Homeಮುಖಪುಟಕರಾಳ ದೇಶದ್ರೋಹ ಕಾನೂನು ಕೊನೆಗೊಳ್ಳಬಹುದೇ?

ಕರಾಳ ದೇಶದ್ರೋಹ ಕಾನೂನು ಕೊನೆಗೊಳ್ಳಬಹುದೇ?

- Advertisement -
- Advertisement -

ಸೆಡಿಷನ್ ಅಂದರೆ ದೇಶದ್ರೋಹ ಕಾನೂನಿನ ಸಂವಿಧಾನಾತ್ಮಕತೆಗೆ ಸಂಬಂಧಿಸಿದ ಪ್ರಶ್ನೆಯನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಕೊಳ್ಳಲಿದೆ. ಇದನ್ನು ಜಸ್ಟೀಸ್ ರಮಣ ಅವರ ನೇತೃತ್ವದ ಮೂವರು ನ್ಯಾಯಾಧೀಶರ ಬೆಂಚ್ ಪರಿಶೀಲಿಸಿ, ವಿಚಾರಣೆ ನಡೆಸಿ, ನಿರ್ಧರಿಸಲಿದೆ. ಚೀಫ್ ಜಸ್ಟೀಸ್ ರಮಣ ಅವರು ಇದರ ಬಗ್ಗೆ ಯಾವ ರೀತಿ ಯೋಚಿಸುತ್ತಾರೆ ಎಂಬುದರ ಬಗ್ಗೆ ಈಗಾಗಲೇ ಸುಳಿವು ಸಿಕ್ಕಿದೆ; ವಿಚಾರಣೆಯ ಸಮಯದಲ್ಲಿ ಅವರು ಅಟಾರ್ನಿ ಜನರಲ್‌ಗೆ, ಸ್ವಾತಂತ್ರ್ಯ ಬಂದು 75 ವರ್ಷಗಳಾದ ಮೇಲೂ ಈ ಕಾಯಿದೆ ಅವಶ್ಯಕತೆ ಇದೆಯೇ ಎಂದು ಕೇಳಿದರು. ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ’ಈ ವಸಾಹತುಶಾಹಿ ಕಾನೂನು’ನ್ನು ಬ್ರಿಟಿಷರು ಸ್ವಾತಂತ್ರ್ಯವನ್ನು ಹತ್ತಿಕ್ಕಲು ಬಳುಸುತ್ತಿದ್ದರು ಹಾಗೂ ಮಹಾತ್ಮ ಗಾಂಧಿ ಮತ್ತು ಬಾಲ ಗಂಗಾಧರ ತಿಲಕ ಅವರ ವಿರುದ್ಧ ಬಳಸಿದ್ದರು ಎಂದು ಹೇಳಿದರು.

ನ್ಯಾಯಾಂಗದ ಬಳಗದಲ್ಲಿಯೂ ಈ ಕಾನೂನನ್ನು ರದ್ದುಪಡಿಸುವ ಕಡೆಗೇ ಒಲವು ಬಲವಾಗಿರುವಂತೆ ಕಾಣಿಸುತ್ತಿದೆ. ಸರ್ವೋಚ್ಚ ನ್ಯಾಯಾಲಯದ ಐವರು ನಿವೃತ್ತ ನ್ಯಾಯಾಧೀಶರುಗಳು (ಜಸ್ಟೀಸ್ ದೀಪಕ್ ಗುಪ್ತ, ಆಫ್ತಾಬ್ ಅಲಂ, ವಿ ಗೋಪಾಲಗೌಡ, ರೋಹಿಂಟನ್ ನಾರಿಮನ್ ಮತ್ತು ಮದನ್ ಲೋಕುರ್) ಈ ಕಾನೂನನ್ನು ಸರ್ವೋಚ್ಚ ನ್ಯಾಯಾಲಯವು ರದ್ದುಪಡಿಸುವ ಅಗತ್ಯದ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ.

