Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...