Homeಮುಖಪುಟಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಆರಂಭಿಕ ಆಟಗಾರರಾಗಿ ಕ್ರಿಸ್‌ಗೆ ಬರುತ್ತಿದ್ದ ರಾಬಿನ್‌ ಉತ್ತಪ್ಪ ಉತ್ತಮ ಪ್ರದರ್ಶನವನ್ನೂ ನೀಡಿದ್ದಾರೆ. ಕ್ರಮಾಂಕ ಬದಲಾದಾಗ ವಿಫಲರಾಗಿದ್ದಾರೆ

- Advertisement -
- Advertisement -

ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡಕ್ಕೆ ಆರಂಭದಲ್ಲಿ ರವೀಂದ್ರ ಜಡೇಜಾ ನಾಯಕರಾಗಿದ್ದರು. ಜಡೇಜಾ ನಾಯಕತ್ವ ತೊರೆದ ಬಳಿಕ ಮತ್ತೆ ಸಿಎಸ್‌ಕೆಗೆ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವ ವಹಿಸಿದರು. ನಂತರದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸಿಎಸ್‌ಕೆ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಆದರೆ ನಾಯಕ ಧೋನಿ ಧೋರಣೆ ಕುರಿತು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಜಡೇಜಾ ನಾಯಕತ್ವದಲ್ಲಿ ತಂಡ ಮುನ್ನಡೆಯುತ್ತಿದ್ದಾಗ ಆರಂಭಿಕ ಆಟಗಾರರಾಗಿ ಅಥವಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಮಿಂಚುತ್ತಿದ್ದ, ಕೆಲವು ಪಂದ್ಯಗಳ ಗೆಲುವಿಗೂ ಕಾರಣರಾಗಿದ್ದ ಕೊಡಗಿನ ರಾಬಿನ್‌ ಉತ್ತಪ್ಪ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಿರುವುದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಕೆಳ ಕ್ರಮಾಂಕದಲ್ಲಿ ರಾಬಿ‌ನ್ ಅವರನ್ನು ಬ್ಯಾಟಿಂಗ್‌ಗೆ ಇಳಿಸುತ್ತಿರುವ ನಾಯಕ ಧೋನಿ, ‘ಕ್ರಿಕೆಟ್ ರಾಜಕಾರಣ’ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್‌ ವಿರುದ್ಧ ಮಾರ್ಚ್ 26ರಂದು ಮೊದಲ ಪಂದ್ಯವನ್ನಾಡಿದ್ದ ಸಿಎಸ್‌ಕೆ ಕಡಿಮೆ ಮೊತ್ತವನ್ನು ಗಳಿಸಿತ್ತು. ಧೋನಿ ಅರ್ಧ ಶತಕ (50*/38) ಸಿಡಿಸಿದ್ದರು. 21 ಬಾಲ್‌ಗಳಲ್ಲಿ 28 ರನ್‌ ಗಳಿಸುವ ಮೂಲಕ ರಾಬಿನ್‌ ಉತ್ತಪ್ಪ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ ಆಟಗಾರರಾಗಿದ್ದರು.

ಮಾರ್ಚ್‌ 31ರಂದು ಎಲ್‌ಎಸ್‌ಜಿ ವಿರುದ್ಧ ನಡೆದ ಪಂದ್ಯದಲ್ಲಿ 27 ಬಾಲ್‌ಗಳಲ್ಲಿ 50 ರನ್‌ ಸಿಡಿಸಿದ್ದ ರಾಬಿ‌ನ್‌ ಉತ್ತಪ್ಪ ಸಿಎಸ್‌ಕೆ ಅತ್ಯುತ್ತಮ ಮೊತ್ತ ಗಳಿಸಲು ಕಾರಣವಾಗಿದ್ದರು. ಸಿಎಸ್‌ಕೆ ಪರ ಈ ಪಂದ್ಯದಲ್ಲಿ ಅತಿಹೆಚ್ಚು ರನ್‌ ಸಿಡಿಸಿದ ಆಟಗಾರರಾಗಿಯೂ ಹೊಮ್ಮಿದ್ದರು.

ಇದನ್ನೂ ಓದಿರಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಏಪ್ರಿಲ್‌ 12ರಂದು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ಪರ ಶಿವ ದುಬೆ 46 ಬಾಲ್‌ಗಳಲ್ಲಿ 95 ರನ್‌ ಸಿಡಿಸಿ ಅಜೇಯರಾಗಿ ಉಳಿದರೆ, ರಾಬಿನ್ ಉತ್ತಪ್ಪ 50 ಬಾಲ್‌ಗಳಲ್ಲಿ 88 ರನ್‌ ಗಳಿಸಿ ಪಂದ್ಯದ ಗೆಲುವಿನಲ್ಲೂ ಮುಖ್ಯಪಾತ್ರ ವಹಿಸಿದ್ದರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಂಬಟಿ ರಾಯುಡು (40/35) ಬಿಟ್ಟರೆ ಅತಿ ಹೆಚ್ಚು ರನ್‌ ಗಳಿಸಿದ್ದು ರಾಬಿನ್ ಉತ್ತಪ್ಪ (30/25). ಇತರ ಆಟಗಾರರಂತೆಯೇ ರಾಬಿನ್‌ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವುದು ನಿಜ. ಆದರೆ ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ರಾಬಿನ್ ಉತ್ತಪ್ಪರನ್ನು ಕೆಳಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಿದ್ದಾರೆ. ಆಡಿರುವ ಮೂರು ಪಂದ್ಯಗಳಲ್ಲೂ ಇದು ನಿಚ್ಚಳವಾಗಿ ಕಾಣುತ್ತಿದೆ ಎಂಬ ಆರೋಪಗಳು ಬಂದಿವೆ.

ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ನಡೆದ ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಸಿಎಸ್‌ಕೆ ಗೆಲವು ಗಳಿಸಿತ್ತು. ಋತುರಾಜ್‌ ಗಾಯಕ್ವಾಡ್‌, ದೇವನ್‌ ಕಾನ್ವೆ ಉತ್ತಮ ಆರಂಭ ನೀಡಿದರು. 99 ರನ್‌ ಗಳಿಸಿ ಋತುರಾಜ್‌ ಔಟ್ ಆದ ಬಳಿಕ ಧೋನಿ ಕ್ರೀಸ್‌ಗೆ ಬಂದರು. 7 ಬಾಲ್‌ ಆಡಿ 8 ರನ್‌ ಗಳಿಸಿದರು. ಇನ್ನಿಂಗ್ಸ್‌ ಮುಗಿಯುವ ಹಂತದಲ್ಲಿದ್ದಾಗ ಧೋನಿ ಔಟ್ ಆದರು. ಆದರೆ ನಂತರದಲ್ಲಿ ಕ್ರೀಸ್‌ಗೆ ಬಂದಿದ್ದು ರವೀಂದ್ರ ಜಡೇಜಾ. ಈ ಭಾರಿಯ ಐಪಿಎಲ್‌ನಲ್ಲಿ ಜಡೇಜಾ ಉತ್ತಮ ಪ್ರದರ್ಶನವನ್ನೇನೂ ನೀಡಿಲ್ಲ ಎಂಬುದು ಗಮನಾರ್ಹ.

ಇದನ್ನೂ ಓದಿರಿ: IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?

ಆರ್‌ಸಿಬಿ ವಿರುದ್ಧದ ಎರಡನೇ ಪಂದ್ಯದಲ್ಲಿ ರಾಬಿ‌ನ್‌  ಮೂರನೇ ಕ್ರಮಾಂಕದಲ್ಲಿ ಬಂದರೂ ಮೂರು ಬಾಲ್‌ಗಳಲ್ಲಿ ಒಂದು ರನ್‌ ಗಳಿಸಿ ಔಟ್‌ ಆದರು. ಆದರೆ ನಂತರದ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ರಾಬಿನ್‌ ಅವರಿಗೆ ಬ್ಯಾಟಿಂಗ್ ನೀಡಲಾಗಿದೆ. ಡೆಲ್ಲಿ ಕ್ಯಾಪಿಟಲ್‌ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಗೆದ್ದಿದೆ. ದೇವನ್ ಕಾನ್ವೆ, ಶಿವಂ ದೂಬೆ, ಋತುರಾಜ್‌ ಉತ್ತಮ ರನ್‌ ಗಳಿಸಿದ್ದರು. ಆದರೆ ಮೊಯಿನ್ ಅಲಿ ಬಳಿಕ ರಾಬಿನ್‌ ಅವರನ್ನು ಕ್ರೀಸ್‌ಗಿಳಿಸಲಾಗಿತ್ತು. ಇನ್ನಿಂಗ್ಸ್‌ ಅಂತ್ಯದಲ್ಲಿ ಆಡಲು ಬಂದ ರಾಬಿನ್‌ ಉತ್ತಪ್ಪ ಕೇವಲ 1 ಬಾಲ್‌ ಆಡಿ ಡಕ್‌ಔಟ್‌ ಆದರು.

