Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...