Homeಮುಖಪುಟಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

- Advertisement -
- Advertisement -

2022 ರ ಸಾಲಿನ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿಯನ್ನು ಭಾರತದ ನಾಲ್ವರು ಫೋಟೊ ಜರ್ನಲಿಸ್ಟ್‌ಗಳಿಗೆ ನೀಡಲಾಗಿದೆ. ಇದರಲ್ಲಿ ಅಫ್ಘಾನ್ ಸಂಘರ್ಷದ ಸಂದರ್ಭ ತಾಲಿಬಾನಿಗಳಿಂದ ಹತ್ಯೆಗೀಡಾಗಿದ್ದ ದಿವಂತ ಡ್ಯಾನಿಶ್ ಸಿದ್ದಿಕಿ ಕೂಡಾ ಸೇರಿದ್ದಾರೆ.

ಅವರೊಂದಿಗೆ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ ಮತ್ತು ಅಮಿತ್ ದವೆ ಅವರಿಗೂ ಪ್ರತಿಷ್ಠಿತ ಪ್ರಶಸ್ತಿ ಸಂದಿದೆ.  ಭಾರತದಲ್ಲಿ ಕೊರೊನಾ ಕಾಲದಲ್ಲಿನ ಫೋಟೋಗಳಿಗಾಗಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿದೆ. ಪುಲಿಟ್ಜರ್ ಪ್ರಶಸ್ತಿ ಗೆದ್ದ ಚಿತ್ರಗಳು ಕೆಳಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡ್ಯಾನಿಶ್ ಸಿದ್ದೀಖಿ

ಮೇ 19, 1983 ರಂದು ಜನಿಸಿದ ಡ್ಯಾನಿಶ್ ಸಿದ್ದಿಕಿ ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೋ ಜರ್ನಲಿಸ್ಟ್‌‌ ಆಗಿದ್ದಾರೆ. ಡ್ಯಾನಿಶ್ ಅವರು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ನಂತರ ಅವರು ಅಲ್ಲಿ ‘ಸಮೂಹ ಸಂವಹನ’ ವಿಷಯದಲ್ಲಿ ಸ್ನಾತಕೋತ್ತರ ಅಧ್ಯಯನವನ್ನು ಮಾಡಿದ್ದಾರೆ. ಅವರು ರಾಯಿಟರ್ಸ್ ಸೇರುವ ಮೊದಲು ಹಿಂದೂಸ್ತಾನ್ ಟೈಮ್ಸ್, ಟಿವಿ ಟುಡೆ ನೆಟ್‌ವರ್ಕ್‌ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್ ಫೋಟೋಗ್ರಫಿಗಾಗಿ 2018 ರ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದರು.

ಡ್ಯಾನಿಶ್ ಸಿದ್ದೀಖಿ

2021 ರಲ್ಲಿ, ಪಾಕಿಸ್ತಾನದ ಗಡಿಯ ಸಮೀಪವಿರುವ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘಾನ್ ಭದ್ರತಾ ಪಡೆಗಳು ಮತ್ತು ತಾಲಿಬಾನ್ ಪಡೆಗಳ ನಡುವಿನ ಘರ್ಷಣೆಯನ್ನು ವರದಿ ಮಾಡುವಾಗ ಅವರು ಕೊಲ್ಲಲ್ಪಟ್ಟರು. ಸಿದ್ದಿಕಿ ಅವರು ಜರ್ಮನ್ ಪ್ರಜೆಯಾದ ತಮ್ಮ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರಗಳು ಕೆಳಗಿನಂತಿವೆ

