Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...