ಜಸ್ಟೀಸ್ ರಮಣ

ದೇಶದ್ರೋಹ ಪ್ರಕರಣವನ್ನು ದಾಖಲಿಸುವುದಕ್ಕೆ ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ, ಕೇದಾರನಾಥ ಸಿಂಗ್ ವರ್ಸಸ್ ಸ್ಟೇಟ್ ಆಫ್ ಬಿಹಾರ್ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಸೂಚಿಸಿತ್ತು. ಆದರೆ ಕೆಳಹಂತದ ನ್ಯಾಯಾಂಗ ಮತ್ತು ಪೊಲೀಸ್ ಇಲಾಖೆ, ಈ ಎರಡೂ ಕಡೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳನ್ನು ಎತ್ತಿಹಿಡಿಯಲು ಸತತವಾಗಿ ವಿಫಲವಾಗಿರುವುದು ದೇಶದ್ರೋಹ ಕಾನೂನು ರದ್ದುಪಡಿಸುವ ವ್ಯಾಪಕ ಅಭಿಪ್ರಾಯಕ್ಕೆ ಕಾರಣವಾಗಿವೆ. ಪ್ರಭುತ್ವದ ವಿರುದ್ಧ ಹಿಂಸೆಯನ್ನು ಪ್ರಚೋದಿಸುವ ಭಾಷಣಕ್ಕೆ ಮಾತ್ರ ದೇಶದ್ರೋಹದ ಕಾನೂನನ್ನು ಸೀಮಿತವಾಗಿಸಬೇಕು ಎಂದು 1962ರಲ್ಲಿಯೇ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿತ್ತು.

ಸರ್ವೋಚ್ಚ ನ್ಯಾಯಾಲಯ ಹೇಳಿದ್ದ ಮಾತುಗಳು ಹೀಗಿವೆ: ’ಪ್ರತಿಕ್ರಿಯೆಗಳು ಎಷ್ಟೇ ತೀವ್ರತರ ಮಾತುಗಳನ್ನು ಹೊಂದಿರಲಿ, ಸರಕಾರದ ಕ್ರಮಗಳ ವಿರುದ್ಧ ಅಸಮ್ಮತಿಯನ್ನು ವ್ಯಕ್ತಪಡಿಸುವ ಟೀಕೆಗಳಾಗಿರಲಿ, ಆದರೆ ಆ ಹಿಂಸೆಯ ಕ್ರಿಯೆಗಳ ಮೂಲಕ ಸಾರ್ವಜನಿಕ ಅವ್ಯವಸ್ಥೆಯನ್ನು ಸೃಷ್ಟಿಸುವುದಕ್ಕೆ ಕಾರಣವಾಗುವ ಭಾವನೆಗಳನ್ನು ಸೃಷ್ಟಿಸದೇ ಇದ್ದರೆ ಅದನ್ನು ಶಿಕ್ಷಾರ್ಹ ಎಂದು ಪರಿಗಣಿಸಬಾರದು’. ಹಾಗಾಗಿ, ’ಸಾರ್ವಜನಿಕ ಅವ್ಯವಸ್ಥೆಯನ್ನು ಸೃಷ್ಟಿಸುವ ಅಥವಾ ಹಿಂಸೆಯ ಬಳಕೆ’ ಇಲ್ಲವಾದರೆ ಈ ಕಾನೂನು ಅನ್ವಯಿಸುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1995ರ ಬಲವಂತ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಇಂದಿರಾ ಗಾಂಧಿಯ ಹತ್ಯೆಯಾದ ದಿನದಂದು ’ಖಾಲಿಸ್ತಾನ್ ಜಿಂದಾಬಾದ್’ಅನ್ನು ಒಳಗೊಂಡ ಘೋಷಣೆಗಳನ್ನು ಕೂಗಿದ್ದು ದೇಶದ್ರೋಹವಾಗುವುದೇ ಎಂಬುದರ ಬಗ್ಗೆ ತೀರ್ಪು ನೀಡಿತ್ತು. ಆಗ ಸರ್ವೋಚ್ಚ ನ್ಯಾಯಾಲಯವು, “ಇತರ ಯಾವುದೇ ರೀತಿಯ ಕ್ರಿಯೆಗಳನ್ನು ಮಾಡದೇ ಒಂದೆರಡು ಸಲ ಇಂತಹ ಕ್ಯಾಷುವಲ್ ಘೋಷಣೆಗಳನ್ನು ಕೂಗಿರುವುದಕ್ಕೆ ದೇಶದ್ರೋಹದ ಕಾನೂನು ಅನ್ವಯಿಸುವುದು ನಮಗೆ ಕಷ್ಟವಾಗುತ್ತದೆ” ಎಂದು ಹೇಳಿತ್ತು.

