Homeಕರ್ನಾಟಕಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌‌ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ರಮ್ಯ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿಯಾಗಿದ್ದು, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಮಾಜಿ ಸಂಸದೆ, ನಟಿ ರಮ್ಯಾ ಗುರುವಾರ ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್‌‌‌ ಅವರ ಆದೇಶದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಕಾಂಗ್ರೆಸ್ ಐಟಿ ಸೆಲ್‌ ಕಡೆಯಿಂದ ರಚಿತವಾಗಿದೆ ಎಂದು ಹೇಳಿ ಹಲವು ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕಾಂಗ್ರೆಸ್‌ನ ಪ್ರಚಾರ ಸಮಿತಿ ನಾಯಕ ಎಂ.ಬಿ. ಪಾಟೀಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ. ಶಿವಕುಮಾರ್‌ ಅವರ ಆರೋಪವನ್ನು ನಿರಾಕರಿಸಿರುವ ಎಂ.ಬಿ. ಪಾಟೀಲ್‌, “ಅಶ್ವಥ್‌ ನಾರಾಯಣ ಅವರು ನನ್ನನ್ನು ಭೇಟಿ ಮಾಡಿಲ್ಲ. ಒಂದು ವೇಳೆ ಅವರು ಭೇಟಿ ಮಾಡಿದ್ದರೂ ತಪ್ಪಿಲ್ಲ. ಅದು ನನ್ನ ಖಾಸಗಿ ವಿಚಾರ, ಅದರ ಬಗ್ಗೆ ಮಾತನಾಡಿರುವುದು ತಪ್ಪು, ಅದು ಅವರ ಸಣ್ಣತನ. ರಾಜಕೀಯ ವಿಚಾರ ಬಂದಾಗ ನಾನು ಪಕ್ಷದ ಜೊತೆಗೆ ಇರುತ್ತೇನೆ. ಶಿವಕುಮಾರ್‌ ಅವರ ಆರೋಪವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಗೆ ವಿಚಾರವನ್ನು ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯ ಮೇಲೆಯೇ ಡಿಕೆಶಿ ಇಂತಹ ಹೇಳಿಕೆ ನೀಡಬಾರದಿತ್ತು ಎಂದು ಕೆಲವು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಾರೆ. ಅದರಂತೆಯೆ ಶಿವಕುಮಾರ್‌ ಅವರ ಹೇಳಿಕೆಯನ್ನು ಮಾಜಿ ಸಂಸದೆ ರಮ್ಯಾ ವಿರೋಧಿಸಿದ್ದರು.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ರಮ್ಯಾ ಅವರು, “ಬೇರೆ ಬೇರೆ ಪಕ್ಷದಲ್ಲಿ ಇರುವವರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ. ಅಷ್ಟೆ ಅಲ್ಲದೆ ಬೇರೆ ಪಕ್ಷದಲ್ಲಿ ಇರುವ ಕುಟುಂಬಗಳ ನಡುವೆ ಮದುವೆಯೂ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ. ಪಾಟೀಲ್ ಬಗ್ಗೆ ಹೀಗೆ ಹೇಳಿದ್ದು ನನಗೆ ಆಶ್ಚರ್ಯವಾಗಿದೆ. ಒಂದೇ ಪಕ್ಷವಾಗಿ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸಬೇಕಲ್ಲವೇ?” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಕೆಲವು ನಾಯಕರು ಮತ್ತು ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿ, ಅವರನ್ನು ಟ್ರೋಲ್ ಮಾಡಿತ್ತು. ಈ ರೀತಿ ದಾಳಿ ಮಾಡಲು ಸ್ವತಃ ರಾಜ್ಯ ಕಾಂಗ್ರೆಸ್‌ ‘ಕಚೇರಿ’ಯೆ ಕೇಳಿಕೊಂಡಿದೆ ಎಂದು ರಮ್ಯ ಆರೋಪಿಸಿದ್ದಾರೆ. ಜೊತೆಗೆ ‘ಕಚೇರಿ’ ಎಂದರೆ, ‘ಡಿ.ಕೆ. ಶಿವಕುಮಾರ್‌‌ ನಾಯಕತ್ವದ ರಾಜ್ಯ ಕಾಂಗ್ರೆಸ್‌’ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ದ ಕಾಂಗ್ರೆಸ್‌ ಐಟಿ ಸೆಲ್ ರಚಿಸಿದೆ ಎನ್ನಲಾಗಿರುವ ಕೆಲವು ಸಂದೇಶಗಳನ್ನು ಸ್ಕ್ರೀನ್‌ ಶಾರ್ಟ್‌ಗಳನ್ನು ರಮ್ಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಡಿಕೆಶಿ ಆಫೀಸ್‌ ಇಂದ ಬಂದಿದೆ ಎನ್ನಲಾಗಿರುವ ರಮ್ಯಾ ಹಂಚಿಕೊಂಡಿರುವ ಸ್ಕ್ರೀನ್‌ಶಾರ್ಟ್

ಕಾಂಗ್ರೆಸ್‌ ಪಕ್ಷದಲ್ಲಿ ಮೇಲೇರಲು ಡಿ.ಕೆ. ಶಿವಕುಮಾರ್‌ ಅವರು ಅವಕಾಶ ನೀಡಿದ್ದಾರೆ ಎಂಬ, ಸಂದೇಶವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಮ್ಯಾ, “ನನಗೆ ಅವಕಾಶಗಳನ್ನು ನೀಡಿದವರು ಮತ್ತು ನನ್ನ ಬೆಂಬಲಕ್ಕೆ ನಿಂತವರು ಯಾರಾದರೂ ಇದ್ದರೆ ಅದು ರಾಹುಲ್‌ಗಾಂಧಿ ಮಾತ್ರ. ಉಳಿದಂತೆ ನನಗೆ ಅವಕಾಶಗಳನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವವರು ಅವಕಾಶವಾದಿ ಆಗಿದ್ದಾರೆ. ಈ ಅವಕಾಶವಾದಿ ನನ್ನ ಬೆನ್ನಿಗೆ ಚೂರಿ ಹಾಕಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ನೀವು ಟಿವಿಯಲ್ಲಿ ನೋಡುವ ಎಲ್ಲವೂ ಅವರ ಮೋಸಗೊಳಿಸುವ ಮನಸ್ಸನ್ನು ಮರೆಮಾಚುವ ಪ್ರಹಸನವಾಗಿದೆ” ಎಂದು ಅವರು ಡಿಕೆ ಶಿವಕುಮಾರ್‌ ಅವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

“ನಾನು ಪಕ್ಷವನ್ನು ತ್ಯಜಿಸಿದ ನಂತರ, ‘ಕಾಂಗ್ರೆಸ್‌ಗೆ 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿ ಓಡಿಹೋದಳು’ ಎಂಬ ಸುದ್ದಿ ಮುಖ್ಯವಾಗಿ ಕನ್ನಡ ವಾಹಿನಿಗಳಲ್ಲಿ ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ವಂಚನೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ “ನಾನು ಮೌನವಾಗಿರುವುದು ನನ್ನ ತಪ್ಪು. ದಯವಿಟ್ಟು ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ಈ ಬಗ್ಗೆ ಮಾಧ್ಯಮಗಳೊಂದಿಗೆ ಸ್ಪಷ್ಟಪಡಿಸಿ. ಇದು ನೀವು ನನಗಾಗಿ ಮಾಡಬಹುದಾದ ಕನಿಷ್ಠ ಕೆಲಸ. ನನಗೆ ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ” ಎಂದು ರಮ್ಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ಒಳ್ಳೇಯದು

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...