Homeಕಂಡದ್ದು ಕಂಡಹಾಗೆಮನ ಮುಟ್ಟುವ ಪತ್ರಿಕೋದ್ಯಮದ  ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮನ ಮುಟ್ಟುವ ಪತ್ರಿಕೋದ್ಯಮದ  ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ.

- Advertisement -
- Advertisement -
| ನ್ಯಾಯಪಥ ಸಂಪಾದಕೀಯ ತಂಡ |

ಮಾಧ್ಯಮಗಳು ಪ್ರಜಾತಂತ್ರದ ನಾಲ್ಕನೆಯ ಅಂಗವೆಂದು ಹೇಳುವುದು ಕೇವಲ ಕ್ಲೀಷೆಯಷ್ಟೇ ಅಲ್ಲ, ಅದೀಗ ಅಪಹಾಸ್ಯದ ವಸ್ತುವಾಗುತ್ತಿದೆ. ಒಂದೆಡೆ ನಿರ್ಭೀತ ಪತ್ರಕರ್ತರು ಅಲ್ಲಲ್ಲಿ ದಾಳಿಗೊಳಗಾಗಿ ಕೊಲೆಯಾಗುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕೆಲವು ಪತ್ರಕರ್ತರು ಬ್ಲಾಕ್‍ಮೇಲ್, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಜೈಲು ಸೇರುತ್ತಿದ್ದಾರೆ. ರಾಜಕಾರಣಿಗಳನ್ನು ಓಲೈಸುವ ಸರಣಿ ಸರಣಿ ಕಾರ್ಯಕ್ರಮ ಮಾಡುವ ಪತ್ರಕರ್ತರು, ಐಸಿಯುಗೆ ನುಗ್ಗಿ ಮೆದುಳು ಜ್ವರ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೇಲೆ ವಾಗ್ದಾಳಿ ನಡೆಸುತ್ತಾರೆ. ಕಾಲ ಸರಿಯುತ್ತಿದ್ದ ಹಾಗೆ, ಹೆಚ್ಚೆಚ್ಚು ಮಾಧ್ಯಮ ಸಂಸ್ಥೆಗಳು ಬೆರಳೆಣಿಕೆಯ ಕಾರ್ಪೋರೇಟ್ ಕುಳಗಳ ಆಸ್ತಿಗಳಾಗುತ್ತಿವೆ.

ದೇಶದ ಅತೀ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟೈಮ್ಸ್ ಗುಂಪಿನ ಹಿರಿಯ ಸ್ಥಾನದಲ್ಲಿರುವ ವ್ಯಕ್ತಿ, ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮತ್ರ್ಯಸೆನ್‍ರ ಕುರಿತ ಸುಳ್ಳುಗಳನ್ನು ಖುದ್ದು ಪ್ರಚಾರ ಮಾಡುತ್ತಾರೆ. ಅದರ ಕುರಿತು ಮಾತನಾಡಿದ ಸೆನ್, ಇಷ್ಟು ಪುಟ್ಟ ಲೇಖನದೊಳಗೆ ಅಷ್ಟೊಂದು ಸುಳ್ಳುಗಳನ್ನು ಪೇರಿಸಿರುವ ಅವರ ಸಾಮಥ್ರ್ಯವನ್ನು ಅಭಿನಂದಿಸಬೇಕು ಎಂದರಂತೆ. ಇನ್ನೂ ಯಾವ್ಯಾವ ಬಗೆಯ ಕಿರೀಟಗಳನ್ನು ದೇಶದ ಮಾಧ್ಯಮಗಳು ಪಡೆದುಕೊಳ್ಳುತ್ತವೋ ಗೊತ್ತಿಲ್ಲ.

