Homeಮುಖಪುಟಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

- Advertisement -
- Advertisement -

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಕಲ್ಪಿಸಲಾಗಿದ್ದ ಪುನರ್‌ವಸತಿ ಕೇಂದ್ರವನ್ನು ತೊರೆದ ಆದಿವಾಸಿಗಳು ಮತ್ತೆ ಕೊಡಗು ಜಿಲ್ಲೆಯಲ್ಲಿನ ತಮ್ಮ ಮೂಲಸ್ಥಳಕ್ಕೆ ತೆರಳಿ ಪ್ರತಿಭಟಿಸಿದ್ದಾರೆ.

ಕಾಡಿನಲ್ಲಿ ನೆಮ್ಮದಿಯಾಗಿದ್ದ ನಮ್ಮನ್ನು ಪುನರ್‌ ವಸತಿ ಕೇಂದ್ರಕ್ಕೆ ಕರೆದೊಯ್ಯುವಾಗ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಆದಿವಾಸಿಗಳು ಮತ್ತೆ ತಮ್ಮ ತವರಿಗೆ ಮರಳಲು ಯತ್ನಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾಸ್ತಿಗುಡಿ ಪುನರ್‌ ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದ ನೂರಾರು ಜೇಬುಕುರುಬ ಹಾಗೂ ಯರವ ಸಮುದಾಯದ ಆದಿವಾಸಿ ಕುಟುಂಬಗಳು ಪುನರ್‌ ವಸತಿ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಡಗಿನ ಬಾಳಲೆಗೆ ಗ್ರಾಮ ಪಂಚಾಯಿತಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಗೇಟ್‌ ಬಳಿ  ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೊಡಗಿನ ಸ್ಥಳೀಯ ಪತ್ರಿಕೆ ‘ಶಕ್ತಿ’ ಮುಖಪುಟದಲ್ಲಿ ವರದಿ ಮಾಡಿದೆ.

ಅಡುಗುಂಡಿಯಲ್ಲಿ ವಾಸವಿದ್ದ ನೂರಾರು ಆದಿವಾಸಿ ಕುಟುಂಬಗಳನ್ನು ಮನವೊಲಿಸುವ ಮೂಲಕ ಇಲ್ಲಿನ ಅರಣ್ಯ ಪ್ರದೇಶದಿಂದ ಮೈಸೂರು ಜಿಲ್ಲೆಯ ಕಸಬಾ ಹೋಬಳಿಯ ರಾಜೇಗೌಡನ ಹುಂಡಿ ಗ್ರಾಮದ ಸರ್ವೇ ನಂ. 37ರ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಪ್ರತಿಕುಟುಂಬಕ್ಕೆ 15 ಲಕ್ಷ ರೂ. ಪ್ಯಾಕೇಜಿನಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಲಾಗಿತ್ತು. ಸರ್ಕಾರದ ಮಾತು ನಂಬಿದ ಆದಿವಾಸಿಗಳು ಕಾಡು ತೊರೆದು ಬಂದಿದ್ದರು.

ಇದನ್ನೂ ಓದಿರಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಕೇಂದ್ರ ಸರ್ಕಾರದ ಪುನರ್‌ ವಸತಿ ಯೋಜನೆಯಡಿಯಲ್ಲಿ ಅರಣ್ಯ ಮತ್ತು ಪರಿಸರ ಮಂತ್ರಾಲಯವು ಇವರಿಗೆ ಜಮೀನು ಹಾಗೂ ನಿವೇಶನದ ಸ್ವಾಧೀನ ಪತ್ರಗಳನ್ನು ನೀಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಈ ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ತರುವಾಗ ಗುಣಮಟ್ಟದ ಆರ್‌ಸಿಸಿ ಮನೆ, ಮೂರು ಎಕರೆ ಜಮೀನು, ಆರಂಭದಲ್ಲಿ 75 ಸಾವಿರ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿ 2.50 ಲಕ್ಷ ಹಣವನ್ನು ಪ್ಯಾಕೇಜಿನಡಿ ಘೋಷಿಸಿ ಇವುಗಳಿಗೆ ಒಪ್ಪಿಗೆ ಸೂಚಿಸಿದ ಕುಟುಂಬಗಳನ್ನು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮೂಲಕ ಕಳುಹಿಸಿಕೊಡಲಾಯಿತು.

ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಪುನರ್ವಸತಿ ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಭೂಮಿಯನ್ನು ಖಾತೆ ಮಾಡಿಕೊಡದೆ, ಕೃಷಿಗೆ ಭೂಮಿ ನೀಡದೆ ಅನ್ಯಾಯವೆಸಗಿದ್ದಾರೆ. ಹೀಗಾಗಿ ಅಧಿಕಾರಿಗಳೊಂದಿಗೆ ಆದಿವಾಸಿಗಳು ಸಂಘರ್ಷ ನಡೆಸುತ್ತಲೇ ಇದ್ದಾರೆ. ಅಧಿಕಾರಿಗಳು ಪುನರ್ವಸತಿ  ಕೇಂದ್ರಕ್ಕೆ ಆಗಮಿಸಿ ಸೌಲಭ್ಯ ಒದಗಿಸುವ ಬಗ್ಗೆ ಭರವಸೆ ನೀಡುತ್ತಾರೆ. ಆರು ತಿಂಗಳಲ್ಲಿ ಬೇರೆಡೆಗೆ ವರ್ಗಾವಣೆಯಾಗುತ್ತಾರೆ. ಹೊಸ ಅಧಿಕಾರಿ ಬಂದಾಗಲೂ ಇದೇ ರೀತಿಯ ಭರವಸೆ ನೀಡುತ್ತಾರೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂಬುದು ಆದಿವಾಸಿಗಳ ಕೂಗು.

