Homeಮುಖಪುಟವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

- Advertisement -
- Advertisement -

ಲಂಡನ್‌: ಟೋರಿ ನಿಧಿಸಂಗ್ರಹಣೆಯ ಔತಣಕೂಟದಲ್ಲಿ ಏರ್ಪಡಿಸಲಾಗಿದ್ದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರ ಭಾಷಣದ ವೇಳೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಾಂಗೀಯವಾದ” ಪ್ರತಿಪಾದಿಸುವ ರುವಾಂಡಾ ನಿರಾಶ್ರಿತರ ಯೋಜನೆಯನ್ನು ರದ್ದುಗೊಳಿಸುವಂತೆ ಪ್ರೀತಿ ಪಟೇಲ್ ಅವರನ್ನು ಒತ್ತಾಯಿಸಿದ್ದಾರೆ.

ಗ್ರೀನ್ ನ್ಯೂ ಡೀಲ್ ರೈಸಿಂಗ್‌ನ ಹೋರಾಟಗಾರರು ಬಾಸ್ಸೆಟ್ಲಾ ಕನ್ಸರ್ವೇಟಿವ್ ಪಾರ್ಟಿಯ ಸ್ಪ್ರಿಂಗ್ ಡಿನ್ನರ್‌ನಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅತಿಥಿಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಬ್ಬೊಬ್ಬರಾಗಿ ಎದ್ದುನಿಂತು ಪ್ರತಿಭಟನೆ ನಡೆಸುತ್ತಿರುವ ರೀತಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಪ್ರಜಾಪ್ರಭುತ್ವದ ರೀತಿ ಇದೆಂದು ಬಣ್ಣಿಸಲಾಗುತ್ತಿದೆ. “ನಿಮ್ಮ ಜನಾಂಗೀಯ ನೀತಿಗಳು ಜನರನ್ನು ಕೊಲ್ಲುತ್ತಿವೆ. ಸಮಾಜದಲ್ಲಿ ನ್ಯಾಯಯುತ ಮತ್ತು ಸಹಾನುಭೂತಿಯಿಂದ ಬದುಕಲು ಬಯಸುವ ಯುವಕರಾದ ನಾವು ನಿರಾಶ್ರಿತರ ಕುರಿತ ನಿಮ್ಮ ವರ್ತನೆಯ ಕಾರಣ ಅಸಹ್ಯಪಡುತ್ತೇವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಭದ್ರತಾ ಸಿಬ್ಬಂದಿ ಒಬ್ಬೊಬ್ಬರನ್ನು ಗೌರವಯುತವಾಗಿ ಹೊರಗೆ ಕರೆದೊಯ್ಯುತ್ತಿರುವ ವಿಡಿಯೊ ವೈರಲ್‌ ಆಗುತ್ತಿದೆ. “ಜೋರಾಗಿ ಹೇಳಿ, ಸ್ಪಷ್ಟವಾಗಿ ಹೇಳಿ, ನಿರಾಶ್ರಿತರಿಗೆ ಇಲ್ಲಿ ಸ್ವಾಗತವಿದೆ” ಎಂದು ಘೋಷಣೆಗಳನ್ನು ಹೋರಾಟಗಾರರು ಕೂಗಿದ್ದಾರೆ.