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ಸನ್ನಾ ಇರ್ಷಾದ್ ಮಟ್ಟೂ

ಸನ್ನಾ ಇರ್ಷಾದ್ ಮಟ್ಟೂ ಕಾಶ್ಮೀರ ಮೂಲದ ಫೋಟೋ ಜರ್ನಲಿಸ್ಟ್ ಮತ್ತು ಸಾಕ್ಷ್ಯಚಿತ್ರ ಛಾಯಾಗ್ರಾಹಕಿಯಾಗಿದ್ದಾರೆ. ಅವರ ಚಿತ್ರಗಳು ಕಾಶ್ಮೀರದ ಭಯಂಕರ ಮಿಲಿಟರಿ ಪರಿಸರದ ಸ್ಪಷ್ಟ ಸಂಕೇತಗಳ ನಡುವಿನ ಉದ್ವೇಗವನ್ನು ಚಿತ್ರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ಸನ್ನಾ ಇರ್ಷಾದ್ ಮಟ್ಟೂ

ಪ್ರಪಂಚದಾದ್ಯಂತದ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಲ್ಲಿ ಅವರ ಕೆಲಸವನ್ನು ಪ್ರಕಟಿಸಲಾಗಿದೆ. ಅಲ್ಲದೆ ವಿವಿಧ ಪ್ರದರ್ಶನಗಳು ಮತ್ತು ಉತ್ಸವಗಳಲ್ಲೂ ಅವರ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಪ್ರಸ್ತುತ ಅವರು ಮಲ್ಟಿಮೀಡಿಯಾ ಪತ್ರಕರ್ತರಾಗಿ ರಾಯಿಟರ್ಸ್‌ಗಾಗಿ ಕೆಲಸ ಮಾಡುತ್ತಿದ್ದಾರೆ.

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರ ಕೆಳಗಿದೆ

ಜೂನ್‌ 10, 2021 ರಂದು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಲಿಡ್ಡರ್‌ವಾಟ್‌ನಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಶೀಲ್ಡ್ ಎಂಬ ಕೊರೊನಾವೈರಸ್ ಕಾಯಿಲೆಯ ಲಸಿಕೆಯನ್ನು ಕುರಿ ಕಾಯುವ ವ್ಯಕ್ತಿಗೆ ನೀಡುತ್ತಿದ್ದಾರೆ. (ಚಿತ್ರ: ಸನ್ನಾ ಇರ್ಷಾದ್ ಮಟ್ಟೂ)

ಇದನ್ನೂ ಓದಿ: ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 

ಅದ್ನಾನ್ ಅಬಿದಿ 

ಅದ್ನಾನ್ ಅಬಿದಿ ಪುಲಿಟ್ಜರ್ ಪ್ರಶಸ್ತಿ-ವಿಜೇತ ಫೋಟೋ ಜರ್ನಲಿಸ್ಟ್ ಆಗಿದ್ದಾರೆ. ಅವರ ವೃತ್ತಿಜೀವನವು 1997 ರಲ್ಲಿ ಡಾರ್ಕ್ ರೂಂ ಸಹಾಯಕರಾಗಿ ಪ್ರಾರಂಭವಾಯಿತು. ಅದ್ನಾನ್ 2005 ರಲ್ಲಿ ರಾಯಿಟರ್ಸ್‌ ಸೇರುವ ಮೊದಲು ಪ್ಯಾನ್-ಏಷ್ಯಾ ನ್ಯೂಸ್ ಏಜೆನ್ಸಿ (ಪಾನಾ), ಇಂಡೋ ಫೋಟೋ ನ್ಯೂಸ್ ಮತ್ತು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಿದ್ದಾರೆ.