ಕೇದಾರನಾಥ ಮತ್ತು ಬಲವಂತ ಸಿಂಗ್ ಪ್ರಕರಣಗಳ ತೀರ್ಪುಗಳನ್ನು ಸತತವಾಗಿ ಉಲ್ಲಂಘಿಸಲಾಗಿದೆ. ಭಿನ್ನಮತೀಯರು, ಪತ್ರಕರ್ತರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳು ಹಾಗೂ ಇಷ್ಟವಿಲ್ಲದ ಸರ್ಕಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸಾಮಾನ್ಯ ನಾಗರಿಕರನ್ನೂ ಗುರಿಯಾಗಿಸಲು ಈ ಕಾನೂನನ್ನು ಬಳಸಲಾಗಿದೆ. ಒಕ್ಕೂಟ ಸರಕಾರ ಮತ್ತು ರಾಜ್ಯ ಸರಕಾರಗಳೆರಡೂ ದೇಶದ್ರೋಹದ ಪ್ರಕರಣಗಳನ್ನು ಹಾಕುವಾಗ ’ಹಿಂಸೆಗೆ ಪ್ರಚೋದನೆ’ ಇರಬೇಕು ಎಂಬ ಕಾನೂನಾತ್ಮಕ ಅಗತ್ಯತೆಯನ್ನು ನಿರಾಯಾಸವಾಗಿ ನಿರ್ಲಕ್ಷಿಸಿವೆ. ಕೇದಾರನಾಥ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಸೂಚಿಸಿದ ಕಾನೂನನ್ನು ಎಲ್ಲಾ ಸರಕಾರಗಳು ಸತತವಾಗಿ ನಿರ್ಲಕ್ಷಿಸಿವೆ.

ಆದರೆ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಮೇಲೆ ದೇಶದ್ರೋಹ ಕಾನೂನಿನ ದುರ್ಬಳಕೆಯು ಹೆಚ್ಚಾಗಿದೆ. ’ಆರ್ಟಿಕಲ್ 14’ ಮಾಧ್ಯಮ ಸಂಸ್ಥೆಯ ಒಂದು ಅಧ್ಯಯನ ಸೂಚಿಸುವಂತೆ, 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದಿಂದ ದೇಶದ್ರೋಹದ ಕಾನೂನಿನಡಿಯಲ್ಲಿ ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿದ ಸಂಖ್ಯೆಯಲ್ಲಿ 190% ಹೆಚ್ಚಳವಾಗಿದೆ. ಈ ಮಹಿಳೆಯರಲ್ಲಿ ಒಬ್ಬ ಕಲಾವಿದೆ, ಒಬ್ಬ ಸಿನೆಮಾ ನಿರ್ದೇಶಕಿ, ಒಬ್ಬ ಅಕಾಡೆಮಿಕ್, ಒಬ್ಬ ಹೋರಾಟಗಾರ್ತಿ, ಒಬ್ಬ ವಿದ್ಯಾರ್ಥಿನಿ, ಒಬ್ಬ ಗೃಹಿಣಿ ಮತ್ತು ಒಬ್ಬ ರಾಜಕಾರಣಿಯೂ ಸೇರಿದ್ದಾರೆ.

2010 ಮತ್ತು 2021ರ ನಡುವೆ ರಾಜಕಾರಣಿಗಳು ಮತ್ತು ಸರ್ಕಾರಗಳನ್ನು ಟೀಕಿಸಿದ್ದಕ್ಕಾಗಿ 405 ಜನ ಭಾರತೀಯರ ಮೇಲೆ ದೇಶದ್ರೋಹದ ಆರೋಪದ ಪ್ರಕರಣಕ್ಕೆ ದಾಖಲಿಸಲಾಗಿದೆ. ಅದರಲ್ಲಿ 96% ಪ್ರಕರಣಗಳನ್ನು 2014ರ ನಂತರ ದಾಖಲಿಸಿರುವುದು. ಅದರಲ್ಲಿ 149 ಜನರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಾಗೂ 144 ಜನರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ’ವಿಮರ್ಶಾತ್ಮಕ’ ಹಾಗೂ/ಅಥವಾ ’ಅವಹೇಳನಾತ್ಮಕ’ ಟಿಪ್ಪಣಿಗಳನ್ನು ಮಾಡಿದ್ದಕಾಗಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ವಾತಂತ್ರ್ಯದ ದೃಷ್ಟಿಯಲ್ಲಿ ಈ ಕಾನೂನನ್ನು ಇಲ್ಲವಾಗಿಸಬೇಕು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ.

