Homeರಾಷ್ಟ್ರೀಯಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

ಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

- Advertisement -
- Advertisement -

ಸರ್ಕಾರವು ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಕಾನೂನನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶದಲ್ಲಿ ಹೇಳಿದ್ದು, ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಬ್ರಿಟೀಷ್‌‌‌‌ ವಸಾಹತುಶಾಹಿ ಯುಗದ ಆಳ್ವಿಕೆಯ ಅಡಿಯಲ್ಲಿ ಸ್ವಾತಂತ್ಯ್ರ ಹೋರಾಟಗಾರರನ್ನು ಹಣಿಯಲು ಬೇಕಾಗಿ ರಚಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸುವಂತೆ ಮತ್ತು ಅದನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇಂದು ನೀಡಿದ ಮಹತ್ವದ ಆದೇಶದ ಕುರಿತು ಕೆಲವು ಅಂಶಗಳು ಇಲ್ಲಿದೆ:

  • ಸರ್ಕಾರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುತ್ತಿರುವಾಗ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣದ ಮೇಲೆ ದೇಶದ್ರೋಹ ಕಾನೂನನ್ನು ಅನ್ವಯಿಸಿದ ಪ್ರಕರಣಗಳಲ್ಲಿ ಅದರ ದುರುಪಯೋಗವನ್ನು ಆಪಾದಿಸಿ ಕಾನೂನನ್ನು ಪ್ರಶ್ನಿಸಿದ ಅರ್ಜಿಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

  • “ಮುಂದಿನ ಮರು ಪರಿಶೀಲನೆ ಮುಗಿಯುವವರೆಗೆ ದೇಶದ್ರೋಹ ಕಾನೂನನ್ನು ಬಳಸದಿರುವುದು ಸೂಕ್ತವಾಗಿರುತ್ತದೆ. ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು 124 ಎ (ದೇಶದ್ರೋಹದ ಕಾನೂನು) ಅಡಿಯಲ್ಲಿ ಯಾವುದೇ ಎಫ್‌ಐಆರ್ ಅನ್ನು ನೋಂದಾಯಿಸುವುದನ್ನು ನಿಲ್ಲಿಸುತ್ತವೆ ಎಂದು ನಾವು ಭಾವಿಸುತ್ತೇವೆ ಮತ್ತು ನಿರೀಕ್ಷಿಸುತ್ತೇವೆ’’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಹೇಳಿದ್ದಾರೆ.
  • ಯಾವುದೇ ಹೊಸ ಪ್ರಕರಣಗಳು ದಾಖಲಾದರೆ, ಆರೋಪಿಗಳು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರಿಂಕೋರ್ಟ್‌ ಹೇಳಿದೆ.
  • “ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ರಾಜ್ಯಗಳಿಗೆ ನಿರ್ದೇಶನಗಳನ್ನು ರವಾನಿಸಲು ಒಕ್ಕೂಟ ಸರ್ಕಾರದ ಅಡಿಯಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
  • ದೇಶದ್ರೋಹ ಕಾನೂನನ್ನು ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿದ್ದ ಒಕ್ಕೂಟ ಸರ್ಕಾರವು ಕಾನೂನನ್ನು ತಡೆಹಿಡಿಯುವುದರ ಪರವಾಗಿಲ್ಲ ಎಂದು ವಾದಿಸಿತ್ತು. ಸದ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕು ಎಂದು ಶಿಫಾರಸು ಮಾಡಿತ್ತು.
  • “ಮುಂಬರುವ ಎಫ್‌ಐಆರ್‌ಗಳಲ್ಲಿ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೇ ಎಂಬುದರ ಕುರಿತು ಸದ್ಯಕ್ಕೆ ಸೂಪರಿಂಟೆಂಡೆಂಟ್ ಅಥವಾ ಅದಕ್ಕಿಂತ ಹೆಚ್ಚಿನ ಹಂತದ ಪೊಲೀಸ್ ಅಧಿಕಾರಿ ನಿರ್ಧರಿಸಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಪ್ರಸ್ತಾಪಿಸಿದೆ” ಎಂದು ಒಕ್ಕೂಟ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

  • ಬಾಕಿ ಇರುವ ಪ್ರಕರಣಗಳು ಈಗಾಗಲೇ ನ್ಯಾಯಾಲಯದ ಮುಂದೆ ಇವೆ ಎಂದು ಸರ್ಕಾರ ಹೇಳಿದೆ.
  • “ಭಾರತದಾದ್ಯಂತ ದಾಖಲಾದ ದೇಶದ್ರೋಹ ಪ್ರಕರಣಗಳಲ್ಲಿನ ಅಪರಾಧಗಳ ಗಂಭೀರತೆ ನಮಗೆ ತಿಳಿದಿಲ್ಲ. ಈ ಪ್ರಕರಣಗಳಲ್ಲಿ ಇತರ ಭಯೋತ್ಪಾದನೆ ಆರೋಪಗಳೂ ಇರಬಹುದು. ಬಾಕಿ ಇರುವ ಪ್ರಕರಣಗಳು ಪೊಲೀಸ್ ಅಥವಾ ಸರ್ಕಾರದ ಮುಂದೆ ಇರುವುದಲ್ಲ, ಅವು ನ್ಯಾಯಾಲಯದ ಮುಂದೆ ಇವೆ. ಹಾಗಾಗಿ, ನ್ಯಾಯಾಲಯಗಳ ವಿವೇಕವನ್ನು ನಾವು ಊಹಿಸಬಾರದು” ಎಂದು ಮೆಹ್ತಾ ಹೇಳಿದ್ದಾರೆ.
  • ಆದರೆ ಅರ್ಜಿದಾರರು ಸರ್ಕಾರದ ನಿಲುವನ್ನು ವಿರೋಧಿಸಿ, ವಸಾಹತುಶಾಹಿ ಯುಗದ ಕಾನೂನನ್ನು ಸರ್ಕಾರವು ಪರಿಶೀಲಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...