Homeಮುಖಪುಟಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಆರಂಭಿಕ ಆಟಗಾರರಾಗಿ ಕ್ರಿಸ್‌ಗೆ ಬರುತ್ತಿದ್ದ ರಾಬಿನ್‌ ಉತ್ತಪ್ಪ ಉತ್ತಮ ಪ್ರದರ್ಶನವನ್ನೂ ನೀಡಿದ್ದಾರೆ. ಕ್ರಮಾಂಕ ಬದಲಾದಾಗ ವಿಫಲರಾಗಿದ್ದಾರೆ

- Advertisement -
- Advertisement -

ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡಕ್ಕೆ ಆರಂಭದಲ್ಲಿ ರವೀಂದ್ರ ಜಡೇಜಾ ನಾಯಕರಾಗಿದ್ದರು. ಜಡೇಜಾ ನಾಯಕತ್ವ ತೊರೆದ ಬಳಿಕ ಮತ್ತೆ ಸಿಎಸ್‌ಕೆಗೆ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವ ವಹಿಸಿದರು. ನಂತರದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸಿಎಸ್‌ಕೆ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಆದರೆ ನಾಯಕ ಧೋನಿ ಧೋರಣೆ ಕುರಿತು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಜಡೇಜಾ ನಾಯಕತ್ವದಲ್ಲಿ ತಂಡ ಮುನ್ನಡೆಯುತ್ತಿದ್ದಾಗ ಆರಂಭಿಕ ಆಟಗಾರರಾಗಿ ಅಥವಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಮಿಂಚುತ್ತಿದ್ದ, ಕೆಲವು ಪಂದ್ಯಗಳ ಗೆಲುವಿಗೂ ಕಾರಣರಾಗಿದ್ದ ಕೊಡಗಿನ ರಾಬಿನ್‌ ಉತ್ತಪ್ಪ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಿರುವುದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಕೆಳ ಕ್ರಮಾಂಕದಲ್ಲಿ ರಾಬಿ‌ನ್ ಅವರನ್ನು ಬ್ಯಾಟಿಂಗ್‌ಗೆ ಇಳಿಸುತ್ತಿರುವ ನಾಯಕ ಧೋನಿ, ‘ಕ್ರಿಕೆಟ್ ರಾಜಕಾರಣ’ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್‌ ವಿರುದ್ಧ ಮಾರ್ಚ್ 26ರಂದು ಮೊದಲ ಪಂದ್ಯವನ್ನಾಡಿದ್ದ ಸಿಎಸ್‌ಕೆ ಕಡಿಮೆ ಮೊತ್ತವನ್ನು ಗಳಿಸಿತ್ತು. ಧೋನಿ ಅರ್ಧ ಶತಕ (50*/38) ಸಿಡಿಸಿದ್ದರು. 21 ಬಾಲ್‌ಗಳಲ್ಲಿ 28 ರನ್‌ ಗಳಿಸುವ ಮೂಲಕ ರಾಬಿನ್‌ ಉತ್ತಪ್ಪ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ ಆಟಗಾರರಾಗಿದ್ದರು.

ಮಾರ್ಚ್‌ 31ರಂದು ಎಲ್‌ಎಸ್‌ಜಿ ವಿರುದ್ಧ ನಡೆದ ಪಂದ್ಯದಲ್ಲಿ 27 ಬಾಲ್‌ಗಳಲ್ಲಿ 50 ರನ್‌ ಸಿಡಿಸಿದ್ದ ರಾಬಿ‌ನ್‌ ಉತ್ತಪ್ಪ ಸಿಎಸ್‌ಕೆ ಅತ್ಯುತ್ತಮ ಮೊತ್ತ ಗಳಿಸಲು ಕಾರಣವಾಗಿದ್ದರು. ಸಿಎಸ್‌ಕೆ ಪರ ಈ ಪಂದ್ಯದಲ್ಲಿ ಅತಿಹೆಚ್ಚು ರನ್‌ ಸಿಡಿಸಿದ ಆಟಗಾರರಾಗಿಯೂ ಹೊಮ್ಮಿದ್ದರು.

ಇದನ್ನೂ ಓದಿರಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಏಪ್ರಿಲ್‌ 12ರಂದು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ಪರ ಶಿವ ದುಬೆ 46 ಬಾಲ್‌ಗಳಲ್ಲಿ 95 ರನ್‌ ಸಿಡಿಸಿ ಅಜೇಯರಾಗಿ ಉಳಿದರೆ, ರಾಬಿನ್ ಉತ್ತಪ್ಪ 50 ಬಾಲ್‌ಗಳಲ್ಲಿ 88 ರನ್‌ ಗಳಿಸಿ ಪಂದ್ಯದ ಗೆಲುವಿನಲ್ಲೂ ಮುಖ್ಯಪಾತ್ರ ವಹಿಸಿದ್ದರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಂಬಟಿ ರಾಯುಡು (40/35) ಬಿಟ್ಟರೆ ಅತಿ ಹೆಚ್ಚು ರನ್‌ ಗಳಿಸಿದ್ದು ರಾಬಿನ್ ಉತ್ತಪ್ಪ (30/25). ಇತರ ಆಟಗಾರರಂತೆಯೇ ರಾಬಿನ್‌ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವುದು ನಿಜ. ಆದರೆ ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ರಾಬಿನ್ ಉತ್ತಪ್ಪರನ್ನು ಕೆಳಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಿದ್ದಾರೆ. ಆಡಿರುವ ಮೂರು ಪಂದ್ಯಗಳಲ್ಲೂ ಇದು ನಿಚ್ಚಳವಾಗಿ ಕಾಣುತ್ತಿದೆ ಎಂಬ ಆರೋಪಗಳು ಬಂದಿವೆ.

ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ನಡೆದ ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಸಿಎಸ್‌ಕೆ ಗೆಲವು ಗಳಿಸಿತ್ತು. ಋತುರಾಜ್‌ ಗಾಯಕ್ವಾಡ್‌, ದೇವನ್‌ ಕಾನ್ವೆ ಉತ್ತಮ ಆರಂಭ ನೀಡಿದರು. 99 ರನ್‌ ಗಳಿಸಿ ಋತುರಾಜ್‌ ಔಟ್ ಆದ ಬಳಿಕ ಧೋನಿ ಕ್ರೀಸ್‌ಗೆ ಬಂದರು. 7 ಬಾಲ್‌ ಆಡಿ 8 ರನ್‌ ಗಳಿಸಿದರು. ಇನ್ನಿಂಗ್ಸ್‌ ಮುಗಿಯುವ ಹಂತದಲ್ಲಿದ್ದಾಗ ಧೋನಿ ಔಟ್ ಆದರು. ಆದರೆ ನಂತರದಲ್ಲಿ ಕ್ರೀಸ್‌ಗೆ ಬಂದಿದ್ದು ರವೀಂದ್ರ ಜಡೇಜಾ. ಈ ಭಾರಿಯ ಐಪಿಎಲ್‌ನಲ್ಲಿ ಜಡೇಜಾ ಉತ್ತಮ ಪ್ರದರ್ಶನವನ್ನೇನೂ ನೀಡಿಲ್ಲ ಎಂಬುದು ಗಮನಾರ್ಹ.

ಇದನ್ನೂ ಓದಿರಿ: IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?

ಆರ್‌ಸಿಬಿ ವಿರುದ್ಧದ ಎರಡನೇ ಪಂದ್ಯದಲ್ಲಿ ರಾಬಿ‌ನ್‌  ಮೂರನೇ ಕ್ರಮಾಂಕದಲ್ಲಿ ಬಂದರೂ ಮೂರು ಬಾಲ್‌ಗಳಲ್ಲಿ ಒಂದು ರನ್‌ ಗಳಿಸಿ ಔಟ್‌ ಆದರು. ಆದರೆ ನಂತರದ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ರಾಬಿನ್‌ ಅವರಿಗೆ ಬ್ಯಾಟಿಂಗ್ ನೀಡಲಾಗಿದೆ. ಡೆಲ್ಲಿ ಕ್ಯಾಪಿಟಲ್‌ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಗೆದ್ದಿದೆ. ದೇವನ್ ಕಾನ್ವೆ, ಶಿವಂ ದೂಬೆ, ಋತುರಾಜ್‌ ಉತ್ತಮ ರನ್‌ ಗಳಿಸಿದ್ದರು. ಆದರೆ ಮೊಯಿನ್ ಅಲಿ ಬಳಿಕ ರಾಬಿನ್‌ ಅವರನ್ನು ಕ್ರೀಸ್‌ಗಿಳಿಸಲಾಗಿತ್ತು. ಇನ್ನಿಂಗ್ಸ್‌ ಅಂತ್ಯದಲ್ಲಿ ಆಡಲು ಬಂದ ರಾಬಿನ್‌ ಉತ್ತಪ್ಪ ಕೇವಲ 1 ಬಾಲ್‌ ಆಡಿ ಡಕ್‌ಔಟ್‌ ಆದರು.

