Homeಕರ್ನಾಟಕಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಟಿವಿ ಚಾನೆಲ್‌‌‌ ಕಚೇರಿಗಳ ಮುಂದೆ ಶಾಂತಿಯುತ ಸತ್ಯಾಗ್ರಹ: ವಶಕ್ಕೆ ಪಡೆದ ಪೊಲೀಸರು

ಸುವರ್ಣ ಟಿವಿ & ಬಿಟಿವಿ ಕಚೇರಿಯ ರಸ್ತೆಯಲ್ಲಿ ಕೂಡಾ ತೆರಳಬಾರದು ಎಂದು ಪೊಲೀಸರು ಹೇಳಿದ್ದಾರೆ ಸತ್ಯಾಗ್ರಹಿಗಳು ಆರೋಪಿಸಿದ್ದಾರೆ

- Advertisement -
- Advertisement -

ಕನ್ನಡದ ಮಾಧ್ಯಮಗಳಾದ ಸುವರ್ಣ ಟಿವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ ನಡೆಸಲು ತೆರಳುತ್ತಿದ್ದ ಸತ್ಯಾಗ್ರಹಿಗಳನ್ನು ಬೆಂಗಳೂರಿನ ಹೈಗ್ರೌಂಡ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಸತ್ಯಾಗ್ರಹ ನಡೆಸಲು ಯೋಜಿಸಿದ್ದರು.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್‌ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಎಂ. ಯುವರಾಜ್, “ಸತ್ಯಾಗ್ರಹಿಗಳನ್ನು ಪೊಲೀಸರು ಹೈಗ್ರೌಂಡ್‌ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಮೊದಲಿಗೆ ಪಬ್ಲಿಕ್ ಟಿವಿ ಕಚೇರಿ ಮುಂದೆ ಮೊದಲಿಗೆ ಹೋದೆವು. ಅವರು ನಮ್ಮನ್ನು ಬರಮಾಡಿಕೊಂಡು, ನಮಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

‘ನಾವು ಅವರಿಗೆ ಗುಲಾಬಿ ಕೊಟ್ಟು, ಮನವಿಯನ್ನು ನೀಡಿದೆವು, ಅವರು ಕೂಡಾ ನಮ್ಮ ಮನವಿಯನ್ನು ಸ್ವೀಕರಿಸಿದರು. ನಾವು ಶಾಂತಿಯುತವಾಗಿಯೆ ಗಾಂಧೀಜಿಯ ಭಜನೆಯಾದ ರಘುಪತಿ ರಾಘವ ರಾಜಾರಾಂ ಹಾಡಿ ಅಲ್ಲಿಂದ ತೆರಳಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೆ ಅಲ್ಲಿಂದ ಸುವರ್ಣ ಮತ್ತು ಬಿಟಿವಿ ಕಚೇರಿ ತೆಳುತ್ತಿದ್ದಾಗ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದಿದ್ದಾರೆ. “ಪಬ್ಲಿಕ್ ಟಿವಿ ಕಚೇರಿಯಿಂದ ನಾವು ಸುವರ್ಣ ಮತ್ತು ಬಿಟಿವಿ ಕಚೇರಿಗೆ ಹೊರಟಾಗ ಹೈಗ್ರೌಂಡ್‌ ಠಾಣೆಯ ಪೊಲೀಸರು ರಸ್ತೆಯಲ್ಲೇ ನಮ್ಮನ್ನು ತಡೆಹಿಡಿದರು” ಎಂದು ಯುವರಾಜ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ನಾವು ಪೊಲೀಸರೊಂದಿಗೆ ಪಬ್ಲಿಕ್ ಟಿವಿ ಕಚೇರಿಯಲ್ಲಿ ಮನವಿ ಮಾಡಿದಂತೆ ಬೇರೆ ಟಿವಿ ಕಚೇರಿ ಮುಂದೆಯು ಮನವಿ ಮಾಡಿ ಹೋಗುತ್ತೇವೆ ಎಂದು ತಿಳಿಸಿದೆವು. ಆದರೆ ವ್ಯಕ್ತಿಯೊಬ್ಬರು ಬಂದು, ‘ಸುವರ್ಣ ಕಚೇರಿ ಮುಂದೆ ಬರುವುದು ಬೇಡ. ಬಿಟಿವಿ ಮುಂದೆ ಕೂಡಾ ಬರುವುದು ಬೇಡ ಎಂದು ಅವರು ಹೇಳುತ್ತಿದ್ದಾರೆ’ ಎಂದು ಹೇಳಿದರು. ನಾವು ಅವರಿಗೆ ಒಂದು ಮನವಿ ಪತ್ರ ಕೂಡಾ ಕೊಡಲು ಅವಕಾಶ ಇಲ್ಲವೆ ಎಂದು ಕೇಳಿದೆವು. ಅಷ್ಟರಲ್ಲಿ ಹೈಗ್ರೌಂಡ್ ಠಾಣೆಯ ಪೊಲೀಸರು ನಮ್ಮನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಾವು ಕಳೆದ ಒಂದು ಗಂಟೆಯಿಂದ 15 ಜನರು ಹೈಗ್ರೌಂಡ್ ಠಾಣೆಯಲ್ಲಿ ಇದ್ದೇವೆ” ಎಂದು ಯುವರಾಜ್ ಮಾಹಿತಿ ನೀಡಿದ್ದಾರೆ.


ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...