Homeಮುಖಪುಟವಿಕಲಾಂಗ ಮಗುವಿನ ಪ್ರಯಾಣಕ್ಕೆ ಇಂಡಿಗೊ ಏರ್‌ಲೈನ್ಸ್‌ ಸಿಬ್ಬಂದಿ ತಡೆ: ವಿಡಿಯೊ ವೈರಲ್‌‌

ವಿಕಲಾಂಗ ಮಗುವಿನ ಪ್ರಯಾಣಕ್ಕೆ ಇಂಡಿಗೊ ಏರ್‌ಲೈನ್ಸ್‌ ಸಿಬ್ಬಂದಿ ತಡೆ: ವಿಡಿಯೊ ವೈರಲ್‌‌

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ಸಿಬ್ಬಂದಿ ವಿಶೇಷ ಚೇತನ ಮಗು ಮತ್ತು ಆ ಮಗುವಿನ ಪೋಷಕರನ್ನು ರಾಂಚಿ ವಿಮಾನ ನಿಲ್ದಾಣದಲ್ಲಿ ಶನಿವಾರ ತಡೆದಿದ್ದು ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತ ಫೇಸ್‌ಬುಕ್ ಪೋಸ್ಟ್ ವೈರಲ್‌ ಆಗಿದೆ. ಇಂಡಿಗೋ ಏರ್‌ಲೈನ್ಸ್‌ ಸಿಬ್ಬಂದಿ ಹೀಗೇಕೆ ವರ್ತಿಸಿದರೆಂದು ಸ್ಪಷ್ಟಪಡಿಸಬೇಕೆಂದು ಏರ್‌ಲೈನ್‌ಗೆ ಒತ್ತಾಯಿಸಲಾಗಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ಮನೀಶಾ ಗುಪ್ತಾ ಅವರು ಹಲವು ಸಂಗತಿಗಳನ್ನು ಶೇರ್‌ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂಡಿಗೋ ಸಿಬ್ಬಂದಿ ವಿಕಲಾಂಗ ಮಗು ವಿಮಾನ ಹತ್ತಲು ಅನುಮತಿ ನೀಡಲಿಲ್ಲ. ಈ ಮಗು ಇತರ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಲಿದೆ. ಪ್ರಯಾಣ ಮಾಡಬೇಕಾದರೆ ಮಗು ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಸಿಬ್ಬಂದಿ ಹೇಳಿದ್ದಾಗಿ ಆರೋಪಿಸಲಾಗಿದೆ.

“ಈ ಸ್ಥಿತಿಯಲ್ಲಿರುವ ಮಕ್ಕಳು ಹಾಗೂ ಕುಡುಕರು ಪ್ರಯಾಣಿಸಲು ಸಾಧ್ಯವಿಲ್ಲ” ಎಂದು ಇಂಡಿಗೋ ಸಿಬ್ಬಂದಿ ಹೇಳಿದ್ದಾಗಿ ದೂರಲಾಗಿದೆ.

“ಮಗು ಮತ್ತು ಪೋಷಕರ ಪ್ರಯಾಣದಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಇತರ ಪ್ರಯಾಣಿಕರು ಹೇಳಿದರು. ಪ್ರಯಾಣಿಕರಲ್ಲಿ ವೈದ್ಯರೂ ಕೂಡ ಇದ್ದರು. ಅವರು ಸಿಬ್ಬಂದಿಯನ್ನು ಪ್ರಶ್ನಿಸಿದರು” ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ಪ್ರಯಾಣಿಕರ ಗುಂಪಿನಿಂದ ಹೊರಬಂದ ಸರ್ಕಾರಿ ಅಧಿಕಾರಿಯೊಬ್ಬರು ಮಗುವಿಗೆ ಪ್ರಯಾಣಿಸುವ ಹಕ್ಕಿದೆ ಎಂದು ತಿಳಿಸಿದರು. ಕೊನೆಗೂ ಮೂವರಿಗೆ ಪ್ರಯಾಣಿಸಲು ಅವಕಾಶ ನೀಡಲಾಗಲಿಲ್ಲ. ಸ್ವಲ್ಪ ಸಮಯದವರೆಗೆ ಗೊಂದಲ ಮುಂದುವರೆಯಿತು ಎಂದು ವರದಿಯಾಗಿದೆ.

ಏರ್‌ಲೈನ್ಸ್ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಮಗು ಭಯದಲ್ಲಿತ್ತು. ಮಗು ಸಾಮಾನ್ಯ ಸ್ಥಿತಿಗೆ ಮರಳಿ ಶಾಂತವಾಗಬಹುದೆಂದು ಸಿಬ್ಬಂದಿ ಬಯಸಿದರು. ಆದರೆ ಕೊನೆಯ ಕ್ಷಣದವರೆಗೂ ಭಯದಿಂದ ಹೊರಬರಲಿಲ್ಲ. ಇಂಡಿಗೊ ಏರ್‌‌ಲೈನ್ಸ್‌ ಸಂಸ್ಥೆಯು ಈ ಕುಟುಂಬಕ್ಕೆ ಹೋಟೆಲ್ ವಾಸ್ತವ್ಯವನ್ನು ಒದಗಿಸುವ ಮೂಲಕ ಸ್ಥಿತಿಯನ್ನು ಸುಧಾರಿಸಿತು. ಕುಟುಂಬವು ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಬೆಳೆಸಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ” ಎಂದು ತಿಳಿಸಲಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯವು ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಮತ್ತು ವರದಿಯನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆಗೆ ತಿಳಿಸಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

ವಿಷಯ ಉಲ್ಬಣಗೊಳ್ಳುತ್ತಿದ್ದಂತೆ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ಪ್ರತಿಕ್ರಿಯೆ ನೀಡಿದ್ದು, “ಇಂತಹ ನಡವಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು. “ಯಾವುದೇ ಮನುಷ್ಯ ಈ ರೀತಿ ನಡೆದುಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...