Homeಕರ್ನಾಟಕಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

ಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಸುಗ್ರೀವಾಜ್ಞೆ ಅಥವಾ ಕಾರ್ಯಕಾರಿ ಆದೇಶದ ಮೂಲಕ ಗುರುವಾರ ಅಂಗೀಕರಿಸಿದೆ. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಸುಗ್ರೀವಾಜ್ಞೆಗೆ ಇಂದು ಮುಂಜಾನೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೊಸ ವಿವಾದಾತ್ಮಕ ಕಾನೂನನ್ನು ಆಮಿಷಗಳ ಮೂಲಕ ಅಥವಾ ಪ್ರಚೋದನೆಯ ಮೂಲಕ ಧಾರ್ಮಿಕ ಮತಾಂತರವನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪ ಮುಂದೂಡಿಕೆಯಾಗಿದ್ದರಿಂದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಅಂಗೀಕರಿಸಲು ಸುಗ್ರೀವಾಜ್ಞೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಿಂದೆ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಸೂದೆಯನ್ನು ಆರಂಭದಲ್ಲಿ 2021ರ ಡಿಸೆಂಬರ್ 23 ರಂದು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಆದರೆ ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಸಂಖ್ಯಾಬಲದ ಕೊರತೆ ಎದುರಾಗಿದ್ದರಿಂದ ಅದನ್ನು ಮಂಡಿಸಿರಲಿಲ್ಲ.

ಇದನ್ನೂ ಓದಿ: ಯುಪಿ: ಅಂತರ್ಧರ್ಮೀಯ ವಿವಾಹ ತಡೆದ ಹಿಂದೂ ಯುವ ವಾಹಿನಿ; ಯುವಕನ ವಿರುದ್ಧವೆ ‘ಮತಾಂತರ ಕಾನೂನಿ’ನ ಅಡಿಯಲ್ಲಿ ಪ್ರಕರಣ ದಾಖಲು

ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಬಿಜೆಪಿ ಸಂಖ್ಯಾಬಲ ಹೊಂದಿದ್ದರೂ, ಕಾರ್ಯಕಾರಿ ಆದೇಶದ ಮೂಲಕ ಕಾನೂನು ತರಲು ಸರ್ಕಾರ ಆದ್ಯತೆ ನೀಡಿದೆ ಎಂದು ಮೂಲಗಳು ಸೂಚಿಸಿವೆ.

ಪ್ರಸ್ತಾವಿತ ಕಾನೂನನ್ನು ತೀವ್ರವಾಗಿ ವಿರೋಧಿಸಿದ ಕಾಂಗ್ರೆಸ್, ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯನ್ನು ಆಚರಿಸಲು, ಬೋಧಿಸಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ನೀಡುತ್ತದೆ. ಧಾರ್ಮಿಕ ಮತಾಂತರವನ್ನು ನಿಷೇಧಿಸುವ ಯಾವುದೇ ಕಾನೂನು ಸಂವಿಧಾನವನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ.

ಪ್ರಸ್ತಾವಿತ ಕಾನೂನು “ಆರ್‌ಎಸ್‌ಎಸ್‌ನ ಬುದ್ಧಿಮತ್ತೆ” ಮತ್ತು “ರಾಜಕೀಯ ನಡೆ” ಎಂದು ಬಣ್ಣಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಲವಂತದ ಮತಾಂತರದ ವಿರುದ್ಧ ಈಗಾಗಲೇ ಕಾನೂನು ಇದೆ ಎಂದು ಸೂಚಿಸಿದ್ದರು.

ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಂತಹ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಬಲವಂತದ ಧಾರ್ಮಿಕ ಮತಾಂತರಗಳನ್ನು ತಡೆಯಲು ಕಾನೂನುಗಳನ್ನು ಹೊಂದಿದೆ. ರಾಜ್ಯವು ಈ ಕಾನೂನನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಬೊಮ್ಮಾಯಿ ಕಳೆದ ವರ್ಷ ಹೇಳಿದ್ದರು.

“ಆಮಿಷದ ಮತಾಂತರಗಳು ಅಲ್ಲಿ ಇಲ್ಲಿ ನಡೆಯುತ್ತಿವೆ. ಪ್ರಚೋದನೆ ಅಥವಾ ಬಲವಂತದ ಮೂಲಕ ಯಾವುದೇ ಧಾರ್ಮಿಕ ಮತಾಂತರಕ್ಕೆ ಅವಕಾಶ ನೀಡದಂತೆ ನಾನು ಒಂದೆರಡು ದಿನಗಳ ಹಿಂದೆ ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೇನೆ, ಏಕೆಂದರೆ ಇದು ಕಾನೂನುಬಾಹಿರವಾಗಿದೆ” ಎಂದು ಬೊಮ್ಮಾಯಿ ಅಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...