Homeಕರ್ನಾಟಕಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಸುವರ್ಣ ಟಿವಿ & ಬಿಟಿವಿ ಕಚೇರಿಯ ರಸ್ತೆಯಲ್ಲಿ ಕೂಡಾ ತೆರಳಬಾರದು ಎಂದು ಪೊಲೀಸರು ಹೇಳಿದ್ದಾರೆ ಸತ್ಯಾಗ್ರಹಿಗಳು ಆರೋಪಿಸಿದ್ದಾರೆ

- Advertisement -
- Advertisement -

ಕನ್ನಡದ ಮಾಧ್ಯಮಗಳಾದ ಸುವರ್ಣ ಟಿವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ ನಡೆಸಲು ತೆರಳುತ್ತಿದ್ದ ಸತ್ಯಾಗ್ರಹಿಗಳನ್ನು ಬೆಂಗಳೂರಿನ ಹೈಗ್ರೌಂಡ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಸತ್ಯಾಗ್ರಹ ನಡೆಸಲು ಯೋಜಿಸಿದ್ದರು.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್‌ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಂ. ಯುವರಾಜ್, “ಸತ್ಯಾಗ್ರಹಿಗಳನ್ನು ಪೊಲೀಸರು ಹೈಗ್ರೌಂಡ್‌ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಮೊದಲಿಗೆ ಪಬ್ಲಿಕ್ ಟಿವಿ ಕಚೇರಿ ಮುಂದೆ ಮೊದಲಿಗೆ ಹೋದೆವು. ಅವರು ನಮ್ಮನ್ನು ಬರಮಾಡಿಕೊಂಡು, ನಮಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

‘ನಾವು ಅವರಿಗೆ ಗುಲಾಬಿ ಕೊಟ್ಟು, ಮನವಿಯನ್ನು ನೀಡಿದೆವು, ಅವರು ಕೂಡಾ ನಮ್ಮ ಮನವಿಯನ್ನು ಸ್ವೀಕರಿಸಿದರು. ನಾವು ಶಾಂತಿಯುತವಾಗಿಯೆ ಗಾಂಧೀಜಿಯ ಭಜನೆಯಾದ ರಘುಪತಿ ರಾಘವ ರಾಜಾರಾಂ ಹಾಡಿ ಅಲ್ಲಿಂದ ತೆರಳಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಅಲ್ಲಿಂದ ಸುವರ್ಣ ಮತ್ತು ಬಿಟಿವಿ ಕಚೇರಿ ತೆಳುತ್ತಿದ್ದಾಗ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದಿದ್ದಾರೆ. “ಪಬ್ಲಿಕ್ ಟಿವಿ ಕಚೇರಿಯಿಂದ ನಾವು ಸುವರ್ಣ ಮತ್ತು ಬಿಟಿವಿ ಕಚೇರಿಗೆ ಹೊರಟಾಗ ಹೈಗ್ರೌಂಡ್‌ ಠಾಣೆಯ ಪೊಲೀಸರು ರಸ್ತೆಯಲ್ಲೇ ನಮ್ಮನ್ನು ತಡೆಹಿಡಿದರು” ಎಂದು ಯುವರಾಜ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ನಾವು ಪೊಲೀಸರೊಂದಿಗೆ ಪಬ್ಲಿಕ್ ಟಿವಿ ಕಚೇರಿಯಲ್ಲಿ ಮನವಿ ಮಾಡಿದಂತೆ ಬೇರೆ ಟಿವಿ ಕಚೇರಿ ಮುಂದೆಯು ಮನವಿ ಮಾಡಿ ಹೋಗುತ್ತೇವೆ ಎಂದು ತಿಳಿಸಿದೆವು. ಆದರೆ ವ್ಯಕ್ತಿಯೊಬ್ಬರು ಬಂದು, ‘ಸುವರ್ಣ ಕಚೇರಿ ಮುಂದೆ ಬರುವುದು ಬೇಡ. ಬಿಟಿವಿ ಮುಂದೆ ಕೂಡಾ ಬರುವುದು ಬೇಡ ಎಂದು ಅವರು ಹೇಳುತ್ತಿದ್ದಾರೆ’ ಎಂದು ಹೇಳಿದರು. ನಾವು ಅವರಿಗೆ ಒಂದು ಮನವಿ ಪತ್ರ ಕೂಡಾ ಕೊಡಲು ಅವಕಾಶ ಇಲ್ಲವೆ ಎಂದು ಕೇಳಿದೆವು. ಅಷ್ಟರಲ್ಲಿ ಹೈಗ್ರೌಂಡ್ ಠಾಣೆಯ ಪೊಲೀಸರು ನಮ್ಮನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಕಳೆದ ಒಂದು ಗಂಟೆಯಿಂದ 15 ಜನರು ಹೈಗ್ರೌಂಡ್ ಠಾಣೆಯಲ್ಲಿ ಇದ್ದೇವೆ” ಎಂದು ಯುವರಾಜ್ ಮಾಹಿತಿ ನೀಡಿದ್ದಾರೆ.


ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...