Homeಅಂಕಣಗಳುಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

- Advertisement -
- Advertisement -

’ಎರಡೂವರೆ ಸಾವಿರ ಕೋಟಿ ಕೊಟ್ಟರೆ ನಿಮ್ಮನ್ನ ಮುಖ್ಯಮಂತ್ರಿ ಮಾಡುತ್ತೇವೆ’ ಎಂದು ದೆಹಲಿಯಿಂದ ಮಧ್ಯವರ್ತಿಗಳು ಬಂದಿದ್ದರೆಂದು ನಂಬಲನರ್ಹವಾದ, ಆದರೆ ಸದ್ಯದ ಬಿಜೆಪಿ ನೋಡಿದರೆ ನಂಬಬಹುದಾದ ಬಾಂಬನ್ನು ವಿಜಯಪುರದ ಯತ್ನಾಳ್ ಬಿಜೆಪಿ ಮೇಲೆ ಎಸೆದಿದ್ದಾರಲ್ಲಾ. ಕೂಡಲೇ ಆ ಪಾರ್ಟಿಯ ಅಧ್ಯಕ್ಷ ಕಟೀಲು ಯಕ್ಷಗಾನದ ಮಾತುಗಳನ್ನು ನೆನಪಿಸುವಂತೆ, ಯತ್ನಾಳ್ ಮಾತಿಗೂ ಬಿಜೆಪಿಗೂ ಸಂಬಂಧವಿಲ್ಲವೆಂದು ಹಾಸ್ಯ ಮಾಡಿದ್ದಾರಲ್ಲಾ. ಹಾಗದರೆ ಯತ್ನಾಳ್ ಯಾವ ಪಾರ್ಟಿಯಲ್ಲಿದ್ದಾರೆ? ದೆಹಲಿಯಿಂದ ಬಂದ ದಲ್ಲಾಳಿಗಳು ನಿಮ್ಮನ್ನ ಜೆಡಿಎಸ್‌ನಿಂದ ಮುಖ್ಯಮಂತ್ರಿ ಮಾಡುತ್ತೇವೆ ಅಥವಾ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಮಾಡುತ್ತೇವೆ ಎಂದಿದ್ದರೆ ಯತ್ನಾಳ್ ಮಾತಿಗೂ ನಮ್ಮ ಪಾರ್ಟಿಗೂ ಸಂಬಂಧವಿಲ್ಲ ಅನ್ನಬಹುದಿತ್ತು. ಇದಕ್ಕಿಂತ ತಮಾಷೆಯ ಮಾತ್ಯಾವುದೆಂದರೆ ಅಷ್ಟು ಹಣವನ್ನು ಹೇಗೆ ಇಡುವುದು, ಸಂಗ್ರಹಿಸುವುದು ಎಂಬ ದೂಡ್ಡ ಪ್ರಶ್ನೆ ಯತ್ನಾಳ್‌ರಿಂದ ಹೊರಬಿದ್ದಿದೆ. ನುರಿತ ರಾಜಕಾರಣಿಗಳ ಪ್ರಕಾರ 2500 ಸಾವಿರ ಕೋಟಿ ವಸೂಲಿ ಹಲವಾರು ಕಂತಿನಿಂದ ಸಂದಾಯವಾಗುತ್ತದೆ. ಪಿ.ವಿ ನರಸಿಂಹರಾಯ ವಿಶ್ವಾಸ ಮತ ಗಳಿಸಲು ಕರ್ನಾಟಕದಿಂದ ತರಿಸಿಕೂಂಡ ಹಣದ ಬಗ್ಗೆ ಕೇಳಿದ್ದರೆ ಯತ್ನಾಳ್‌ಗೆ ಉತ್ತರ ಸಿಗುತ್ತಿತ್ತಂತಲ್ಲಾ ಥೂತ್ತೇರಿ.

