Homeಅಂತರಾಷ್ಟ್ರೀಯರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

ರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

- Advertisement -
- Advertisement -

ಶ್ರೀಲಂಕಾದಲ್ಲಿ ಭುಗಿಲೆದ್ದಿರುವ ಭಾರಿ ಪ್ರತಿಭಟನೆಗೆ ಬೆದರಿ ಅಲ್ಲಿನ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ ಮತ್ತು ಅವರ ಕುಟುಂಬವು ದೇಶದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯಲ್ಲಿರುವ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ. ಶ್ರೀಲಂಕಾದಾದ್ಯಂತ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾರಿ ಪ್ರತಿಭಟನೆಗಳು ಮುಂದುವರಿದಿವೆ.

ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ಹೆಲಿಕಾಪ್ಟರ್‌ ಮೂಲಕ ನೌಕಾನೆಲೆಗೆ ಕೊಂಡೊಯ್ಯಲಾಯಿತು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ರಾಜಧಾನಿ ಕೊಲಂಬೊದಿಂದ ಸುಮಾರು 270 ಕಿಮೀ ದೂರದಲ್ಲಿರುವ ನೌಕಾ ನೆಲೆಯ ಹೊರಗೆ ಕೂಡಾ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರಿ ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ಭೀಕರ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಶ್ರಿಲಂಕಾ ಆಡಳಿತ ಕರ್ಫ್ಯೂ ಜಾರಿಗೊಳಿಸಿದ್ದು, ಅದಕ್ಕಾಗಿ ಸಾವಿರಾರು ಸೈನಿಕರು ಮತ್ತು ಪೊಲೀಸರನ್ನು ನಿಯೋಜಿಸಿದೆ. ಪ್ರಧಾನಿ ರಾಜಪಕ್ಸೆ ರಾಜೀನಾಮೆಯ ನಂತರ ನಡೆದ ಹಿಂಸಾಚಾರದಲ್ಲಿ ಸುಮಾರು 200 ಮಂದಿ ನಿನ್ನೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಕೊಲಂಬೊದಲ್ಲಿನ ರಾಜಪಕ್ಸೆ ಅವರ ಅವರ ಅಧಿಕೃತ ನಿವಾಸಕ್ಕೆ ರಾತ್ರೋರಾತ್ರಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಆಗಮಿಸಿದ್ದರಿಂದ ಪೊಲೀಸರು ಅಶ್ರುವಾಯು ಮತ್ತು ಎಚ್ಚರಿಕೆಯ ಗುಂಡುಗಳನ್ನು ಸಿಡಿಸಿ ಗುಂಪನ್ನು ಹಿಮ್ಮೆಟ್ಟಿಸಿದ್ದಾರೆ. ಇದರ ನಂತರ ಇಂದು ಮುಂಜಾನೆ ಶ್ರಿಲಂಕಾ ಸೇನೆ ಕಾರ್ಯಾಚರಣೆ ನಡೆಸಿ ಅವರನ್ನು ಅಲ್ಲಿಂದ ಅವರನ್ನು ರಕ್ಷಿಸಿದ್ದಾರೆ.

“ಕನಿಷ್ಠ 10 ಪೆಟ್ರೋಲ್ ಬಾಂಬ್‌ಗಳನ್ನು ಕಾಂಪೌಂಡ್‌ಗೆ ಎಸೆಯಲಾಯಿತು” ಎಂದು ಉನ್ನತ ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ AFP ವರದಿ ಮಾಡಿದೆ.

1948 ರಲ್ಲಿ ಸ್ವತಂತ್ರಗೊಂದ ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು ಇದರಿಂದಾಗಿ ವಿದ್ಯುತ್ ಕಡಿತ ಮತ್ತು ಕೊರತೆಗಳಿಂದ ರಾಜಪಕ್ಸೆ ಕುಟುಂಬದ ಅಧಿಕಾರವು ಅಲುಗಾಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷವಾದ SJB ತನ್ನ ಅಡಿಯಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸುವ ಅಧ್ಯಕ್ಷರ ಪ್ರಸ್ತಾಪವನ್ನು ಇಂದು ತಿರಸ್ಕರಿಸಿದೆ. ಬದಲಿಗೆ ಅದು ರಾಷ್ಟ್ರದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಹಲವು ವಾರಗಳಿಂದ ಸರ್ಕಾರದ ವಿರುದ್ದ ಶಾಂತಿಯುತವಾದ ಪ್ರತಿಭಟನಾ ಪ್ರದರ್ಶನಗಳು ನಡೆಯುತ್ತಿದೆ. ಆದರೆ ನಿನ್ನೆ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ನಂತರ ಬೆಂಬಲಿಗರು ಗ್ರಾಮಾಂತರ ಪ್ರದೇಶದಿಂದ ರಾಜಧಾನಿಗೆ ನುಗ್ಗಿ ಪ್ರತಿಭಟನಾಕಾರರ ಮೇಲೆ ದೊಣ್ಣೆಗಳಿಂದ ದಾಳಿ ಮಾಡಿದ್ದರಿಂದ ಹಿಂಸಾಚಾರ ಭುಗಿಲೆದ್ದಿದೆ.

ದೇಶದ ರಾಜಧಾನಿ ಕೊಲಂಬೊದ ಹೊರಗೆ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಗುಂಪಿನಿಂದ ಸುತ್ತುವರಿದ ನಂತರ ಇಬ್ಬರನ್ನು ಗುಂಡಿಕ್ಕಿದ್ದರು. ಈ ವೇಳೆ 27 ವರ್ಷದ ವ್ಯಕ್ತಿಯನ್ನು ಅವರು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ನಂತರ ಅವರು ತನ್ನ ರಿವಾಲ್ವರ್‌ನಿಂದ ತನ್ನ ಪ್ರಾಣವನ್ನು ತೆಗೆದುಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಅತುಕೋರಾಲ ಅವರ ಅಂಗರಕ್ಷಕ ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಕರ್ಫ್ಯೂಗಳ ಹೊರತಾಗಿಯೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿಯಿಡೀ ಸುಟ್ಟು ಹಾಕಲಾಗಿದೆ. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ. “ಇದು ನಾವು ಮೊದಲೇ ಮಾಡಬೇಕಾಗಿದ್ದ ಕೆಲಸ” ಎಂದು ಸಚಿವರೊಬ್ಬರ ಸುಡುವ ಮನೆಯ ಮುಂದೆ ಅಪರಿಚಿತ ವ್ಯಕ್ತಿಯೊಬ್ಬ ಸ್ಥಳೀಯ ಮಾಧ್ಯಮ ನೆಟ್ವರ್ಕ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...