ಅದ್ನಾನ್ ಅಬಿದಿ
ಅದ್ನಾನ್ ಅಬಿದಿ

ಅದ್ನಾನ್ ಛಾಯಾಗ್ರಹಣಕ್ಕಾಗಿ ಈಗಾಗಲೆ ಎರಡು ಪುಲಿಟ್ಜೆರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಮೊದಲಿಗೆ 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ನಿರ್ಗಮನ ಮತ್ತು ಎರಡನೆ ಬಾರಿಗೆ 2020 ರಲ್ಲಿ ಹಾಂಗ್ ಕಾಂಗ್ ಪ್ರತಿಭಟನೆಗಳ ಚಿತ್ರಕ್ಕಾಗಿ ಅವರು ಪುಲಿಟ್ಜರ್‌ ಪ್ರಶಸ್ತಿ ಗೆದ್ದಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ನೆಲೆಸಿರುವ ಅವರು ಅಲ್ಲಿಂದಲೆ ರಾಯಿಟರ್ಸ್‌ಗಾಗಿ ಹಿರಿಯ ಛಾಯಾಗ್ರಾಹಕರಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಾರ್ಯಯೋಜನೆಗಳ ಕೆಲಸಗಳನ್ನು ಮಾಡುತ್ತಿದ್ದಾರೆ.

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರಗಳು ಕೆಳಗಿನಂತಿವೆ

ಅಮಿತ್ ದವೆ

ಅಮಿತ್ ದವೆ ಅವರು ಮೂರು ದಶಕಗಳ ಅನುಭವ ಹೊಂದಿರುವ ಭಾರತೀಯ ಫೋಟೋ ಜರ್ನಲಿಸ್ಟ್. ಅವರ ವೃತ್ತಿಜೀವನವು ರಾಜ್ಯವೊಂದರ ನಿಯತಕಾಲಿಕೆಯೊಂದಿಗೆ ಛಾಯಾಗ್ರಾಹಕರಾಗಿ ಪ್ರಾರಂಭವಾಯಿತು. ನಂತರ ಅವರು ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ಅದರ ನಂತರ ಅವರು ದೇಶದ ಪ್ರಮುಖ ಪತ್ರಿಕೆಗಳಲ್ಲಿ ಒಂದಾದ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸೇರಿದ್ದಾರೆ. 2002 ರಲ್ಲಿ ಅಮಿತ್ ಅವರು ರಾಯಿಟರ್ಸ್ ಸೇರಿಕೊಂಡರು.

ಅಮಿತ್ ದೇವ್
ಅಮಿತ್ ದೇವ್

ಗಲಭೆಗಳು, ಗುಜರಾತ್‌ನಲ್ಲಿ ಭೂಕಂಪದ ನಂತರದ ಪರಿಣಾಮಗಳು, ಬರಗಾಲಗಳು ಮತ್ತು ದಕ್ಷಿಣ ಭಾರತದಲ್ಲಿ ಹಿಂದೂ ಮಹಾಸಾಗರದ ಸುನಾಮಿಯನ್ನು ಅವರು ವರದಿ ಮಾಡಿದ್ದಾರೆ. ಅವರು ಪ್ರಸ್ತುತ ಗುಜರಾತ್‌ನ ಪ್ರಮುಖ ನಗರವಾದ ಅಹಮದಾಬಾದ್‌ನಲ್ಲಿ ನೆಲೆಸಿದ್ದಾರೆ. ಅಲ್ಲಿಂದ ಅವರು ರಾಯಿಟರ್ಸ್‌ಗಾಗಿ ಸ್ಥಳೀಯ ಮತ್ತು ರಾಷ್ಟ್ರೀಯ ಸುದ್ದಿ ಕಾರ್ಯಯೋಜನೆಗಳಿಗೆ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರ ಕೆಳಗಿದೆ

ಏಪ್ರಿಲ್ 8, 2021 ರಂದು ಅಹಮದಾಬಾದ್‌ನ ಹೊರವಲಯದಲ್ಲಿರುವ ಕವಿತಾ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಿಗೆ ಕೊರೊನಾ ವೈರಸ್ ರೋಗ ಲಸಿಕೆ ಚಾಲನೆಯ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ತಮ್ಮ ಗುಡಿಸಲಿನೊಳಗಿನ ಮಹಿಳೆಯ ತಾಪಮಾನವನ್ನು ಪರಿಶೀಲಿಸುತ್ತಿರುವುದು. (ಅಮಿತ್ ದವೆ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...