******

ಯತ್ನಾಳರ ಮಾತಿಗೆ ಮತ್ತೂಂದು ಕುಚ್ಯೋದ್ಯದ ಸಾಕ್ಷಿ ಒದಗಿಸುವುದಾದರೆ, ಸರ್ಕಾರಿ ಹುದ್ದೆ ನೀಡಲು ಸರಕಾರದ ಕೆಲವು ಪ್ರಮುಖರಿಂದಲೇ ಕೋಟಿಕೋಟಿ ಹಣ ಸಂಗ್ರಹ ಮಾಡಿದ ಹಗರಣ ಇಡೀ ಕರ್ನಾಟಕವನ್ನೇ ಅಲ್ಲೋಲ ಕಲ್ಲೋಲ ಮಾಡಿದೆಯಂತಲ್ಲಾ. ಈ ಸಂದರ್ಭದಲ್ಲಿ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ, ಹಿಂದಿ ಸಿನಿಮಾದಲ್ಲಿ ಸಮುದ್ರ ದಡದಲ್ಲಿ ಹೆಲಿಕಾಪ್ಟರಲ್ಲಿ ಇಳಿಯುವ ಡಾನ್ ಒಬ್ಬ, ಮತ್ತೊಂದು ಕಡೆಯಿಂದ ಬಂದವನಿಂದ ಸೂಟ್‌ಕೇಸ್ ಪಡೆದು ಮತ್ತೆ ಹೆಲಿಕಾಪ್ಟರ್ ಹತ್ತಿ ಮಾಯವಾದ ದೃಶ್ಯವನ್ನ ನೆನಪಿಸಿದರಂತಲ್ಲಾ. ಕರ್ನಾಟಕದ ಹಗರಣದ ಬಗ್ಗೆ ಒಂದಾದರೂ ಮಾತನಾಡಿದ್ದರೆ ಶಾ ಭೇಟಿ ಸಂಶಯಕ್ಕೊಳಪಡುತ್ತಿರಲಿಲ್ಲವೆಂಬುದು
ಒಂದಾಣಿಯಷ್ಟು ಮಾನವನ್ನು ಇನ್ನೂ ಉಳಿಸಿಕೂಂಡಿರುವ ಬಿಜೆಪಿ ಹಿರಿಯರ ಮಾತಾಗಿರುವಾಗಲೆ, ಜೆಡಿಎಸ್‌ನ ಕುಮಾರಸ್ವಾಮಿಯವರು ಪಿಎಸ್‌ಐ ನೇಮಕಾತಿ ಅವ್ಯವಹಾರದ ಕಿಂಗ್‌ಪಿನ್ ಯಾರೆಂದು ನಾನು ಹೇಳಿದರೆ ಕ್ಷಣಮಾತ್ರದಲ್ಲಿ ಬಾಬರಿ ಮಸೀದಿ ಉರುಳಿಸಿದಂಗೆ ಬಿಜೆಪಿ ಸರಕಾರ ಉರುಳಿಹೋಗುತ್ತದೆ ಎಂದುಬಿಟ್ಟಿದ್ದಾರಲ್ಲಾ. ಆದರೆ ಕುಮಾರಣ್ಣ ಎಂದಿನಂತೆ ಕಿಂಗ್‌ಪಿನ್ ಹೆಸರೇಳಲ್ಲ, ಕೇಳಿದರೆ ಸಮಯ ಬಂದಾಗ ಹೇಳುತ್ತೇನೆ ಎನ್ನುತ್ತಾರೆ. ಆ ಸಮಯ ಬರುವುದು ಸರಕಾರದ ಅವಧಿ ಮುಗಿದ ಮೇಲೆ, ಬಹುಶಃ ಚುನಾವಣಾ ಭಾಷಣದಲ್ಲಿ ಅಥವ ಅದೂ ಮುಗಿದ ಮೇಲೆ ಬರಬಹುದು. ಆದ್ದರಿಂದ ಕುಮಾರಣ್ಣನ ಕಿಂಗ್‌ಪಿನ್ ಬೆದರಿಕೆಗೆ ಯಾರೂ ಹೆದರಿಲ್ಲವಂತಲ್ಲಾ ಥೂತ್ತೇರಿ

ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ | Naanu gauri

******

ಯತ್ನಾಳ್ ಆರೋಪಕ್ಕೆ ಎಡೂರಪ್ಪನವರ ಮಗ ಎಗರಿಬಿದ್ದರಂತಲ್ಲಾ. ಅಲ್ಲದೆ, ಆಡಳಿತ ಮತ್ತು ವಿರೋಧ ಪಕ್ಷದ ಮಾತಿಗೆ ಮಣಿದು ಸದ್ಯದ ಹಗರಣಗಳಿಂದ ಕರ್ನಾಟಕದ ಗಮನವನ್ನು ಡೈವರ್ಟು ಮಾಡಲು ಸರಕಾರ ಯತ್ನಾಳ್ ಹೇಳಿಕೆಯನ್ನು ತನಿಖೆ ಮಾಡಲು ಆಯೋಗವೊಂದು ರಚನೆಯಾದರೆ, ಅದರ ಮುಂದೆ ಹಾಜರಾಗಿ ಹೇಳಿಕೆ ಕೊಡುವುದಕ್ಕೆ ಕಿಂಚಿತ್ತೂ ಅಂಜಿಕೆ ಯತ್ನಾಳ್‌ರಿಗಿಲ್ಲಾವಂತಲ್ಲಾ. ಒಂದು ವೇಳೆ ತನಿಖಾ ತಂಡ ರಚನೆಗೂಂಡು ವಿಜಯಪುರಕ್ಕೆ ಬಂದು ಎಮ್ಮೆ ಕೊಟ್ಟಿಗೆಯಲ್ಲಿ ಹಾಲಿಂಡುತ್ತಿರುವ ಯತ್ನಾಳರನ್ನ ಹಿಗ್ಗಾಮುಗ್ಗಾ ಪ್ರಶ್ನಿಸಿತು ಅನ್ನಿ ಆಗ,

“ತಮ್ಮ ಹೆಸರೇನ್ರಿ?”.

“ಬಸನಗೌಡ ಪಾಟೀಲ್ ಯತ್ನಾಳ್ ಅಂತ, ಯಮ್ಮಿ ಬೇಕಿತ್ತೇನ್ರಿ?”.

“ಇಲ್ಲ”.

“ಮತ್ತ ಕ್ವಾಣ ಬೇಕಿತ್ತೆನ?”.

“ಇಲ್ಲ”.

“ಗಬ್ಬದ ಯಮ್ಮಿ ಬೇಕಿದ್ರ ನೋಡ್ರಿ, ಅದೈತಿ. ಲಕ್ಷದ ಮ್ಯಾಲಾಕ್ಯತಿ. ಒಂದ ಹೂತ್ತಿಗೆ ಹತ್ತ ಲೀಟ್ರು ಹಾಲು ಕರಿತೈತೆ. ಆಂದ್ರ ದಿನ ಇಪತ್ತ ಲೀಟ್ರು. ಒಂದು ಲೀಟ್ರು ಹಾಲು ಮುವ್ವತ್ತು ರೂಪಾಯಂದ್ರ ಇಪ್ಪತ್ತು ಇಂಟು ಮೂವ್ವತ್ತು ಏಟಾತು ಮತ್ತ ಡೈರಿ ಹಾಲಿಗ ಲೀಟ್ರಗ ನಲವತ್ರ ಮಟ ಐತಿ”.

“ರೀ ನಾವು ಹಾಲಿನ ವ್ಯಾಪಾರದೊರಲ್ಲ”.

“ಮತ್ತ ಯಾರಂತ ಹೇಳ್ರಿ ಲಗೂನ, ಯಮ್ಮಿಗೆ ಹಿಂಡಿ ಹಾಕಬೇಕು”.

“ನಾವು ತನಿಖಾಧಿಕಾರಿಗಳು”.

“ದನ, ಯಮ್ಮಿ, ಕೊಟಗಿ ಹಿಂಡಿ ತನಿಖ ಮಾಡುವುರೇನು”.

“ನಿಮ್ಮನ್ನೆ ತನಿಖೆ ಮಾಡಕ್ಕೆ ಬಂದಿದ್ದೀವಿ”.

“ನನ್ನನ್ನು ತನಿಖೆ ಮಾಡ್ತಿರೇನು, ಬಪ್ಪರ ಮಕ್ಕಳ, ಮಾಡ್ರಲ”.

“ನಾವು ಸಿಐಡಿ ಅಧಿಕಾರಿಗಳು”.

“ನನಗ ಗುರುತಿಲ್ಲೇನು, ಏನ ತನಿಖಿ ಮಾಡುವುರದಿರಿ ಹೇಳ್ರಲ”.

“ನಿಮ್ಮನ್ನ ಮುಖ್ಯಮಂತ್ರಿ ಮಾಡ್ತಿವಿ. ಎರಡೂವರೆ ಸಾವಿರ ಕೋಟಿ ಕೂಡಿ ಅಂತ ನಿಮ್ಮನ್ನ ಕೇಳಿದ್ರ?”

“ಹೌದ್ರಿ”.