ಉತ್ತಪ್ಪ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಲೇಖಕ ಅಲ್ಮೇಡಾ ಗ್ಲಾಡ್‌ಸನ್‌, “ಈತ ಭಾರತದ ಕ್ಯಾಪ್ಟನ್ ಆಗಿದ್ದಾಗಲೂ ಓಪನರ್ ಆಗಿರುವ ರಾಬಿನ್ ಉತ್ತಪ್ಪರನ್ನು ಆರನೇ, ಏಳನೇ ಕ್ರಮಾಂಕದಲ್ಲಾಡಿಸಿ ಆತನ ಕರಿಯರನ್ನೇ ಹಾಳು ಮಾಡಿದ್ದ. ಇದೀಗ ಸಿಎಸ್ಕೆಯಲ್ಲೂ ಅದೇ ಮಾಡುತ್ತಿದ್ದಾನೆ. ಜಡೇಜಾ ಕ್ಯಾಪ್ಟನ್ ಆಗಿರುವತನಕ ಓಪನರ್ ಆಗಿ ಚೆನ್ನಾಗಿಯೇ ಪರ್ಫಾಮ್ ಮಾಡಿದ್ದ ರಾಬಿನ್ಗೆ ಈತ ಕ್ಯಾಪ್ಟನ್ ಆಗುತ್ತಲೇ ಬ್ಯಾಟಿಂಗೇ ಸಿಗುತ್ತಿಲ್ಲ. ಮತ್ತದೇ ನಾಟಕ, ಆರು, ಏಳನೇ ಕ್ರಮಾಂಕ. ಇವರು ಕಳೆದ ಹದಿನೈದು ವರುಷಗಳಲ್ಲಿ ಒಬ್ಬನೇ ಒಬ್ಬ ವಿಕೆಟ್-ಕೀಪರ್‌ನ ಕರಿಯರ್ ಸೆಟ್ ಆಗಲು ಬಿಡಲಿಲ್ಲ. ರಾಬಿನ್, ಪಾರ್ಥೀವ್, ಕಾರ್ತಿಕ್ ಎಲ್ಲರ ಅಂತಾರಾಷ್ಟ್ರೀಯ ಕರಿಯರ್ ಬ್ಲಾಕ್ ಮಾಡ್ಬಿಟ್ಟ. Without doubt, he is by far the greatest politician to have ever played cricket” ಎಂದು ಆರೋಪಿಸಿದ್ದಾರೆ.

“ಉತ್ತಪ್ಪ ಅವರ ಸ್ಥಾನವನ್ನು ವಿದೇಶಿ ಆಟಗಾರನಿಗೆ ಬಿಟ್ಟುಕೊಟ್ಟಿದ್ದು ಏಕೋ ಸರಿ ಕಾಣಲಿಲ್ಲ. ನಮ್ಮಲ್ಲೆ ಪ್ರತಿಭೆಗಳಿರುವಾಗ ಹೊರಗಿನ ಪ್ರತಿಭೆಗಳಿಗೆ ಮಣೆ ಹಾಕುವುದು ಎಷ್ಟು ಸರಿ?” ಎಂದು ಹಕೀಂ ತೀರ್ಥಹಳ್ಳಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

“ರಾಬಿನ್ ಉತ್ತಪ್ಪ ಟಿಟ್ವೆಂಟಿ ಫಾರ್ಮಾಟಿಗೆ ಅತ್ಯುತ್ತಮ ಆರಂಭಿಕ ಆಟಗಾರ. ಕೊಟ್ಟ ಅವಕಾಶ ಕಡಿಮೆ; ಆಯ್ಕೆ ಮಾಡಿದರೂ, ಆತನನ್ನು ಸರಿಯಾಗಿ‌ ಬಳಸಿಕೊಳ್ಳಲಿಲ್ಲ. ರಾಬಿನ್ ತರಹ ಕೆಲವು ಉತ್ತಮ ಆಟಗಾರರಿಗೂ ತಮ್ಮ ಪ್ರತಿಭೆಯನ್ನು ಸಂಪೂರ್ಣವಾಗಿ ಬಳಸಲು ಸಾಕಷ್ಟು ಅವಕಾಶಗಳು ದೊರೆಯಲಿಲ್ಲ. ಇದಕ್ಕೆ ಧೋನಿ ಹೊಣೆಯೋ ಅಥವಾ ಬಿಸಿಸಿಐ ಮ್ಯಾನೇಜ್ಮೆಂಟ್ ಅವರ ತೀರ್ಮಾನವೋ ತಿಳಿಯದು. ಬಿಸಿಸಿಐ ಎಂಬ ವ್ಯಾಪಾರೀಕರಣದ ಸಂಸ್ಥೆಯ ಪಾರದರ್ಶಕತೆಯ ಕುರಿತು ಸಾಕಷ್ಟು ಅನುಮಾನಗಳಿವೆ” ಎಂದು ಪವನ್‌ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಧೋನಿಯ ಬಗ್ಗೆ ಹಾಗೇ ಹೇಳುವುದನ್ನು ನಾನು ಒಪ್ಪಲಾರೆ, ಒಬ್ಬ ಅತ್ಯುತ್ತಮ ಕ್ರಿಕೆಟರ್ ನಾಯಕನ ಸ್ಥಾನ ಹೊತ್ತು ತನ್ನ ಟಾಪ್ ಆರ್ಡರ್ ಬ್ಯಾಟಿಂಗ್ ಅನ್ನೇ ಫಿನಿಷರ್ ಮಾಡಿಕೊಳ್ಳಲಿಲ್ಲವೇ? ತಂಡದ ಅಗತ್ಯಕ್ಕೆ ತಕ್ಕ ಹಾಗೆ ಆಡಿಸುವವರು ಸ್ವಾರ್ಥದ ಲೇಪ ಹಚ್ಚುವುದು ನಾನು ಒಪ್ಪಲಾರೆ” ಎಂದು ಆದರ್ಶ‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...