ಪರಿಸ್ಥಿತಿ ಹೀಗಿರುವಾಗ, 2 ದಶಕಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿದ್ದ ಕರ್ನಾಟಕದ ಪತ್ರಕರ್ತರೊಬ್ಬರು ನಮ್ಮಲ್ಲಿ ವಿಸ್ಮಯ ಮೂಡಿಸಿದರು. ಗೌರಿ ಲಂಕೇಶರ ಆಶಯಗಳ ಮುಂದುವರಿಕೆಯ ನ್ಯಾಯಪಥ ಪತ್ರಿಕೆಗೆ ಮಾರ್ಗದರ್ಶನ ಮಾಡಬೇಕೆಂದು ಅವರಲ್ಲಿ ಟ್ರಸ್ಟ್‍ನ ಹಿರಿಯರು ಮನವಿ ಮಾಡಿದರು. ಅದಕ್ಕೆ ಅವರು ವಿಧಿಸಿದ ಷರತ್ತುಗಳು ಆಶ್ಚರ್ಯಕರವಾಗಿತ್ತು. ಅದರಲ್ಲಿ ಮುಖ್ಯವಾದುದು, ತನ್ನ ಆಸ್ತಿ ವಿವರಗಳನ್ನು ಟ್ರಸ್ಟ್‍ನ ಹಿರಿಯರು ಖುದ್ದಾಗಿ ಕೇಳಿಸಿಕೊಳ್ಳಬೇಕು ಮತ್ತು ತಾನು ಇದುವರೆಗೆ ‘ಮಾಡಿರಬಹುದಾದ’ ತಪ್ಪುಗಳ ಕುರಿತ ವರದಿಯನ್ನು ಒಪ್ಪಿಸುತ್ತೇನೆ. ಆ ನಂತರ ಟ್ರಸ್ಟ್‍ಗೆ ಒಪ್ಪಿಗೆಯಿದ್ದರೆ, ಇದರೊಂದಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಡಿ.ಉಮಾಪತಿಯವರನ್ನು ಬಲ್ಲ ಯಾರಿಗೂ ಇಂತಹ ವಿಚಾರಗಳಲ್ಲಿ ಯಾವ ಹುಳುಕೂ ಇರುವುದಿಲ್ಲ ಎಂಬ ಖಚಿತ ವಿಶ್ವಾಸವಿತ್ತು. ಆದರೂ ಅಪಾರ ಮುಜುಗರ, ಕಟು ಪ್ರಾಮಾಣಿಕತೆಯ ಅವರು ಸಂಪೂರ್ಣ ಪಾರದರ್ಶಕವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಟ್ಟರು. ಅದು ಅವರ ಬಗ್ಗೆ ವಿಶ್ವಾಸ ಹೆಚ್ಚಿಸಿದ್ದಷ್ಟೇ ಅಲ್ಲದೇ, ಇತರರಿಗೂ ಒಂದು ಮಾದರಿ ನಿರ್ಮಾಣವಾದಂತಾಯಿತು.

ಈ ‘ಪ್ರಕ್ರಿಯೆ’ ಪೂರ್ಣಗೊಂಡ ನಂತರವೇ ಡಿ.ಉಮಾಪತಿಯವರು ಇದರ ‘ಕನ್ಸಲ್ಟಿಂಗ್ ಎಡಿಟರ್’ ಆಗಲು ಒಪ್ಪಿಕೊಂಡರು. ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಮೂರು ಪ್ರಮುಖ ದಿನಪತ್ರಿಕೆಗಳಲ್ಲಿ (ಕನ್ನಡಪ್ರಭ, ವಿಜಯಕರ್ನಾಟಕ ಮತ್ತು ಪ್ರಜಾವಾಣಿ) ದೆಹಲಿ ವರದಿಗಾರರಾಗಿ ಕೆಲಸ ಮಾಡಿರುವ ಉಮಾಪತಿಯವರು, ಕಳೆದ ಕೆಲ ಕಾಲದಿಂದ ಬರೆದ ಅಂಕಣ ಬರಹಗಳು ರಾಜ್ಯದ ಪ್ರಜ್ಞಾವಂತರನ್ನು ತಟ್ಟಿರುವ ಪರಿ ಅನನ್ಯವಾದುದು.

ಇದರೊಂದಿಗೆ, ಪತ್ರಿಕೆಯ ಜವಾಬ್ದಾರಿಯಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಲಿವೆ. ಹಲವು ಹಿರಿಯರು ಬೇರೆ ಬೇರೆ ರೀತಿಯಲ್ಲಿ ಇದರ ಜೊತೆಗೂಡಲಿದ್ದಾರೆ. ಮುಂಬರುವ ಸಂಚಿಕೆಗಳಲ್ಲಿ ಅಧಿಕೃತವಾಗಿ ನಿಮ್ಮೊಂದಿಗೆ ಅದನ್ನು ವಿಸ್ತೃತವಾಗಿ ಹಂಚಿಕೊಳ್ಳಲಿದ್ದೇವೆ.

