Homeಕರ್ನಾಟಕಉಡುಪಿ: ಉದ್ಘಾಟನೆಯಾದ ಮೂರೇ ದಿನದಲ್ಲಿ ಕೊಚ್ಚಿ ಹೋದ ತೇಲುವ ಸೇತುವೆ; 40% ಕಮಿಷನ್‌‌ ಫಲ ಎಂದ...

ಉಡುಪಿ: ಉದ್ಘಾಟನೆಯಾದ ಮೂರೇ ದಿನದಲ್ಲಿ ಕೊಚ್ಚಿ ಹೋದ ತೇಲುವ ಸೇತುವೆ; 40% ಕಮಿಷನ್‌‌ ಫಲ ಎಂದ ಜನರು!

- Advertisement -
- Advertisement -

ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ನಿರ್ಮಿಸಿದ ರಾಜ್ಯದ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರದಲ್ಲಿ ಕೊಚ್ಚಿಹೋಗಿದೆ. ಸೇತುವೆಯ ಅವಶೇಷಗಳು ಸಮುದ್ರದ ದಡದಲ್ಲಿ ಬಿದ್ದಿದ್ದು, ಅದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಫಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮೊದಲ ತೇಲುವ ಸೇತುವೆ ಮೇ 6ರ ಶುಕ್ರವಾರದಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಅವರು ಸಮ್ಮುಖದಲ್ಲಿ ಉದ್ಘಾಟನೆಗೊಂಡಿತ್ತು. 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವಿರುವ ತೇಲುವ ಸೇತುವೆಯನ್ನು ಸುಮಾರು 80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಸಂಜೆಯವರೆಗೂ ಹಲವಾರು ಪ್ರವಾಸಿಗರು ಸೇತುವೆಯಲ್ಲಿ ನಡೆದಾಡಿದ್ದರು. ಆದರೆ, ಸೋಮವಾರ ಬೆಳಗ್ಗೆ ಪ್ರವಾಸಿಗರು ಸಮುದ್ರ ತೀರಕ್ಕೆ ಬಂದಾಗ ಸೇತುವೆಯ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಸಮುದ್ರದ ಬದಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದರ ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಸೇತುವೆಯ ಈ ಅವಸ್ಥೆಗೆ ರಾಜ್ಯ ಬಿಜೆಪಿಯ 40% ಭ್ರಷ್ಟಾಚಾರವೇ ಕಾರಣ ಎಂದು ಹೇಳಿದ್ದಾರೆ.

ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ಅವರು, “ಭ್ರಷ್ಟ ಸರ್ಕಾರದ 40% ಕಮಿಷನ್ ಸೇತುವೆ ಮೂರೇ ದಿನಗಳಿಗೆ ಮುರಿದು ಸಮುದ್ರದ ಪಾಲಾಯ್ತು” ಎಂದು ಕಿಡಿ ಕಾರಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಕೆ.ಆರ್‌. ಪ್ರಗತ್ ಅವರು, “20% ಕೇಂದ್ರಕ್ಕೆ 20% ರಾಜ್ಯಕ್ಕೆ. ಒಟ್ಟು 40%. ಉಡುಪಿ ಜಿಲ್ಲೆಯ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಮಲ್ಪೆಯ ಕೋಟಿ ವೆಚ್ಚದ ತೇಲು ಸೇತುವೆ, ಬಿಜೆಪಿ ಕಮೀಷನ್ ಆಸೆಗೆ ಮಣ್ಣುಪಾಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

ಇದನ್ನೂ ಓದಿ:  ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ – ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುತ್ತಿರುವುದೇಕೆ?