ಆದರೆ ದುರದೃಷ್ಟವಶಾತ್, ಭಾರತದ ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸರ್ವೋಚ್ಚ ನ್ಯಾಯಾಲಯದಲ್ಲಿ ತಾಳಿರುವ ನಿಲುವಿನ ಪ್ರಕಾರ, ಕೇದಾರನಾಥ ತೀರ್ಪು ಸಮಯದ ಪರೀಕ್ಷೆಯಲ್ಲಿ ಈ ಕಾನೂನು ಉತ್ತೀರ್ಣವಾಗಿದೆ ಹಾಗೂ ಸೆಕ್ಷನ್ 124-ಎನ ಸಂವಿಧಾನಾತ್ಮಕತೆಯನ್ನು ಮರುಪರಿಶೀಲನೆ ಮಾಡುವ ಅಗತ್ಯ ಇಲ್ಲ ಎಂದು. ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ತುಸು ಭಿನ್ನವಾದ ನಿಲುವನ್ನು ತಾಳಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124-ಎ ತೆಗೆದುಹಾಕುವ ಅಗತ್ಯ ಇಲ್ಲ ಆದರೆ ಈ ಕಾನೂನಿನ ದುರ್ಬಳಕೆಯನ್ನು ತಡೆಗಟ್ಟಲು ನ್ಯಾಯಾಲಯವು ಮಾರ್ಗಸೂಚಿಗಳನ್ನು ರಚಿಸಬಹುದು ಎಂದಿದ್ದಾರೆ.

ಭಾರತದ ಒಕ್ಕೂಟ ಸರಕಾರವು ಈ ಕಾನೂನನ್ನು ರದ್ದುಪಡಿಸಲು ವಿರೋಧಿಸುತ್ತಿರುವುದು ನ್ಯಾಯಾಲಯಕ್ಕೆ ಒಂದು ಸವಾಲಾಗಲಿದೆ. ಒಕ್ಕೂಟ ಸರಕಾರದ ಈ ಗಟ್ಟಿಯಾದ ಪ್ರತಿಪಾದನೆಯ ಹೊರತಾಗಿಯೂ ಸರ್ವೋಚ್ಚ ನ್ಯಾಯಾಲಯ ತನ್ನ ಸಂವಿಧಾನಾತ್ಮಕ ಹೊಣೆಗಾರಿಕೆಯನ್ನು ನಿರ್ವಹಿಸುವುದಕ್ಕೆ ಸಿದ್ಧವಾಗಿದೆಯೇ ಹಾಗೂ ಈ ಕಾನೂನು ಸಂವಿಧಾನಾತ್ಮಕವಾಗಿಲ್ಲ ಎಂಬ ತೀರ್ಮಾನಕ್ಕೆ ಬಂದರೆ ಅದನ್ನು ತೆಗೆದುಹಾಕಲು ಸನ್ನದ್ಧವಾಗಿದೆಯೇ ಎಂಬುದನ್ನು ತೋರಿಸಬೇಕಿದೆ. ಒಂದು ವೇಳೆ ಸರ್ವೋಚ್ಚ ನ್ಯಾಯಾಲಯ ನಿಜವಾಗಿಯೂ ಈ ಕಾನೂನನ್ನು ತೆಗೆದುಹಾಕಿದರೆ, ಭಾರತದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರಕ್ಕೆ ಒದಗಿರುವ ದೊಡ್ಡ ತೊಡಕನ್ನು ತೆಗೆದುಹಾಕಿದಂತಾಗುತ್ತದೆ.

ಒಂದು ವೇಳೆ ಚೀಫ್ ಜಸ್ಟೀಸ್ ರಮಣ ಅವರ ನೇತೃತ್ವದ ಬೆಂಚ್ ಈ ಕಾನೂನನ್ನು ತೆಗೆದುಹಾಕಿದರೆ, ಅದು ಚೀಫ್ ಜಸ್ಟೀಸ್ ರಮಣ ಅವರ ಅಧಿಕಾರಾವಧಿಯಲ್ಲಿ ಆದ ಅತ್ಯಂತ ಪ್ರಮುಖ ಸಾಧನೆಯಾಗಲಿದೆ. ರಮಣ ಅವರ ಅಧಿಕಾರವಧಿ 2022ರ ಆಗಸ್ಟ್‌ನಲ್ಲಿ ಮುಗಿಯಲಿದೆ. ಹಾಗೂ ಅಷ್ಟರಲ್ಲಿ ಇತರ ಪ್ರಮುಖ ವಿಷಯಗಳಾದ ಚುನಾವಣಾ ಬಾಂಡ್ಸ್, ಸೆಕ್ಷನ್ 370ರ ಸಂವಿಧಾನಾತ್ಮಕತೆ, ಸಿಎಎಗೆ ಹಾಕಿರುವ ಸವಾಲು ಮುಂತಾದವುಗಳ ಬಗ್ಗೆ ತೀರ್ಪು ಬರುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ವೇಳೆ ಸೆಕ್ಷನ್ 124-ಎ ಸಂವಿಧಾನಾತ್ಮಕವಲ್ಲ ಎಂದು ತೀರ್ಮಾನಿಸಿದರೆ, ಕಾರ್ಯಾಂಗದ ಅತಿಯಾದ ಒತ್ತಡವಿದ್ದಾಗಲೂ, ನ್ಯಾಯಾಲಯವು ಸಂವಿಧಾನಾತ್ಮಕ ಮೌಲ್ಯಗಳ ಪರವಾಗಿ ನಿಲ್ಲಲು ಅಣಿಯಾಗಿರುವ ಸಂಸ್ಥೆ ಎಂಬ ಅದರ ಬಗೆಗಿನ ಗೌರವವನ್ನು ಇನ್ನಷ್ಟು ಹೆಚ್ಚಿಸಲಿದೆ. ಇಂತ ಒಂದು ನಿರ್ಣಯವು ದೇಶಾದ್ಯಂತ ಮಾನವ ಹಕ್ಕು ಹೋರಾಟಗಾರರಿಗೆ ಹುರುಪು ನೀಡಿದಂತಾಗುತ್ತದೆ ಹಾಗೂ ಭಾರತೀಯ ಪ್ರಜಾಪ್ರಭುತ್ವವನ್ನು ಪುನರುಜ್ಜೀವನಗೊಳಿಸಿದಂತಾಗುತ್ತದೆ.