ಉತ್ತಪ್ಪ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಲೇಖಕ ಅಲ್ಮೇಡಾ ಗ್ಲಾಡ್‌ಸನ್‌, “ಈತ ಭಾರತದ ಕ್ಯಾಪ್ಟನ್ ಆಗಿದ್ದಾಗಲೂ ಓಪನರ್ ಆಗಿರುವ ರಾಬಿನ್ ಉತ್ತಪ್ಪರನ್ನು ಆರನೇ, ಏಳನೇ ಕ್ರಮಾಂಕದಲ್ಲಾಡಿಸಿ ಆತನ ಕರಿಯರನ್ನೇ ಹಾಳು ಮಾಡಿದ್ದ. ಇದೀಗ ಸಿಎಸ್ಕೆಯಲ್ಲೂ ಅದೇ ಮಾಡುತ್ತಿದ್ದಾನೆ. ಜಡೇಜಾ ಕ್ಯಾಪ್ಟನ್ ಆಗಿರುವತನಕ ಓಪನರ್ ಆಗಿ ಚೆನ್ನಾಗಿಯೇ ಪರ್ಫಾಮ್ ಮಾಡಿದ್ದ ರಾಬಿನ್ಗೆ ಈತ ಕ್ಯಾಪ್ಟನ್ ಆಗುತ್ತಲೇ ಬ್ಯಾಟಿಂಗೇ ಸಿಗುತ್ತಿಲ್ಲ. ಮತ್ತದೇ ನಾಟಕ, ಆರು, ಏಳನೇ ಕ್ರಮಾಂಕ. ಇವರು ಕಳೆದ ಹದಿನೈದು ವರುಷಗಳಲ್ಲಿ ಒಬ್ಬನೇ ಒಬ್ಬ ವಿಕೆಟ್-ಕೀಪರ್‌ನ ಕರಿಯರ್ ಸೆಟ್ ಆಗಲು ಬಿಡಲಿಲ್ಲ. ರಾಬಿನ್, ಪಾರ್ಥೀವ್, ಕಾರ್ತಿಕ್ ಎಲ್ಲರ ಅಂತಾರಾಷ್ಟ್ರೀಯ ಕರಿಯರ್ ಬ್ಲಾಕ್ ಮಾಡ್ಬಿಟ್ಟ. Without doubt, he is by far the greatest politician to have ever played cricket” ಎಂದು ಆರೋಪಿಸಿದ್ದಾರೆ.

“ಉತ್ತಪ್ಪ ಅವರ ಸ್ಥಾನವನ್ನು ವಿದೇಶಿ ಆಟಗಾರನಿಗೆ ಬಿಟ್ಟುಕೊಟ್ಟಿದ್ದು ಏಕೋ ಸರಿ ಕಾಣಲಿಲ್ಲ. ನಮ್ಮಲ್ಲೆ ಪ್ರತಿಭೆಗಳಿರುವಾಗ ಹೊರಗಿನ ಪ್ರತಿಭೆಗಳಿಗೆ ಮಣೆ ಹಾಕುವುದು ಎಷ್ಟು ಸರಿ?” ಎಂದು ಹಕೀಂ ತೀರ್ಥಹಳ್ಳಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

“ರಾಬಿನ್ ಉತ್ತಪ್ಪ ಟಿಟ್ವೆಂಟಿ ಫಾರ್ಮಾಟಿಗೆ ಅತ್ಯುತ್ತಮ ಆರಂಭಿಕ ಆಟಗಾರ. ಕೊಟ್ಟ ಅವಕಾಶ ಕಡಿಮೆ; ಆಯ್ಕೆ ಮಾಡಿದರೂ, ಆತನನ್ನು ಸರಿಯಾಗಿ‌ ಬಳಸಿಕೊಳ್ಳಲಿಲ್ಲ. ರಾಬಿನ್ ತರಹ ಕೆಲವು ಉತ್ತಮ ಆಟಗಾರರಿಗೂ ತಮ್ಮ ಪ್ರತಿಭೆಯನ್ನು ಸಂಪೂರ್ಣವಾಗಿ ಬಳಸಲು ಸಾಕಷ್ಟು ಅವಕಾಶಗಳು ದೊರೆಯಲಿಲ್ಲ. ಇದಕ್ಕೆ ಧೋನಿ ಹೊಣೆಯೋ ಅಥವಾ ಬಿಸಿಸಿಐ ಮ್ಯಾನೇಜ್ಮೆಂಟ್ ಅವರ ತೀರ್ಮಾನವೋ ತಿಳಿಯದು. ಬಿಸಿಸಿಐ ಎಂಬ ವ್ಯಾಪಾರೀಕರಣದ ಸಂಸ್ಥೆಯ ಪಾರದರ್ಶಕತೆಯ ಕುರಿತು ಸಾಕಷ್ಟು ಅನುಮಾನಗಳಿವೆ” ಎಂದು ಪವನ್‌ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಧೋನಿಯ ಬಗ್ಗೆ ಹಾಗೇ ಹೇಳುವುದನ್ನು ನಾನು ಒಪ್ಪಲಾರೆ, ಒಬ್ಬ ಅತ್ಯುತ್ತಮ ಕ್ರಿಕೆಟರ್ ನಾಯಕನ ಸ್ಥಾನ ಹೊತ್ತು ತನ್ನ ಟಾಪ್ ಆರ್ಡರ್ ಬ್ಯಾಟಿಂಗ್ ಅನ್ನೇ ಫಿನಿಷರ್ ಮಾಡಿಕೊಳ್ಳಲಿಲ್ಲವೇ? ತಂಡದ ಅಗತ್ಯಕ್ಕೆ ತಕ್ಕ ಹಾಗೆ ಆಡಿಸುವವರು ಸ್ವಾರ್ಥದ ಲೇಪ ಹಚ್ಚುವುದು ನಾನು ಒಪ್ಪಲಾರೆ” ಎಂದು ಆದರ್ಶ‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...