ಸಮುದ್ರವು ಪ್ರಕ್ಷುಬ್ಧಗೊಂಡಿದ್ದರಿಂದ ಸೇತುವೆ ಹಾಳಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾಗಿ ಈದಿನ.ಕಾಂ ವರದಿ ಮಾಡಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಲೈಫ್ ಗಾರ್ಡ್‌ಗಳು ಚೆಲ್ಲಾಪಿಲ್ಲಿಯಾಗಿ ಹರಡಿದ್ದ ಸೇತುವೆಯ ಬಾಕ್ಸ್‌ಗಳನ್ನು ಸಂಗ್ರಹಿಸಿ ಸಮುದ್ರದ ಬದಿಯಲ್ಲಿ ಇಡಲಾಗಿದೆ.

“ಸೈಕ್ಲೋನ್ ಮತ್ತು ಭಾರೀ ಗಾಳಿಯಿಂದಾಗಿ ತೇಲುವ ಸೇತುವೆಗೆ ಯಾವುದೇ ಹಾನಿಯಾಗದಂತೆ ನಾವು ಸೇತುವೆಯ ಸಂಪರ್ಕ ಬೀಗ(ಲಾಕ್ ವ್ಯವಸ್ಥೆ)ಗಳನ್ನು ಬೇರ್ಪಡಿಸಿದ್ದೇವೆ. ಇದರಿಂದಾಗಿ ಇಂದು ಬೆಳಗ್ಗೆ ಸೇತುವೆಯ ಕೆಲವು ಬ್ಲಾಕ್‌ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಕೆಲವರು ವದಂತಿಗಳನ್ನು ಹರಡಿದ್ದಾರೆ. ಯಾವುದೇ ಹಾನಿಯಾಗಿಲ್ಲ. ಕಡಲ ಅಲೆಯ ಪ್ರಭಾವ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸೇತುವೆಯನ್ನು ಮುಚ್ಚಲಾಗಿದೆ” ಎಂದು ಸೇತುವೆಯ ಗುತ್ತಿಗೆದಾರ ಸುದೇಶ್ ಶೆಟ್ಟಿ ಹೇಳಿದ್ದಾಗಿ ಈದಿನ.ಕಾಂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲಾ ಅಂದಂಗಾಯ್ತು….೪೦% ಕ್ಕಿಂತಲೂ ಹೆಚ್ಚು ಕಮಿಷನ್ ಪಡೆದಿರಬೇಕು ಅದಕ್ಕೆ ಮೂರೇ ದಿನದಲ್ಲಿ ಕೊಚ್ಚಿ ಹೋಗಿದೆ‌. ಪಾಪ ಆ ಗುತ್ತಿಗೆದಾರನಾದರೂ ಏನು ಮಾಡಬೇಕು….!!

  2. ಇದು ಸರ್ಕಾರಿ ಕೆಲಸ ಅಲ್ಲ ಜನರ ತೆರಿಗೆ ಹಣನು ಅಲ್ಲ. 3 ಜನ ಉದ್ಯಮಿಗಳು ಸೇರಿ ಶುರು ಮಾಡಿದ್ದು ಇದು. ನೀವು ನಿಮ್ news ಜನ ನೋಡ್ಬೇಕು ಅಂತ ಸುಳ್ ಸುದ್ದಿ ಬರಿಬೇಡಿ.

  3. Commission scheme systems founders should be awarded for these old systems kept alive till date.
    Day one parliamentarian in India systems are well built for politicians welfare..now only percentage ratio has gone up..rest not all but most deals are copy @ paste since decades in this democracy.
    Now old beneficiaries are getting stomach ache bcoz above reasons are missing.
    Big theves are caching small theves.
    Good entertainment for us.

  4. Commission scheme systems founders should be awarded for these old systems kept alive till date.
    Day one parliamentarian in India systems are well built for politicians welfare..now only percentage ratio has gone up..rest not all but most deals are copy @ paste since decades in this democracy.
    Now old beneficiaries are getting stomach ache bcoz above reasons are missing.
    Big theves are caching small theves.
    Good entertainment for us.
    By the way it’s confirmed that it’s built by three industrialists own fund..it’s not tax money.
    Why u don’t go in detail to subject?
    U are in a hurry to find faults and blames against ruling government.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...