Homeಮುಖಪುಟಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

- Advertisement -
- Advertisement -

2022 ರ ಸಾಲಿನ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿಯನ್ನು ಭಾರತದ ನಾಲ್ವರು ಫೋಟೊ ಜರ್ನಲಿಸ್ಟ್‌ಗಳಿಗೆ ನೀಡಲಾಗಿದೆ. ಇದರಲ್ಲಿ ಅಫ್ಘಾನ್ ಸಂಘರ್ಷದ ಸಂದರ್ಭ ತಾಲಿಬಾನಿಗಳಿಂದ ಹತ್ಯೆಗೀಡಾಗಿದ್ದ ದಿವಂತ ಡ್ಯಾನಿಶ್ ಸಿದ್ದಿಕಿ ಕೂಡಾ ಸೇರಿದ್ದಾರೆ.

ಅವರೊಂದಿಗೆ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ ಮತ್ತು ಅಮಿತ್ ದವೆ ಅವರಿಗೂ ಪ್ರತಿಷ್ಠಿತ ಪ್ರಶಸ್ತಿ ಸಂದಿದೆ.  ಭಾರತದಲ್ಲಿ ಕೊರೊನಾ ಕಾಲದಲ್ಲಿನ ಫೋಟೋಗಳಿಗಾಗಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿದೆ. ಪುಲಿಟ್ಜರ್ ಪ್ರಶಸ್ತಿ ಗೆದ್ದ ಚಿತ್ರಗಳು ಕೆಳಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡ್ಯಾನಿಶ್ ಸಿದ್ದೀಖಿ

ಮೇ 19, 1983 ರಂದು ಜನಿಸಿದ ಡ್ಯಾನಿಶ್ ಸಿದ್ದಿಕಿ ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೋ ಜರ್ನಲಿಸ್ಟ್‌‌ ಆಗಿದ್ದಾರೆ. ಡ್ಯಾನಿಶ್ ಅವರು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ನಂತರ ಅವರು ಅಲ್ಲಿ ‘ಸಮೂಹ ಸಂವಹನ’ ವಿಷಯದಲ್ಲಿ ಸ್ನಾತಕೋತ್ತರ ಅಧ್ಯಯನವನ್ನು ಮಾಡಿದ್ದಾರೆ. ಅವರು ರಾಯಿಟರ್ಸ್ ಸೇರುವ ಮೊದಲು ಹಿಂದೂಸ್ತಾನ್ ಟೈಮ್ಸ್, ಟಿವಿ ಟುಡೆ ನೆಟ್‌ವರ್ಕ್‌ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್ ಫೋಟೋಗ್ರಫಿಗಾಗಿ 2018 ರ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದರು.

ಡ್ಯಾನಿಶ್ ಸಿದ್ದೀಖಿ

2021 ರಲ್ಲಿ, ಪಾಕಿಸ್ತಾನದ ಗಡಿಯ ಸಮೀಪವಿರುವ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘಾನ್ ಭದ್ರತಾ ಪಡೆಗಳು ಮತ್ತು ತಾಲಿಬಾನ್ ಪಡೆಗಳ ನಡುವಿನ ಘರ್ಷಣೆಯನ್ನು ವರದಿ ಮಾಡುವಾಗ ಅವರು ಕೊಲ್ಲಲ್ಪಟ್ಟರು. ಸಿದ್ದಿಕಿ ಅವರು ಜರ್ಮನ್ ಪ್ರಜೆಯಾದ ತಮ್ಮ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರಗಳು ಕೆಳಗಿನಂತಿವೆ

