Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...