ಪ್ರತಿಭಟನೆಯ ಭಾಗವಾಗಿದ್ದ ಗ್ರೀನ್ ನ್ಯೂ ಡೀಲ್ ರೈಸಿಂಗ್ ಕಾರ್ಯಕರ್ತ ಹಾಲಿ ಹಡ್ಸನ್, “ಜನರು ಎಲ್ಲಿಂದ ಬಂದರೂ ಕಾಳಜಿ ಮತ್ತು ಗೌರವವನ್ನು ನೀಡುವ ಸಮಾಜದಲ್ಲಿ ನಾನು ಬೆಳೆಯಲು ಬಯಸುತ್ತೇನೆ. ಪ್ರೀತಿ ಪಟೇಲ್ ಅವರ ರುವಾಂಡಾ ಯೋಜನೆ ಮತ್ತು ಪ್ರೀತಿಯವರ ಬಗ್ಗೆ ನನಗೆ ಅಸಹ್ಯವಿದೆ. ವಲಸೆ ನೀತಿಗಳು ಹಿಂಸಾತ್ಮಕ, ಕಾನೂನುಬಾಹಿರವಾಗಿವೆ. ಅಮಾನವೀಯ ನೀತಿಗಳು ಸಮಾಜದಾದ್ಯಂತ ಖಂಡಿಸಲ್ಪಟ್ಟಿವೆ” ಎಂದಿದ್ದಾರೆ.

“ಈ ಮಸೂದೆಯು ಸುರಕ್ಷತೆಯನ್ನು ಬಯಸುವವರಿಗೆ ಹಾನಿಯುಂಟುಮಾಡಿದೆ. ನಾವು ಯಾರೇ ಆಗಿರಲಿ, ನಾವೆಲ್ಲರೂ ಸುರಕ್ಷತೆ ಮತ್ತು ಸಹಾನುಭೂತಿಗೆ ಅರ್ಹರಾಗಿದ್ದೇವೆ. ಅದಕ್ಕಾಗಿಯೇ ನಾವು ಇಂದು ಕ್ರಮ ಕೈಗೊಂಡಿದ್ದೇವೆ” ಎಂದಿದ್ದಾರೆ.

ರುವಾಂಡ ಜನರನ್ನು ವಾಪಸ್‌ ಕಳುಹಿಸುವ ಈ ಯೋಜನೆಯು ಕ್ರೂರವಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಸುಲಿಗೆ ವೆಚ್ಚವನ್ನು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, 7,000ಕ್ಕೂ ಹೆಚ್ಚು ಆಶ್ರಯಾರ್ಥಿಗಳು ಯುಕೆಯಲ್ಲಿದ್ದಾರೆ. ಸುಮಾರು 1,972 ಜನರು ಏಪ್ರಿಲ್ 14ರ ನಡುವೆ ಯುಕೆಗೆ ಬಂದಿದ್ದಾರೆ. ಯುಕೆ ಸರ್ಕಾರ ರುವಾಂಡದೊಂದಿಗೆ ಸಹಿ ಹಾಕಿದ ಬಳಿಕ ವಿವಾದ ಭುಗಿಲೆದ್ದಿದೆ.

“ಹವಾಮಾನ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಯುದ್ಧ, ಬಡತನ ಮತ್ತು ಹವಾಮಾನ ದುರಂತದ ಬಹು ಬಿಕ್ಕಟ್ಟುಗಳನ್ನು ಹೊತ್ತುಕೊಂಡು ಭಯಾನಕ ಸನ್ನಿವೇಶಗಳಿಂದ ಪಾರಾಗುತ್ತಿರುವ ಜನರನ್ನು ರಾಕ್ಷಸರನ್ನಾಗಿ ಮಾಡುವ ಪ್ರೀತಿ ಪಟೇಲ್ ಅವರ ಕ್ರೂರ ಯೋಜನೆಗಳ ವಿರುದ್ಧವೂ ನಿಲ್ಲುತ್ತಾರೆ. ಪ್ರೀತಿ ಪಟೇಲ್ ಅಪಾಯಕಾರಿ ರುವಾಂಡಾ ವಲಸೆ ಯೋಜನೆಯನ್ನು ಕೈಬಿಡಬೇಕು. ವಲಸಿಗರು, ನಿರಾಶ್ರಿತರು ಮತ್ತು ಆಶ್ರಯ ಬಯಸುವ ಜನರಿಗೆ ಬೆಂಬಲ ಮತ್ತು ಸುರಕ್ಷತೆಯನ್ನು ಒದಗಿಸಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ ಹೋರಾಟಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...