ಇಂತಹ ಒಂದು ನಿರ್ಣಯವನ್ನು (ಒಂದು ವೇಳೆ ನಿರೀಕ್ಷೆಯಂತೆ ಬಂದರೆ) ಎಷ್ಟೇ ಸಂಭ್ರಮಿಸಿದರೂ, ನಾವು
ನೆನಪಿನಲ್ಲಿಟ್ಟುಕೊಳ್ಳಬೇಕಾಗಿರುವುದು ಏನೆಂದರೆ, ದೇಶದ್ರೋಹದ ಕಾನೂನು ಇಲ್ಲವಾದರೂ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕಲು ಈ ಸರಕಾರದ ಕೈಯಲ್ಲಿ ಹಲವಾರು ಸಾಧನಗಳಿವೆ. ಅದರಲ್ಲಿ ಎಲ್ಲಕ್ಕಿಂತ ಅಪಾಯಕಾರಿಯಾಗಿರುವುದು ಯುಎಪಿಎ (ಅನ್‌ಲಾಫುಲ್ ಆಕ್ಟಿವಿಟೀಸ್ ಪ್ರಿವೆನ್ಷನ್ ಆಕ್ಟ್- ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ). ಇದರ ಅಡಿಯಲ್ಲಿಯೇ ಪ್ರಕರಣ ದಾಖಲಿಸಿರುವ ಭೀಮಾ ಕೊರೆಗಾಂವ್-13, ಸಿಎಎ ವಿರೋಧಿ ಪ್ರತಿಭಟನಾಕಾರರ ಜೊತಗೆ ದೇಶಾದ್ಯಂತ ಸಾವಿರಾರು ಜನರು ಇನ್ನೂ ಜೈಲಿನಲ್ಲಿದ್ದಾರೆ. ದೇಶದ್ರೋಹದ ಕಾನೂನಿನ ಅಡಿಯಲ್ಲಿ ಬಂಧಿತರಾದವರು ಬಹಳ ಕಷ್ಟದ ನಂತರ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಬಹುದು ಆದರೆ ಯುಎಪಿಎ ಅಡಿಯಲ್ಲಿ ಬಂಧಿತರಿಗೆ ಇಂತಹ ಯಾವ ಸೌಲಭ್ಯವೂ ಇಲ್ಲ. ಹಾಗಾಗಿ, ಯುಎಪಿಎಯ ಸಂವಿಧಾನಾತ್ಮಕತೆಯನ್ನೂ ಸರ್ವೋಚ್ಚ ನ್ಯಾಯಾಲವ ಪರಿಶೀಲಿಸುವುದು ಅತ್ಯಗತ್ಯವಾಗಿದೆ.

ಅರವಿಂದ್ ನಾರಾಯಣ್
ಸಂವಿಧಾನ ತಜ್ಞರು, ಪಿಯುಸಿಎಲ್-ಕೆ ನ ರಾಜ್ಯಾಧ್ಯಕ್ಷರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಇಂದಿನ ಮಾಬ್ ಹಿಂಸೆ ಮುಂದೆ ನರಮೇಧಕ್ಕೆ ಕಾರಣವಾದೀತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...