ಸಿಟ್ಟಿಗೆದ್ದ ಆದಿವಾಸಿಗಳು ಹಾಡಿ ಮುಖಂಡರಾದ ಜೇನು ಕುರುಬರ ಟಿ.ಅಯ್ಯಪ್ಪ ಹಾಗೂ ಜೇಬು ಕುರುಬರ ಎಂ.ಸಣ್ಣಯ್ಯ ನೇತೃತ್ವದಲ್ಲಿ ಹೊರಟು ಅಡಗುಂಡಿ ಅರಣ್ಯಕ್ಕೆ ಆಗಮಿಸಿದರು. ವಿಷಯ ತಿಳಿದ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಡುಗುಂಡಿಗೇಟ್ ಬಳಿಯೇ ಆದಿವಾಸಿಗಳನ್ನು ತಡೆದಿದ್ದಾರೆ. ಗೇಟ್‌ ಬಳಿಯೇ ಪ್ರತಿಭಟನೆಯನ್ನು ನಡೆಸಿದಾಗ, ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದಾರೆ.

“ಆರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳು ಬದಲಾಗುತ್ತಾರೆ. ಆಶ್ವಾಸನಗೆಗಳು ಹಾಗೆಯೇ ಉಳಿಯುತ್ತವೆ. ಮೂರು ಎಕರೆ ಜಮೀನಿಗೆ ಯಾವುದೇ ಆರ್‌ಟಿಸಿ ಇಲ್ಲಿಯತನಕ ನೀಡಿಲ್ಲ. ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಭೂಮಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಮಾತು ಉಳಿಸಿಕೊಂಡಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರ್‌ ವಸತಿಗೆ ತೆರಳುವ ವೇಳೆ 15 ಲಕ್ಷ ರೂ. ಪ್ಯಾಕೇಜಿನೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹತ್ತು ಲಕ್ಷ ಪ್ಯಾಕೇಜನ್ನು ನೀಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಪ್ಯಾಕೇಜನ್ನು ನೀಡಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ ಸಾಧ್ಯವಾಗುತ್ತಿಲ್ಲ. ಕೊಡಗಿನ ಅರಣ್ಯದ ಗುಡಿಸಲುಗಳಲ್ಲಿ ನೆಮ್ಮದಿಯಾಗಿದ್ದೆವು. ಇದೀಗ ನಾಡಿಗೆ ಕರೆದೊಯ್ದು ನಮ್ಮ ಜೀವನವನ್ನು ಅತಂತ್ರ ಮಾಡಿದ್ದೀರಿ. ಯಾರೂ ಕೂಡ ಈಗ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಉಪವಿಭಾಗಾಧಿಕಾರಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದು, “ಆದಿವಾಸಿಗಳಿಗೆ ನೀಡಬೇಕಿದ್ದ ಸವಲತ್ತುಗಳನ್ನು ಈಡೇರಿಸುವ ಕೆಲಸವು ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ” ಎಂದರು.

ಬುಡಕಟ್ಟು ಸಮುದಾಯಗಳ ಪರ ಕೆಲಸ ಮಾಡುತ್ತಿರುವ ಪ್ರೊ.ಎ.ಎಸ್.ಪ್ರಭಾಕರ್‌ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳು ಭರವಸೆಯಾಗಿದೆಯೇ ಉಳಿದರೆ ವಂಚನೆ ಮಾಡಿದಂತೆ. ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಕಾಯ್ದೆ ಕಾರವೊಡ್ಡಿ ಆದಿವಾಸಿಗಳನ್ನು ಪುನರ್ವಸತಿಗೆ ತರಲಾಯಿತು. 15 ಲಕ್ಷ ರೂ.ಗಳ ಪ್ಯಾಕೇಜ್‌ ಹಾಗೂ ಜಮೀನು ನೀಡುವುದಾಗಿ ಹೇಳಲಾಗಿತ್ತು. ಈ ಭರವಸೆಗಳನ್ನು ಈಡೇರಿಸಿಲ್ಲ. ಇಷ್ಟು ಜನ ಮಾತ್ರವಲ್ಲ; ಊರು ಊರುಗಳನ್ನೇ ಎತ್ತಂಗಡಿ ಮಾಡಲಾಗಿದೆ. ಸಾವಿರಾರು ಕುಟುಂಬಗಳು ಅತಂತ್ರವಾಗಿವೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is true..
    We sd give support, help for their human rights ruined by forest departments and environmentalists, green tribunal wrong orders,,ngo etc…
    Farmers only are the real protectors of land ,forest,peoples leaving around.
    Farmers plantations are more green maintained in most of kodagu ,chickmangloor, areas than reserved forests looks baren. Without trees and water tables ..
    Only money is spent on forest developments

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...