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ಸನ್ನಾ ಇರ್ಷಾದ್ ಮಟ್ಟೂ

ಸನ್ನಾ ಇರ್ಷಾದ್ ಮಟ್ಟೂ ಕಾಶ್ಮೀರ ಮೂಲದ ಫೋಟೋ ಜರ್ನಲಿಸ್ಟ್ ಮತ್ತು ಸಾಕ್ಷ್ಯಚಿತ್ರ ಛಾಯಾಗ್ರಾಹಕಿಯಾಗಿದ್ದಾರೆ. ಅವರ ಚಿತ್ರಗಳು ಕಾಶ್ಮೀರದ ಭಯಂಕರ ಮಿಲಿಟರಿ ಪರಿಸರದ ಸ್ಪಷ್ಟ ಸಂಕೇತಗಳ ನಡುವಿನ ಉದ್ವೇಗವನ್ನು ಚಿತ್ರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ಸನ್ನಾ ಇರ್ಷಾದ್ ಮಟ್ಟೂ

ಪ್ರಪಂಚದಾದ್ಯಂತದ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಲ್ಲಿ ಅವರ ಕೆಲಸವನ್ನು ಪ್ರಕಟಿಸಲಾಗಿದೆ. ಅಲ್ಲದೆ ವಿವಿಧ ಪ್ರದರ್ಶನಗಳು ಮತ್ತು ಉತ್ಸವಗಳಲ್ಲೂ ಅವರ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಪ್ರಸ್ತುತ ಅವರು ಮಲ್ಟಿಮೀಡಿಯಾ ಪತ್ರಕರ್ತರಾಗಿ ರಾಯಿಟರ್ಸ್‌ಗಾಗಿ ಕೆಲಸ ಮಾಡುತ್ತಿದ್ದಾರೆ.

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರ ಕೆಳಗಿದೆ

ಜೂನ್‌ 10, 2021 ರಂದು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಲಿಡ್ಡರ್‌ವಾಟ್‌ನಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಶೀಲ್ಡ್ ಎಂಬ ಕೊರೊನಾವೈರಸ್ ಕಾಯಿಲೆಯ ಲಸಿಕೆಯನ್ನು ಕುರಿ ಕಾಯುವ ವ್ಯಕ್ತಿಗೆ ನೀಡುತ್ತಿದ್ದಾರೆ. (ಚಿತ್ರ: ಸನ್ನಾ ಇರ್ಷಾದ್ ಮಟ್ಟೂ)

ಇದನ್ನೂ ಓದಿ: ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 

ಅದ್ನಾನ್ ಅಬಿದಿ 

ಅದ್ನಾನ್ ಅಬಿದಿ ಪುಲಿಟ್ಜರ್ ಪ್ರಶಸ್ತಿ-ವಿಜೇತ ಫೋಟೋ ಜರ್ನಲಿಸ್ಟ್ ಆಗಿದ್ದಾರೆ. ಅವರ ವೃತ್ತಿಜೀವನವು 1997 ರಲ್ಲಿ ಡಾರ್ಕ್ ರೂಂ ಸಹಾಯಕರಾಗಿ ಪ್ರಾರಂಭವಾಯಿತು. ಅದ್ನಾನ್ 2005 ರಲ್ಲಿ ರಾಯಿಟರ್ಸ್‌ ಸೇರುವ ಮೊದಲು ಪ್ಯಾನ್-ಏಷ್ಯಾ ನ್ಯೂಸ್ ಏಜೆನ್ಸಿ (ಪಾನಾ), ಇಂಡೋ ಫೋಟೋ ನ್ಯೂಸ್ ಮತ್ತು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಿದ್ದಾರೆ.

