Homeರಾಷ್ಟ್ರೀಯಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

ಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

- Advertisement -
- Advertisement -

ಸರ್ಕಾರವು ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಕಾನೂನನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶದಲ್ಲಿ ಹೇಳಿದ್ದು, ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಬ್ರಿಟೀಷ್‌‌‌‌ ವಸಾಹತುಶಾಹಿ ಯುಗದ ಆಳ್ವಿಕೆಯ ಅಡಿಯಲ್ಲಿ ಸ್ವಾತಂತ್ಯ್ರ ಹೋರಾಟಗಾರರನ್ನು ಹಣಿಯಲು ಬೇಕಾಗಿ ರಚಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸುವಂತೆ ಮತ್ತು ಅದನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇಂದು ನೀಡಿದ ಮಹತ್ವದ ಆದೇಶದ ಕುರಿತು ಕೆಲವು ಅಂಶಗಳು ಇಲ್ಲಿದೆ:

  • ಸರ್ಕಾರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುತ್ತಿರುವಾಗ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣದ ಮೇಲೆ ದೇಶದ್ರೋಹ ಕಾನೂನನ್ನು ಅನ್ವಯಿಸಿದ ಪ್ರಕರಣಗಳಲ್ಲಿ ಅದರ ದುರುಪಯೋಗವನ್ನು ಆಪಾದಿಸಿ ಕಾನೂನನ್ನು ಪ್ರಶ್ನಿಸಿದ ಅರ್ಜಿಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

  • “ಮುಂದಿನ ಮರು ಪರಿಶೀಲನೆ ಮುಗಿಯುವವರೆಗೆ ದೇಶದ್ರೋಹ ಕಾನೂನನ್ನು ಬಳಸದಿರುವುದು ಸೂಕ್ತವಾಗಿರುತ್ತದೆ. ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು 124 ಎ (ದೇಶದ್ರೋಹದ ಕಾನೂನು) ಅಡಿಯಲ್ಲಿ ಯಾವುದೇ ಎಫ್‌ಐಆರ್ ಅನ್ನು ನೋಂದಾಯಿಸುವುದನ್ನು ನಿಲ್ಲಿಸುತ್ತವೆ ಎಂದು ನಾವು ಭಾವಿಸುತ್ತೇವೆ ಮತ್ತು ನಿರೀಕ್ಷಿಸುತ್ತೇವೆ’’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಹೇಳಿದ್ದಾರೆ.
  • ಯಾವುದೇ ಹೊಸ ಪ್ರಕರಣಗಳು ದಾಖಲಾದರೆ, ಆರೋಪಿಗಳು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರಿಂಕೋರ್ಟ್‌ ಹೇಳಿದೆ.
  • “ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ರಾಜ್ಯಗಳಿಗೆ ನಿರ್ದೇಶನಗಳನ್ನು ರವಾನಿಸಲು ಒಕ್ಕೂಟ ಸರ್ಕಾರದ ಅಡಿಯಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
  • ದೇಶದ್ರೋಹ ಕಾನೂನನ್ನು ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿದ್ದ ಒಕ್ಕೂಟ ಸರ್ಕಾರವು ಕಾನೂನನ್ನು ತಡೆಹಿಡಿಯುವುದರ ಪರವಾಗಿಲ್ಲ ಎಂದು ವಾದಿಸಿತ್ತು. ಸದ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕು ಎಂದು ಶಿಫಾರಸು ಮಾಡಿತ್ತು.
  • “ಮುಂಬರುವ ಎಫ್‌ಐಆರ್‌ಗಳಲ್ಲಿ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೇ ಎಂಬುದರ ಕುರಿತು ಸದ್ಯಕ್ಕೆ ಸೂಪರಿಂಟೆಂಡೆಂಟ್ ಅಥವಾ ಅದಕ್ಕಿಂತ ಹೆಚ್ಚಿನ ಹಂತದ ಪೊಲೀಸ್ ಅಧಿಕಾರಿ ನಿರ್ಧರಿಸಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಪ್ರಸ್ತಾಪಿಸಿದೆ” ಎಂದು ಒಕ್ಕೂಟ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

  • ಬಾಕಿ ಇರುವ ಪ್ರಕರಣಗಳು ಈಗಾಗಲೇ ನ್ಯಾಯಾಲಯದ ಮುಂದೆ ಇವೆ ಎಂದು ಸರ್ಕಾರ ಹೇಳಿದೆ.
  • “ಭಾರತದಾದ್ಯಂತ ದಾಖಲಾದ ದೇಶದ್ರೋಹ ಪ್ರಕರಣಗಳಲ್ಲಿನ ಅಪರಾಧಗಳ ಗಂಭೀರತೆ ನಮಗೆ ತಿಳಿದಿಲ್ಲ. ಈ ಪ್ರಕರಣಗಳಲ್ಲಿ ಇತರ ಭಯೋತ್ಪಾದನೆ ಆರೋಪಗಳೂ ಇರಬಹುದು. ಬಾಕಿ ಇರುವ ಪ್ರಕರಣಗಳು ಪೊಲೀಸ್ ಅಥವಾ ಸರ್ಕಾರದ ಮುಂದೆ ಇರುವುದಲ್ಲ, ಅವು ನ್ಯಾಯಾಲಯದ ಮುಂದೆ ಇವೆ. ಹಾಗಾಗಿ, ನ್ಯಾಯಾಲಯಗಳ ವಿವೇಕವನ್ನು ನಾವು ಊಹಿಸಬಾರದು” ಎಂದು ಮೆಹ್ತಾ ಹೇಳಿದ್ದಾರೆ.
  • ಆದರೆ ಅರ್ಜಿದಾರರು ಸರ್ಕಾರದ ನಿಲುವನ್ನು ವಿರೋಧಿಸಿ, ವಸಾಹತುಶಾಹಿ ಯುಗದ ಕಾನೂನನ್ನು ಸರ್ಕಾರವು ಪರಿಶೀಲಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...