Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...