾಗಿಯಾದ ಎಂಟು ಜನರ ಜಾಮೀನನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳು ಸ್ಥಳೀಯ ಕ್ರಿಮಿನಲ್‌ಗಳಾಗಿದ್ದು, ಅವರು ಬಿಡುಗಡೆಯಾದರೆ ಸಾಕ್ಷಿಗಳನ್ನು ಬೆದರಿಸಬಹುದು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭ ವಾಯುವ್ಯ ದೆಹಲಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇಪ್ಪತ್ತು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಮೆರವಣಿಗೆ ನಡೆದಿದ್ದು ಮಾತ್ರವಲ್ಲದೆ, ಪೊಲೀಸರ ಸಮ್ಮುಖದಲ್ಲಿಯೇ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಾಗ್ವಾದ ನಡೆಸಲಾಗಿತ್ತು.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಕ್ರಮ ಮೆರವಣಿಗೆಯನ್ನು ನಿಲ್ಲಿಸಿ ಗುಂಪನ್ನು ಚದುರಿಸುವ ಬದಲು, ಪೊಲೀಸ್ ಅಧಿಕಾರಿಗಳು ದಾರಿಯಲ್ಲಿ ಅದರೊಂದಿಗೆ ಸಾಗುತ್ತಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ದೆಹಲಿ ಗಲಭೆಗೂ ಮೊದಲು ಒಟ್ಟು ಮೂರು ಮೆರವಣಿಗೆ ನಡೆದಿದ್ದು, ಅದರಲ್ಲಿ ಕೊನೆಯ ಮೆರವಣೆಗೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಮೆರವಣಿಗೆಯನ್ನು ಬಿಜೆಪಿ ಬೆಂಬಲಿತ ವಿಹಿಂಪ ಮತ್ತು ಬಜರಂಗದಳ ಆಯೋಜಿಸಿತ್ತು.

“ಇನ್‌ಸ್ಪೆಕ್ಟರ್ ರಾಜೀವ್ ರಂಜನ್ ನೇತೃತ್ವದ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯ ಸ್ಥಳೀಯ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು…ಆಪಾದಿತ ಅಕ್ರಮ ಮೆರವಣಿಗೆಯ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿರುವ ವಿಷಯಗಳು ತೋರಿಸುತ್ತವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

“ಯಾವುದೇ ಅನುಮತಿಯಿಲ್ಲದೆ ನಡೆದ ಮೆರವಣಿಗೆಯನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರ ಸಂಪೂರ್ಣ ವೈಫಲ್ಯವನ್ನು ಇದು ಪ್ರಾಥಮಿಕವಾಗಿ ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...