ಅದ್ನಾನ್ ಅಬಿದಿ
ಅದ್ನಾನ್ ಅಬಿದಿ

ಅದ್ನಾನ್ ಛಾಯಾಗ್ರಹಣಕ್ಕಾಗಿ ಈಗಾಗಲೆ ಎರಡು ಪುಲಿಟ್ಜೆರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಮೊದಲಿಗೆ 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ನಿರ್ಗಮನ ಮತ್ತು ಎರಡನೆ ಬಾರಿಗೆ 2020 ರಲ್ಲಿ ಹಾಂಗ್ ಕಾಂಗ್ ಪ್ರತಿಭಟನೆಗಳ ಚಿತ್ರಕ್ಕಾಗಿ ಅವರು ಪುಲಿಟ್ಜರ್‌ ಪ್ರಶಸ್ತಿ ಗೆದ್ದಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ನೆಲೆಸಿರುವ ಅವರು ಅಲ್ಲಿಂದಲೆ ರಾಯಿಟರ್ಸ್‌ಗಾಗಿ ಹಿರಿಯ ಛಾಯಾಗ್ರಾಹಕರಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಾರ್ಯಯೋಜನೆಗಳ ಕೆಲಸಗಳನ್ನು ಮಾಡುತ್ತಿದ್ದಾರೆ.

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರಗಳು ಕೆಳಗಿನಂತಿವೆ

ಅಮಿತ್ ದವೆ

ಅಮಿತ್ ದವೆ ಅವರು ಮೂರು ದಶಕಗಳ ಅನುಭವ ಹೊಂದಿರುವ ಭಾರತೀಯ ಫೋಟೋ ಜರ್ನಲಿಸ್ಟ್. ಅವರ ವೃತ್ತಿಜೀವನವು ರಾಜ್ಯವೊಂದರ ನಿಯತಕಾಲಿಕೆಯೊಂದಿಗೆ ಛಾಯಾಗ್ರಾಹಕರಾಗಿ ಪ್ರಾರಂಭವಾಯಿತು. ನಂತರ ಅವರು ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ಅದರ ನಂತರ ಅವರು ದೇಶದ ಪ್ರಮುಖ ಪತ್ರಿಕೆಗಳಲ್ಲಿ ಒಂದಾದ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸೇರಿದ್ದಾರೆ. 2002 ರಲ್ಲಿ ಅಮಿತ್ ಅವರು ರಾಯಿಟರ್ಸ್ ಸೇರಿಕೊಂಡರು.

ಅಮಿತ್ ದೇವ್
ಅಮಿತ್ ದೇವ್

ಗಲಭೆಗಳು, ಗುಜರಾತ್‌ನಲ್ಲಿ ಭೂಕಂಪದ ನಂತರದ ಪರಿಣಾಮಗಳು, ಬರಗಾಲಗಳು ಮತ್ತು ದಕ್ಷಿಣ ಭಾರತದಲ್ಲಿ ಹಿಂದೂ ಮಹಾಸಾಗರದ ಸುನಾಮಿಯನ್ನು ಅವರು ವರದಿ ಮಾಡಿದ್ದಾರೆ. ಅವರು ಪ್ರಸ್ತುತ ಗುಜರಾತ್‌ನ ಪ್ರಮುಖ ನಗರವಾದ ಅಹಮದಾಬಾದ್‌ನಲ್ಲಿ ನೆಲೆಸಿದ್ದಾರೆ. ಅಲ್ಲಿಂದ ಅವರು ರಾಯಿಟರ್ಸ್‌ಗಾಗಿ ಸ್ಥಳೀಯ ಮತ್ತು ರಾಷ್ಟ್ರೀಯ ಸುದ್ದಿ ಕಾರ್ಯಯೋಜನೆಗಳಿಗೆ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

2022 ರ ಪುಲಿಟ್ಜರ್‌ ಪ್ರಶಸ್ತಿ ಗೆದ್ದ ಅವರ ಚಿತ್ರ ಕೆಳಗಿದೆ

ಏಪ್ರಿಲ್ 8, 2021 ರಂದು ಅಹಮದಾಬಾದ್‌ನ ಹೊರವಲಯದಲ್ಲಿರುವ ಕವಿತಾ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಿಗೆ ಕೊರೊನಾ ವೈರಸ್ ರೋಗ ಲಸಿಕೆ ಚಾಲನೆಯ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ತಮ್ಮ ಗುಡಿಸಲಿನೊಳಗಿನ ಮಹಿಳೆಯ ತಾಪಮಾನವನ್ನು ಪರಿಶೀಲಿಸುತ್ತಿರುವುದು. (ಅಮಿತ್ ದವೆ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...