Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...