ಹೊಸ ಕಾಲದ ಜನಪರ ಮಾಧ್ಯಮದ ಹಲವು ಪ್ರಯೋಗಗಳು ದೇಶಾದ್ಯಂತ ಜಾರಿಯಲ್ಲಿದೆ. ‘80ರ ದಶಕದಲ್ಲಿ ಕರ್ನಾಟಕದ ರಾಜಕಾರಣ, ಸಾಹಿತ್ಯ ಸಂಸ್ಕೃತಿಗಳನ್ನು ಮತ್ತು ಯುವತಲೆಮಾರನ್ನು ಗಾಢವಾಗಿ ಪ್ರಭಾವಿಸಿದ ಲಂಕೇಶ್ ಪತ್ರಿಕೆಯು ಈ ನಾಡಿನ ವಿಶಿಷ್ಟ ಟ್ಯಾಬ್ಲಾಯ್ಡ್ ಆಗಿತ್ತು. ಇಂದು ಅದೇ ಬಗೆಯ ಟ್ಯಾಬ್ಲಾಯ್ಡ್ ಅದೇ ರೀತಿಯ ಪಾತ್ರ ನಿರ್ವಹಿಸಲಾರದು. ಮುದ್ರಣ ಮಾಧ್ಯಮದ ಸಾಧ್ಯತೆಗಳು ಇನ್ನೂ ಮುಗಿದು ಹೋಗಿಲ್ಲ; ಆದರೆ, ವೆಬ್ ಮೀಡಿಯಾದಲ್ಲಿ ಅಪಾರವಾದ ಸಾಧ್ಯತೆಗಳು ತೆರೆದುಕೊಂಡಿವೆ. ಇವೆಲ್ಲವನ್ನೂ ಬೆಸೆದು, ಹೊಸ ನುಡಿಗಟ್ಟು, ಭಾಷೆ-ಪರಿಭಾಷೆಗಳೊಂದಿಗೆ ಈ ಕಾಲದ ಯುವತಲೆಮಾರನ್ನು ಒಳಗೊಳ್ಳುವ ರೀತಿ-ನೀತಿಗಳನ್ನು ರೂಪಿಸುವ ಹಂತದಲ್ಲಿ ನಾವಿದ್ದೇವೆ. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಿವೆ. ಇದರಲ್ಲಿ ನೀವೆಲ್ಲರೂ ಪಾಲುದಾರರು.

ಈ ಪತ್ರಿಕೆಯು ಒಂದು ಗುಂಪಿನ, ಒಂದು ಪಂಥದ, ಒಂದು ಸೈದ್ಧಾಂತಿಕ ಧಾರೆಯ ಮುಖವಾಣಿಯಲ್ಲ; ದೇಶ ಮತ್ತು ಜನಪರ ಹಿತಾಸಕ್ತಿಯ ಹೊರತಾಗಿ ಬೇರೆ ಆಸಕ್ತಿಗಳೂ ಇಲ್ಲ. ಪ್ರಜಾತಂತ್ರ ಮತ್ತು ಜೀವಪರತೆಯ ಆಶಯಗಳುಳ್ಳ ಎಲ್ಲ ಪಂಥಗಳೂ ಒಟ್ಟುಗೂಡಿ ಒಂದು ಪಂಥವಾಗಲಿ ಎಂಬ ಆಶಯವಷ್ಟೇ ನಮ್ಮದು.

ಇವತ್ತಿನ ಜಾಣಜಾಣೆಯರನ್ನು ಒಳಗೊಳ್ಳುವ ರಂಜನೆ, ಬೋಧನೆ, ಪ್ರಚೋದನೆಗಳು ಎಂದಿನಂತೆ ಪತ್ರಿಕೆಯ ಹೂರಣ ಹಾಗೂ ಸ್ವರೂಪವನ್ನು ನಿರ್ಧರಿಸಬೇಕು. ಹಾಗಾಗಿ ಪತ್ರಿಕೆಯು ನಿಮ್ಮೆಲ್ಲರ ಅಭಿವ್ಯಕ್ತಿಯ ವೇದಿಕೆಯೂ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...