“ಯಾರವುರು?”.

“ಯಾರಿಗೊತ್ತರಿ”.

“ಎಲ್ಲಿಂದ ಬಂದಿದ್ರು?”.

“ಡೆಲ್ಲಿಯಿಂದ ಅಂತ ಹೇಳಿದ್ರು”.

“ಹೆಸರೇನವುರದು”.

“ಗೊತ್ತಿಲ್ರಿ”.

“ನಿಮ್ಮತ್ರಕೇ ಯಾಕೆ ಬಂದ್ರು?”.

“ನಾನು ವಾಜಪೇಯಿ ಸಂಪುಟದಾಗ ಮಂತ್ರಿಯಾಗಿದ್ನಿ. ನಾನು ಎತ್ತರಕ್ಕೆ ಕೆಂಪಗೆ ಸಿಂದೂರ ಲಕ್ಷ್ಮಣನಂಗಿದ್ದಿನಿ. ಅದೂ ಅಲ್ದೆ ಹಿಂದೂವಾದಿ ಭಾಷಣಕಾರ. ಬಿಜಾಪುರದ ಸುಲ್ತಾನರ ನಾಡಿನಿಂದ ಬಂದವ. ನನ್ನ ನೋಡಿದ್ರೆ ಸಾಬರಿಗೆ ಅಂಜಿಕಿ ಬರತೈತಿ. ನಾನು ಕೇಂದ್ರ ಮಂತ್ರಿಯಾಗಕ್ಕೆ ಇವೆಲ್ಲ ಕಾರಣದಾವು. ಅಂಗ ರಾಜ್ಯದ ಮುಖ್ಯಮಂತ್ರಿಯಾಗಕ್ಕು ಬೇಷದಿನಿ ಅಂತ ಯಾರೊ ಕೇಳಿಕೂಂಡು ಬಂದಿದ್ರು”.

“ಏನು ಕೇಳಿದ್ರು?”

“ನಿಮ್ಮನ್ನ ರಾಜ್ಯದ ಮುಖ್ಯಮಂತ್ರಿ ಮಾಡ್ತಿವಿ ಅಂದ್ರು”.

“ಅದಕೆ ನೀವೇನೇಳಿದ್ರಿ?”.

“ಮಾಡ್ರಲ ಅಂದ್ನಿ”.

“ಅದಕವುರೇನೇಳಿದ್ರು?”.

“ಎರಡೂವರೆ ಸಾವಿರ ಕೋಟಿ ಕೂಡಿ ಅಂದ್ರು.

“ಅದಕ್ಕೆ ನೀವೇನಂದ್ರಿ?”.

“ಅಲ್ಲಲೇ ಮಕ್ಕಳ ಎರಡೂವರೆ ಸಾವಿರ ಕೋಟಿ ಅಂದ್ರೆ ಏನು ಹುಣುಸಿ ಪಿಕ್ಕ ಅನಕೊಂಡಿರೇನು? ಅಷ್ಟು ರ್‍ವಕ್ಕ ಯಂಗ ತುಗಂಡೋಕ್ಕಿ? ಎಲ್ಲಿ ಮಡಗತಿರೀ? ಗೋದಾಮೆಲೆ ಸಿಕ್ಕಿಬಿದ್ರ ಯಾವ ರ್‍ವಕ್ಕ ಅಂತ ಹೇಳತಿ. ಯಾರದು ಅಂತ ಹೇಳತಿರಿ? ಅಂತ ಪ್ರಶ್ನಿ ಮ್ಯಾಲೆ ಪ್ರಶ್ನಿ ಹಾಕಿದಿನ್ರಿ. ಅವತ್ತು ಹೋದ ಮಕ್ಕಳು ಮತ್ತ ವಳ್ಳಿ ನನ್ನ ಸನೇಕ ಬರಲಿಲ್ಲರಿ. ಆ ನಂತರ ಎರಡೂವರಿ ಸಾವಿರ ಕೋಟಿ ಯಾರು ಕೊಟ್ರು, ಯಾರು ಮುಖ್ಯಮಂತ್ರಿಯಾದ್ನೊ, ನನಗೆನ ಖರಿ ಗೊತ್ತಿಲ್ರಾ ಎಂದಾಗ ಅಲ್ಲಿಗೆ ತನಿಖೆ ಮುಗಿಯಿತಂತಲ್ಲಾ.
ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...