Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...